ತಿರುವನಂತಪುರ:ಬೆಂಗಳೂರಿನಲ್ಲಿ ಇಂಜಿನಿಯರ್‌ ಆಗಿ ಕೆಲಸ ಮಾಡಿಕೊಂಡಿದ್ದ ಕೇರಳದ ವ್ಯಕ್ತಿಯೊಬ್ಬ ಲಿಬಿಯಾದಲ್ಲಿ ಆತ್ಮಹತ್ಯಾ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದ್ದು, ಈ ಕುರಿತು ಉಗ್ರ ಸಂಘಟನೆಯೇ ತನ್ನ ದಾಖಲೆಯಲ್ಲಿ ಹೇಳಿಕೊಂಡಿದೆ.
ಕೇರಳದ ಕಲ್ಲಿಕೋಟೆ ನಿವಾಸಿ ಅಬು ಬಕರ್‌ ಎಂಬಾತ ಬೆಂಗಳೂರಿನ ಪ್ರತಿಷ್ಠಿತ ಕಂಪೆನಿಯೊಂದರಲ್ಲಿ ಇಂಜಿನಿಯರ್‌ ಆಗಿ ಕೆಲಸ ಮಾಡಿಕೊಂಡಿದ್ದ. ಮೂಲತಃ ಕ್ರೈಸ್ತ ಧರ್ಮಕ್ಕೆ ಸೇರಿರುವ ಈತ ಬೆಂಗಳೂರಿನಿಂದ ದುಬೈಗೆ ಹೋಗಿದ್ದ. ನಂತರ ಲಿಬಿಯಾದಲ್ಲಿ ಆತ್ಮಹತ್ಯಾ ದಾಳಿಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಈ ಕುರಿತು ಉಗ್ರ ಸಂಘಟನೆ ಐಎಸ್‌ ವಿಷಯ ತಿಳಿಸಿದ್ದು, ‘ಭಾರತದ ಒಬ್ಬ ಮೃತಪಟ್ಟಿದ್ದಾನೆ. ಈತ ಹುತಾತ್ಮ ಎಂದು ನೀವು ತಿಳಿದುಕೊಳ್ಳಬೇಕು’ ಎಂದು ಹೇಳಿದೆ. ಇದರ ಮೂಲ ಅರಸಿ ಹೋದಾಗ ಆತ ಬೆಂಗಳೂರಿನಲ್ಲಿ ಇಂಜಿನಿಯರ್‌ ಆಗಿದ್ದ ಅಬು ಬಕರ್‌ ಎಂದು ತಿಳಿದುಬಂದಿದೆ. ಈ ಬಗ್ಗೆ ಉಗ್ರ ಸಂಘಟನೆ ಹೇಳಿದ್ದೇನೆಂದರೆ, ಪಾಸ್‌ಪೋರ್ಟ್‌ನಲ್ಲಿ ಈತನದ್ದು ಕ್ರೈಸ್ತ ಹೆಸರು ಇತ್ತು. ಆದ್ದರಿಂದ ಲಿಬಿಯಾಕ್ಕೆ ತೆರಳಲು ಸೂಚಿಸಲಾಗಿತ್ತು. 3 ತಿಂಗಳ ಬಳಿಕ ಆತ ಹುತಾತ್ಮನಾಗಿದ್ದಾನೆ ಎಂದಿದೆ.
ಈ ಬಗ್ಗೆ ತನಿಖೆ ಮುಂದುವರೆಸಲಾಗಿದೆ. ಬೆಂಗಳೂರು ಉಗ್ರರ ನೆಲೆಯಾಗುತ್ತಿದೆ ಎಂಬ ಬಗ್ಗೆ ಬಹಳ ಹಿಂದಿನಿಂದಲೂ ಕೇಳಿಬರುತ್ತಿರುವುದು ಮಾತ್ರವಲ್ಲದೇ, ದೊಡ್ಡ ದೊಡ್ಡ ಕಂಪೆನಿಗಳಲ್ಲಿ ಉಗ್ರ ಸಂಘಟನೆ ಜತೆ ಗುರುತಿಸಿಕೊಂಡಿರುವವರು ಉನ್ನತ ಹುದ್ದೆಯನ್ನೇರಿ ಕುಳಿತುಕೊಂಡಿರುವ ಕೆಲವು ಘಟನೆಗಳೂ ಬೆಳಕಿಗೆ ಬಂದ ಬೆನ್ನಲ್ಲೇ ಈ ವಿಷಯವೂ ಬಹಿರಂಗಗೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.
ಮನೆಯಲ್ಲಿದ್ದ 90 ಲಕ್ಷ ರೂ. ಕದ್ದು ಸಿಕ್ಕಿಬಿದ್ದರು- ಕಳುವಾಗಿದ್ದು ಮಾಲೀಕನಿಗೆ ತಿಳಿದದ್ದು ದುಡ್ಡು ಸಿಕ್ಕಮೇಲೆ!

ನಮಗೆ ಮಾತ್ರ ಪರೀಕ್ಷೆ ಶಿಕ್ಷೆ ಏಕೆ? ರದ್ದು ಮಾಡಿ, ಇಲ್ಲವೇ ಎಲ್ಲರಿಗೂ ಎಕ್ಸಾಂ ಮಾಡಿ… ಕೋರ್ಟ್‌ಗೆ ಹೋದ ವಿದ್ಯಾರ್ಥಿಗಳು

ಪಕ್ಕದಲ್ಲಿ ಮದುಮಗನಿರುವಾಗ್ಲೇ ಕ್ಯಾಮೆರಾದತ್ತ ಮದುಮಗಳ ಸಿಗ್ನಲ್‌ ಪಾಸ್‌- ವಿಡಿಯೋ ವೈರಲ್‌

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twenty + 3 =
Remember me
