ಕೀವ್​: ಮಂಗಳವಾರದಂದು (ಮಾರ್ಚ್​ 1) ಹಾವೇರಿ ಮೂಲದ ನವೀನ್,​ ಖಾರ್ಕಿವ್​ನಲ್ಲಿ ರಷ್ಯಾದ ಬಾಂಬ್​ ದಾಳಿಗೆ ಬಲಿಯಾದ ಬೆನ್ನಲ್ಲೇ ಇನ್ನೋರ್ವ ಭಾರತೀಯ ಯೂಕ್ರೇನ್​ನಲ್ಲಿ ಮೃತಪಟ್ಟಿದ್ದಾನೆ.
ಮೆಮೋರಿಯಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ವೈದ್ಯಕೀಯ ಕೋರ್ಸ್​ ಮಾಡುತ್ತಿದ್ದ ಪಂಜಾಬ್​​ ಮೂಲದ ಚಂದನ್ ಜಿಂದಾಲ್ ಎಂಬ 22 ವರ್ಷದ ಯುವಕ ಮೃತಪಟ್ಟಿದ್ದಾನೆ. ಆದರೆ ಈತನ ಸಾವಿಗೂ, ಯೂಕ್ರೇನ್​ನಲ್ಲಿ ನಡೆಯುತ್ತಿರುವ ದಾಳಿಗೂ ಸಂಬಂಧವಿಲ್ಲ ಎಂದು ಮೂಲಗಳು ಹೇಳಿವೆ.
ಚಂದನ್​ಗೆ ಇಸ್ಕೆಮಿಕ್ ಸ್ಟ್ರೋಕ್ ಆಗಿತ್ತು. ಇಸ್ಕೆಮಿಕ್ ಸ್ಟ್ರೋಕ್ ಎಂದರೆ ಮಿದುಳಿಗೆ ರಕ್ತ ಪೂರೈಕೆ ಸರಿಯಾಗಿ ಆಗದಾಗ ಉಂಟಾಗುವ ಪಾರ್ಶ್ವವಾಯು​. ಚಿಕಿತ್ಸೆಗಾಗಿ ವಿನ್ನಿಟ್ಸಿಯಾದ ಆಸ್ಪತ್ರೆಯ ತುರ್ತುಘಟಕಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಯುವಕನ ಕುಟುಂಬಸ್ಥರಿಗೆ ಈಗಾಗಲೇ ವಿಷಯ ತಿಳಿಸಲಾಗಿದ್ದು, ಮಗನ ಮೃತದೇಹ ತರಲು ಸಹಾಯ ಮಾಡುವಂತೆ ಯುವಕನ ತಂದೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದಾರೆ.
VIDEO: ಭಾರತದ ಧ್ವಜ ಹಿಡಿದು ಪ್ರಾಣ ಉಳಿಸಿಕೊಂಡ ಪಾಕಿಸ್ತಾನದ ವಿದ್ಯಾರ್ಥಿಗಳು! ಅನುಭವ ಇಲ್ಲಿದೆ ಕೇಳಿ…

‘ವಾಪಸ್​ ಕರೆಸಿಕೊಳ್ಳಿ’ ಎಂದು ಗೋಳಿಡುತ್ತಲೇ ಯೂಕ್ರೇನ್​ನಲ್ಲೂ ಭಾರತದ ವಿರುದ್ಧ ಪ್ರಚಾರ ಶುರು ಮಾಡಿದ! ಈತನ ಹಿಸ್ಟರಿ ಕೇಳಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 10 =
Remember me
