ನವದೆಹಲಿ:ಗಣಿಗಾರಿಕೆ ಮೇಲಿನ ರಾಯಧನಕ್ಕೆ(ರಾಯಲ್ಟಿ ತೆರಿಗೆ) ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗುರುವಾರ(ಜುಲೈ 25) ಮಹತ್ವದ ತೀರ್ಪು ನೀಡಿದೆ. ಸಂವಿಧಾನದ ಅಡಿಯಲ್ಲಿ ಗಣಿಗಳು ಮತ್ತು ಖನಿಜಗಳನ್ನು ಹೊಂದಿರುವ ಭೂಮಿಯ ಮೇಲೆ ತೆರಿಗೆಯನ್ನು ವಿಧಿಸುವ ಹಕ್ಕು ರಾಜ್ಯಗಳಿಗೆ ಇದೆ ಎಂದು ನ್ಯಾಯಾಲಯ ಹೇಳಿದೆ.ಖನಿಜಗಳ ಮೇಲಿನ ರಾಯಧನವನ್ನು ತೆರಿಗೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಇದನ್ನು ಓದಿ:ನೀಟ್ ಮರುಪರೀಕ್ಷೆ ನಡೆಸಲು ಸುಪ್ರೀಂ ನಿರಾಕರಣೆ; ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಹೇಳಿದ್ದಿಷ್ಟು
ನ್ಯಾಯಾಲಯದ ಸಾಂವಿಧಾನಿಕ ಪೀಠವು 8:1 ಬಹುಮತದ ತೀರ್ಪಿನಲ್ಲಿ ಸಂವಿಧಾನದ ನಿಬಂಧನೆಗಳ ಅಡಿಯಲ್ಲಿ ಖನಿಜ ಹಕ್ಕುಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರವನ್ನು ಸಂಸತ್ತು ಹೊಂದಿಲ್ಲ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಒಂಬತ್ತು ನ್ಯಾಯಾಧೀಶರ ಪೀಠವು 8-1 ಬಹುಮತದಿಂದ ತನ್ನದೇ ಆದ ಹಲವು ಹಿಂದಿನ ನಿರ್ಧಾರಗಳನ್ನು ರದ್ದುಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ತಮ್ಮ ಮತ್ತು ಇತರ 7 ನ್ಯಾಯಾಧೀಶರ ಪರವಾಗಿ ತೀರ್ಪು ನೀಡುವಾಗ, ಸಂವಿಧಾನದ ಪ್ರಕಾರ ಖನಿಜಗಳ ಮೇಲೆ ತೆರಿಗೆ ವಿಧಿಸುವ ಹಕ್ಕು ಕೇಂದ್ರ ಅಥವಾ ಸಂಸತ್ತಿಗೆ ಇಲ್ಲ ಎಂದು ಹೇಳಿದರು. ಸಂವಿಧಾನದ ಪಟ್ಟಿ 2ರ ನಮೂದು 50ರ ಅಡಿಯಲ್ಲಿ ನ್ಯಾಯಾಲಯವು ಈ ನಿಬಂಧನೆಯನ್ನು ನೀಡಿದೆ. ಖನಿಜಗಳ ಮೇಲಿನ ತೆರಿಗೆಯನ್ನು ಇದರಲ್ಲಿ ವಿವರಿಸಲಾಗಿದೆ ಎಂದು ಹೇಳಿದರು.
ಸಿಜೆಐ ಚಂದ್ರಚೂಡ್ ನೇತೃತ್ವದ ಒಂಬತ್ತು ನ್ಯಾಯಾಧೀಶರ ಪೀಠದಲ್ಲಿ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್, ಎಎಸ್ ಓಕಾ, ಜೆಬಿ ಪರ್ದಿವಾಲಾ, ಮನೋಜ್ ಮಿಶ್ರಾ, ಉಜ್ಜಲ್ ಭುಯಾನ್, ಸತೀಶ್ ಚಂದ್ರ ಶರ್ಮಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರು ಬಹುಮತದ ಅಭಿಪ್ರಾಯವನ್ನು ಒಪ್ಪಿಕೊಂಡರು. ಬಿವಿ ನಾಗರತ್ನ ಅವರು ಖನಿಜಗಳ ಮೇಲೆ ಪಾವತಿಸಬೇಕಾದ ರಾಯಲ್ಟಿ ತೆರಿಗೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಭಿನ್ನಾಭಿಪ್ರಾಯದ ತೀರ್ಪು ನೀಡಿದ್ದಾರೆ ಎಂದು ಸಿಜೆಐ ಡಿವೈ ಚಂದ್ರಚೂಡ್ ಹೇಳಿದರು.
ಸುಪ್ರೀಂ ಕೋರ್ಟ್‌ನ ಈ ನಿರ್ಧಾರವು ಒಡಿಶಾ, ಜಾರ್ಖಂಡ್, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ ಮತ್ತು ರಾಜಸ್ಥಾನದಂತಹ ಖನಿಜ ಸಮೃದ್ಧ ರಾಜ್ಯಗಳಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಈಗ ಈ ವಿಷಯವು ಬುಧವಾರ ಮತ್ತೆ ವಿಚಾರಣೆಗೆ ಬರಲಿದ್ದು, ಈ ನಿರ್ಧಾರವನ್ನು ಹಿಂದಿನಿಂದ ಜಾರಿಗೆ ತರಬೇಕೆ ಅಥವಾ ನಿರ್ಧಾರದ ನಂತರವೇ ಎಂದು ನ್ಯಾಯಾಲಯವು ಪರಿಗಣಿಸುತ್ತದೆ.
ತಮ್ಮ ತೀರ್ಪಿನಲ್ಲಿ ಮುಖ್ಯ ನ್ಯಾಯಮೂರ್ತಿಗಳು 1989ರಲ್ಲಿ ನೀಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ತಪ್ಪು ಎಂದಿದ್ದಾರೆ. ಆ ತೀರ್ಪಿನಲ್ಲಿ ಖನಿಜಗಳ ಮೇಲಿನ ರಾಯಧನವು ತೆರಿಗೆ ಎಂದು ನ್ಯಾಯಾಲಯ ಹೇಳಿತ್ತು. (ಏಜೆನ್ಸೀಸ್​​)
ಕಾಲ್​ ಸೆಕ್ಯುರಿಟಿ.. ಇವರನ್ನು ಹೊರಗಾಕಿಸಿ; ವಕೀಲರ ವಿರುದ್ಧ ಸಿಜೆಐ ಡಿವೈ ಚಂದ್ರಚೂಡ್ ಸಿಟ್ಟಾಗಿದ್ದೇಕೆ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × 5 =
Remember me
