ನವದೆಹಲಿ:ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪಕ್ಷವನ್ನು ತೊರೆದು ಬೇರೆ ಪಕ್ಷಕ್ಕೆ ಹೋಗುವುದು ಹೊಸ ವಿಷಯವೇನಲ್ಲ. ತಮ್ಮ ಪಕ್ಷದಲ್ಲಿನ ಆಂತರಿಕ ಸ್ಫೋಟದಿಂದಾಗಿ ಮತ್ತೊಂದು ಪಕ್ಷವನ್ನು ಹುಡುಕಿ ಹೋಗುವುದು ಮಾಮೂಲಾಗಿದೆ.
ಇದರ ಬಗ್ಗೆ ಇದೀಗ ಸಮೀಕ್ಷೆ ನಡೆಸಲಾಗಿದ್ದು, ಇದು ಕಾಂಗ್ರೆಸ್​ ವಲಯದಲ್ಲಿ ಭಾರಿ ಆತಂಕವನ್ನು ಸೃಷ್ಟಿ ಮಾಡಿದೆ. ಇದಕ್ಕೆ ಕಾರಣ, 2016-2020ರ ಅವಧಿಯಲ್ಲಿ ನಡೆದ ಚುನಾವಣೆಯಲ್ಲಿ 170 ಶಾಸಕರು ಕಾಂಗ್ರೆಸ್ ತೊರೆದು ಬೇರೆ ಪಕ್ಷ ಗಳನ್ನು ಸೇರಿಕೊಂಡಿದ್ದಾರೆ ಎಂದು ಈ ಸಮೀಕ್ಷೆಯಲ್ಲಿ ಹೇಳಲಾಗಿದೆ.
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಈ ಸಮೀಕ್ಷೆ ನಡೆಸಿದೆ. ಈ ಅವಧಿಯಲ್ಲಿ 170 ಕಾಂಗ್ರೆಸ್​ ಶಾಸಕರು ಪಕ್ಷ ತೊರೆದಿದ್ದರೆ, ಬಿಜೆಪಿಯನ್ನು ತೊರೆದ ಶಾಸಕರ ಸಂಖ್ಯೆ 18.
ಇದೇ ವೇಳೆ ಬಿಜೆಪಿಯ ಸಿದ್ಧಾಂತಗಳನ್ನು ಮೆಚ್ಚಿ ಆ ಪಕ್ಷಕ್ಕೆ ಸೇರಿರುವ ಶಾಸಕರ ಸಂಖ್ಯೆ 182 ಎಂದು ಈ ಸಮೀಕ್ಷೆ ಹೇಳಿದೆ. ಕಾಂಗ್ರೆಸ್​ ಮಾತ್ರವಲ್ಲದೇ ಬೇರೆ ಬೇರೆ ಪಕ್ಷಗಳಿಂದ 2016-2020ರ ಅವಧಿಯಲ್ಲಿ 182 ಮಂದಿ ಶಾಸಕರು ಬಿಜೆಪಿ ಸೇರಿದ್ದಾರೆ ಎಂದು ಇದರಲ್ಲಿ ಉಲ್ಲೇಖಿಸಲಾಗಿದೆ.
2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಲೋಕಸಭಾ ಸಂಸದರು ಬಿಜೆಪಿಯನ್ನು ತೊರೆದು ಇತರ ಪಕ್ಷಗಳಿಗೆ ಸೇರಿದ್ದರೆ, ಏಳು ರಾಜ್ಯಸಭಾ ಸಂಸದರು ಕಾಂಗ್ರೆಸ್ ತೊರೆದು 2016-2020ರ ನಡುವೆ ಚುನಾವಣೆಯಲ್ಲಿ ಸ್ಪರ್ಧಿಸಲು ಮತ್ತೊಂದು ಪಕ್ಷಕ್ಕೆ ಸೇರಿದ್ದಾರೆ ಎಂದು ವರದಿ ತಿಳಿಸಿದೆ.
ಮಧ್ಯಪ್ರದೇಶ, ಮಣಿಪುರ, ಗೋವಾ, ಅರುಣಾಚಲ ಪ್ರದೇಶ ಮತ್ತು ಕರ್ನಾಟಕ ರಾಜ್ಯ ವಿಧಾನಸಭೆಗಳಲ್ಲಿ ಇತ್ತೀಚೆಗೆ ಸರ್ಕಾರಗಳ ಪತನಕ್ಕೆ ಅವರ ಶಾಸಕರ ಪಕ್ಷಾಂತರ ಕಾರಣ ಎಂದು ವರದಿ ಹೇಳಿದೆ.
ಅಯ್ಯೋ… ಇದು ವಿಕ್ರಮ- ಬೇತಾಳ ಅಲ್ರಪ್ಪ… ಹಾಗಿದ್ರೆ ಇದೇನು ಅಂತೀರಾ? ಇಲ್ಲಿದೆ ನೋಡಿ ವಿವರ…

ಬ್ಯಾಂಕ್​ನಲ್ಲಿ ಕೆಲಸ ಇದೆಯೆ? ಇಂದೇ ಮುಗಿಸಿ… ಇಲ್ಲದಿದ್ದರೆ ನಾಲ್ಕು ದಿನ ಪರದಾಡಬೇಕಾಗುತ್ತೆ!

ಸಮುದ್ರದಲ್ಲಿ ತೇಲಿ ಬಂತು ಫುಲ್​ ಬಾಟಲ್​- ವಿದೇಶಿ ಮದ್ಯ ಎಂದು ಕುಡಿದ ಮೀನುಗಾರರು- ಮುಂದಾದದ್ದು ದುರಂತ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × one =
Remember me
