ಕೋಲ್ಕತಾ:ತಮ್ಮ ನೆಚ್ಚಿನ ಶಿಕ್ಷಕರು ಬೇರೆಡೆ ವರ್ಗಾವಣೆಯಾದರೆ ಮಕ್ಕಳು ಅಳುವುದು, ಭಾರಿ ಪ್ರಮಾಣದಲ್ಲಿ ಗಲಾಟೆ ಮಾಡುವುದು ಮಾಮೂಲು. ಆದರೆ ಇಲ್ಲಿಯ ವಿದ್ಯಾರ್ಥಿಗಳು ರೈಲನ್ನೇ ತಡೆಹಿಡಿದಿದ್ದಾರೆ!
ಕೋಲ್ಕತಾದ ಸೀಲ್ದಾಹ್ ದಕ್ಷಿಣ ವಿಭಾಗದ ಗೌರ್ದಾಹ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಇಲ್ಲಿಯ ಕ್ಯಾನಿಂಗ್‌ನಲ್ಲಿರುವ ಗೌರ್ದಾಹ್ ನಾರಾಯಣಪುರ ಅಕ್ಷಯ ವಿದ್ಯಾಮಂದಿರದ ವಿದ್ಯಾರ್ಥಿಗಳು ಇಂಥದ್ದೊಂದು ಸಾಹಸಕ್ಕೆ ಕೈ ಹಾಕಿದವರು.
ಈ ಶಾಲೆಯ ಒಟ್ಟೂ ಐದು ಶಿಕ್ಷಕರನ್ನು ಒಟ್ಟಿಗೇ ವರ್ಗಾವಣೆ ಮಾಡಿರುವುದು ಮಕ್ಕಳ ಆಕ್ರೋಶಕ್ಕೆ ಕಾರಣವಾಗಿದೆ. ಗೌರ್ದಾಹ್ ನಿಲ್ದಾಣದಲ್ಲಿ ರೈಲು ತಡೆದು ಐವರು ಶಿಕ್ಷಕರ ವರ್ಗಾವಣೆ ನಿರ್ಧಾರ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ರೈಲು ತಡೆ ಮುಂದುವರೆಸುವುದಾಗಿಯೂ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಘಟನೆಯಿಂದ ನಿಲ್ದಾಣದ ಆವರಣದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದೆ. ರೈಲ್ವೆ ಸಿಬ್ಬಂದಿ ಕೂಡ ಘಟನೆಯಿಂದ ಸುಸ್ತಾದರು!
ಈ ಕುರಿತು ಮಾತನಾಡಿದ ವಿದ್ಯಾರ್ಥಿಗಳು, ‘ನಮ್ಮ ಪ್ರದೇಶದಲ್ಲಿ ಹಲವಾರು ಶಾಲೆಗಳಿವೆ. ಪ್ರತಿ ಶಾಲೆಯಿಂದ ಒಬ್ಬ ಶಿಕ್ಷಕರನ್ನು ವರ್ಗಾವಣೆ ಮಾಡಿದರೆ ಸಮಸ್ಯೆಯಾಗುತ್ತಿರಲಿಲ್ಲ. ಆದರೆ ಒಂದು ಶಾಲೆಯಿಂದ ಐವರು ಶಿಕ್ಷಕರನ್ನು ವರ್ಗಾವಣೆ ಮಾಡುವುದರಿಂದ ನಮ್ಮ ಶಿಕ್ಷಣಕ್ಕೆ ಪೆಟ್ಟು ಬೀಳುತ್ತದೆ. ನಮ್ಮ ಶಾಲೆಯಲ್ಲಿ 11 ಮತ್ತು 12 ನೇ ತರಗತಿಯಲ್ಲಿ ಕೇವಲ 3 ಶಿಕ್ಷಕರಿದ್ದಾರೆ. ಹೀಗಾಗಿ ಕೂಡಲೇ ನಿರ್ಧಾರ ಹಿಂಪಡೆಯಬೇಕು” ಎಂದಿದ್ದಾರೆ.(ಏಜೆನ್ಸೀಸ್​)
ನನ್ನ ಶವ ಮುಟ್ಟದಂತೆ ಪತ್ನಿ, ಮಕ್ಕಳಿಗೆ ಆದೇಶಿಸಿ: ಕೋರ್ಟ್​ಗೆ ಬಂದ ಅರ್ಜಿ ನೋಡಿ ನ್ಯಾಯಮೂರ್ತಿಗಳೇ ದಂಗು!
ಸಿನಿಮಾ ಸೆಟ್​ನಲ್ಲಿ ಅವಘಡ: ಟೈಟಾನಿಕ್​ ಖ್ಯಾತಿಯ ನಟಿ ಕೇಟ್​ ಆಸ್ಪತ್ರೆಗೆ ದಾಖಲು
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:five × two =
Remember me
