ನವದೆಹಲಿ:ಗರ್ಭದಲ್ಲಿರುವ ಮಕ್ಕಳಿಗೆ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಕಲಿಸುವ ಉದ್ದೇಶದಿಂದ ಗರ್ಭಿಣಿಯರಿಗೆ ‘ಗರ್ಭ ಸಂಸ್ಕಾರ’ ಎಂಬ ಅಭಿಯಾನವನ್ನು ಪ್ರಾರಂಭಿಸಿದೆ ಆರ್​ಎಸ್​ಎಸ್​ನ ಅಂಗಸಂಸ್ಥೆಯಾದ ಸಂವರ್ಧಿನಿ ನ್ಯಾಸ್​ನ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮಾಧುರಿ ಮರಾಠೆ ಹೇಳಿದ್ದಾರೆ.
ಗರ್ಭದಲ್ಲಿರುವ ಶಿಶುಗಳಿಗೆ ಸಾಂಸ್ಕೃತಿಕ ಮೌಲ್ಯಗಳನ್ನು ನೀಡಲು ಸ್ತ್ರೀರೋಗತಜ್ಞರು, ಆಯುರ್ವೇದ ವೈದ್ಯರು ಮತ್ತು ಯೋಗ ತರಬೇತುದಾರರೊಂದಿಗೆ ಈ ಅಭಿಯಾನ ಕೈಗೊಂಡಿದೆ. ಈ ಮೂಲಕ ಗರ್ಭಿಣಿಯರು ಗೀತಾ ಪಠಣ, ರಾಮಾಯಣ ಮತ್ತು ಯೋಗಾಭ್ಯಾಸ ಮಾಡಲು ಉತ್ತೇಜಿಸಲಾಗುತ್ತದೆ.
‘ಗರ್ಭ ಸಂಸ್ಕಾರ’ ಅಭಿಯಾನವು ಗರ್ಭಾವಸ್ಥೆಯಿಂದ ಮಗುವಿಗೆ ಪೂರ್ಣಗೊಳ್ಳುವ ತನಕ ಇರಲಿದೆ. ಭಗವದ್ಗೀತಾ ಶ್ಲೋಕಗಳ ಪಠಣ, ರಾಮಾಯಣ ಪಠಣಗಳಿಗೆ ಒತ್ತು ನೀಡಲಾಗುವುದು. ಇದರಿಂದ ಮಗುವಿಗೆ ಕನಿಷ್ಠ 500 ಪದಗಳನ್ನು ಕಲಿತುಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಾಧುರಿ ಮರಾಠೆ ಹೇಳಿದ್ದಾರೆ.
ಆರ್‌ಎಸ್‌ಎಸ್‌ನ ಮಹಿಳಾ ಅಂಗಸಂಸ್ಥೆಯಾದ ರಾಷ್ಟ್ರ ಸೇವಿಕಾ ಸಮಿತಿಯ ಸಂವರ್ಧಿನಿ ನ್ಯಾಸ್, ಈ ಅಭಿಯಾನದ ಮೂಲಕ ಕನಿಷ್ಠ 1,000 ಗರ್ಭಿಣಿಯರನ್ನು ತಲುಪುವ ಉದ್ಧೇಶ ಹೊಂದಿದೆ. ಈ ಅಭಿಯಾನದ ಭಾಗವಾಗಿ ನಿನ್ನೆ (ಮಾ.5) ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಕಾರ್ಯಾಗಾರವನ್ನು ನಡೆಸಿದೆ. ಈ ಕಾರ್ಯಾಗಾರದಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆ ಸೇರಿದಂತೆ ಹಲವಾರು ಸ್ತ್ರೀರೋಗ ತಜ್ಞರು ಭಾಗವಹಿಸಿದ್ದರು ಎಂದು ವರದಿಯಾಗಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 19 =
Remember me
