ಮುಂಬೈ:ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅನಿಲ್ ದೇಶ್‌ಮುಖ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೇಶ್​ಮುಖ್​ ಅವರನ್ನು ಕಳೆದ ವರ್ಷ ನವೆಂಬರ್‌ನಲ್ಲಿ ಬಂಧಿಸಿದ್ದರು. ಈ ಪ್ರಕರಣದಲ್ಲಿ ಅವರಿಗೆ ಜಾಮೀನು ಸಿಕ್ಕಿದೆ. ಸೆಷನ್ಸ್​ ಕೋರ್ಟ್​ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ದೇಶ್​ಮುಖ್​ ಮುಂಬೈ ಹೈಕೋರ್ಟ್​ ಮೊರೆ ಹೋಗಿದ್ದರು. ಅವರಿಗೆ ಈಗ ಜಾಮೀನು ಮಂಜೂರಾಗಿದೆ.
ಇದರ ಹೊರತಾಗಿಯೂ ದೇಶ್​ಮುಖ್​ ಅವರಿಗೆ ಜೈಲೇ ಗತಿ. ಇದಕ್ಕೆ ಕಾರಣ, ಕಳೆದ ವರ್ಷ ಏಪ್ರಿಲ್‌ನಲ್ಲಿ ಇವರ ವಿರುದ್ಧ ಸಿಬಿಐ ಇನ್ನೊಂದು ಪ್ರಕರಣ ದಾಖಲಿಸಿದ್ದು, ಅದಕ್ಕೆ ಸಂಬಂಧಿಸಿದಂತೆ ಅವರು ಜೈಲಿನಲ್ಲಿ ಇದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ಕೇಸ್​ನಲ್ಲಿ ಜಾಮೀನು ಮಂಜೂರು ಆಗಿದ್ದರೂ, ಅವರು ಜೈಲಿನಿಂದ ಹೊರಕ್ಕೆ ಬರಲು ಸಾಧ್ಯವಿಲ್ಲ.
ಏನಿದು ಕೇಸ್​?ಕಳೆದ ಫೆಬ್ರವರಿ 25ರಂದು, ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಮನೆಯ ಆಂಟಿಲಿಯಾ ಹೊರಗೆ ಸ್ಫೋಟಕಗಳನ್ನು ತುಂಬಿದ ವಾಹನವು ಪತ್ತೆಯಾಗಿತ್ತು. ಈ ಕೃತ್ಯದ ಹಿಂದೆ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಹೆಸರು ಕೇಳಿಬಂದಿತ್ತು. ಇದಾದ ನಂತರ, ಮಹಾರಾಷ್ಟ್ರ ಸರ್ಕಾರವು ಆಗಿನ ಮುಂಬೈ ಪೊಲೀಸ್ ಕಮಿಷನರ್ ಪರಂಬಿರ್ ಸಿಂಗ್ ಅವರನ್ನು ವರ್ಗಾವಣೆ ಮಾಡಿತು. ಅವರನ್ನು ಗೃಹರಕ್ಷಕ ದಳದ ಡಿಜಿಯನ್ನಾಗಿ ಮಾಡಿತು.
ಅನಿಲ್ ದೇಶ್‌ಮುಖ್ 100 ಕೋಟಿ ರೂಪಾಯಿ ವಸೂಲಿ ಮಾಡಿದ್ದಾರೆ ಎಂದು ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಆರೋಪಿಸಿದ್ದರು. ಈ ಸಂಬಂಧ ಅವರು ಮಹಾರಾಷ್ಟ್ರದ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಈ ಪ್ರಕರಣ ಮುನ್ನೆಲೆಗೆ ಬಂದಿತ್ತು. ಬಳಿಕ ಈ ಆರೋಪದ ಹಿನ್ನೆಲೆಯಲ್ಲಿ ಅನಿಲ್ ದೇಶಮುಖ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಮುಂಬೈನ ಹೋಟೆಲ್‌ಗಳು ಮತ್ತು ಬಾರ್‌ಗಳಿಂದ ಪ್ರತಿ ತಿಂಗಳು 100 ಕೋಟಿ ರೂ. ಸಂಗ್ರಹಿಸುವಂತೆ ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜ್ ಅವರಿಗೆ ಅನಿಲ್ ದೇಶಮುಖ್ ನಿರ್ದೇಶನ ನೀಡಿದ್ದರು ಎಂದು ಮುಂಬೈ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಆರೋಪಿಸಿದ ನಂತರ ಸಿಬಿಐ ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿತ್ತು. ಈಗ ಈ ಕೇಸ್​ನಲ್ಲಿ ಅವರಿಗೆ ಜಾಮೀನು ಸಿಕ್ಕಿದೆ. (ಏಜೆನ್ಸೀಸ್​)
26 ಕೋಟಿ ರೂ. ನೋಟುಗಳ ಮೇಲೆ ‘ರಿಸರ್ವ್​ ಬ್ಯಾಂಕ್’​ ಬದಲು ‘ರಿವರ್ಸ್​ ಬ್ಯಾಂಕ್’​! ಕಕ್ಕಾಬಿಕ್ಕಿಯಾದ ಪೊಲೀಸರು

ಸತ್ಯನಾರಾಯಣ ಪೂಜೆ ಮಾಡಿದ್ರೂ ಸಿಗಲಿಲ್ಲ ಹೆಣ್ಣು: ಪುರೋಹಿತರ ಮೇಲೆ ಹಲ್ಲೆ; ಕಿವಿ ಕಚ್ಚಿದ ಅಪ್ಪ- ಮಗ

ಕಾಣೆಯಾಗಿದ್ದ ಬಿಜೆಪಿ ಕಾರ್ಯಕರ್ತನ ಶವ ಸ್ನೇಹಿತನ ಮನೆಯ ನೆಲದೊಳಗೆ! ದೃಶ್ಯಂ ಸಿನಿಮಾದಂತೆ ನಡೆದ ಕೊಲೆ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:ten − three =
Remember me
