ಬೆಂಗಳೂರು:ರಾಜ್ಯವನ್ನು ಕಂಗೆಡಿಸಿ ವಿಕೋಪಕ್ಕೆ ಹೋಗಿದ್ದ ಕರೊನಾ ಪ್ರಕರಣಗಳ ಸಂಖ್ಯೆ ಇದೀಗ ಕೆಲವು ದಿನಗಳಿಂದ ಗಣನೀಯ ಇಳಿಕೆಯನ್ನು ಕಂಡಿದೆ. ಮಾತ್ರವಲ್ಲ, ಕೋವಿಡ್​ನಿಂದ ಕಂಗಾಲಾಗಿದ್ದ ಜನರು ಹಾಗೂ ಸರ್ಕಾರ ನಿರಾಳವಾಗಿದ್ದು, ಜನಜೀವನ ಬಹುತೇಕ ಸಹಜಸ್ಥಿತಿಗೆ ಮರಳುತ್ತಿದೆ.
ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡ ಕೋವಿಡ್ ಪರಿಸ್ಥಿತಿ ನಿಭಾಯಿಸಲು ವಿಧಿಸಿದ್ದ ನಿರ್ಬಂಧಗಳನ್ನು ಒಂದೊಂದಾಗಿ ತೆಗೆಯುತ್ತ ಬಂದಿದ್ದು, ಈಗ ಮತ್ತೊಂದು ನಿರ್ಬಂಧವನ್ನು ವಾಪಸ್ ಪಡೆದುಕೊಂಡಿದೆ.
ನೆರೆಯ ಗೋವಾ ಹಾಗೂ ಕೇರಳಗಳಲ್ಲಿ ಕರೊನಾ ಪ್ರಕರಣಗಳು ಅತಿಯಾಗಿ ವರದಿಯಾಗಿದ್ದರ ಹಿನ್ನೆಲೆಯಲ್ಲಿ ಆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರ ಬಳಿ ಆರ್​ಟಿಪಿಸಿಆರ್ ಟೆಸ್ಟ್​ನ​ ನೆಗೆಟಿವ್​ ವರದಿ ಇರಬೇಕು ಎಂಬ ನಿರ್ಬಂಧ ವಿಧಿಸಿತ್ತು.
ಇದನ್ನೂ ಓದಿ:ಹೊಚ್ಚ ಹೊಸ ಕಾರಿನಲ್ಲಿ ಅಂತಿಮ ಪ್ರಯಾಣ; ಇಬ್ಬರು ಸ್ನೇಹಿತರ ಬಲಿ ಪಡೆದವನಿಗೆ ಕೊನೆಗೂ ಜೈಲು ಶಿಕ್ಷೆ
ಆದರೆ ಕೋವಿಡ್​ ಗಣನೀಯವಾಗಿ ಕಡಿಮೆ ಆಗಿರುವುದರಿಂದ ಗೋವಾ ಮತ್ತು ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸಲು ಆರ್​ಟಿಪಿಸಿಆರ್​ ಟೆಸ್ಟ್​ ನೆಗೆಟಿವ್ ವರದಿ ಬೇಕಾಗಿಲ್ಲ ಎಂದು ಸರ್ಕಾರ ಈಗ ಸುತ್ತೋಲೆ ಹೊರಡಿಸಿದೆ. ಇದು ರಸ್ತೆ, ರೈಲು ಅಥವಾ ವಾಯುಮಾರ್ಗದ ಮೂಲಕ ಬರುವ ಎಲ್ಲ ಪ್ರಯಾಣಿಕರು ಅನ್ವಯಿಸಲಿದೆ. ಆದರೆ ಅಂಥವರು ಎರಡೂ ಡೋಸ್ ಲಸಿಕೆ ತೆಗೆದುಕೊಂಡಿರಬೇಕಾದ್ದು ಕಡ್ಡಾಯ, ಲಸಿಕೀಕರಣದ ಪ್ರಮಾಣಪತ್ರ ಇರಲೇಬೇಕು ಎಂಬುದನ್ನು ಒತ್ತಿ ಹೇಳಿದೆ. ಅಂದಹಾಗೆ ಮಹಾರಾಷ್ಟ್ರದಿಂದ ಬರುವವರಿಗೆ ಕಳೆದ ವಾರವೇ ಈ ನಿರ್ಬಂಧ ವಿನಾಯಿತಿ ನೀಡಲಾಗಿತ್ತು.

ಪದವಿ ಪರೀಕ್ಷೆ ಒಂದು ತಿಂಗಳು ಮುಂದೂಡಲು ವಿಶ್ವವಿದ್ಯಾಲಯಗಳಿಗೆ ಸೂಚನೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 20 =
Remember me
