ನವದೆಹಲಿ:ಭಾರತ ಮತ್ತು ಬಾಂಗ್ಲಾದೇಶ ನಡುವೆ ಏಳು ಒಪ್ಪಂದಗಳಿಗೆ ಇಂದು ಸಹಿ ಹಾಕಲಾಗಿದೆ. ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ನಡೆದ ಉಭಯ ರಾಷ್ಟ್ರಗಳ ನಿಯೋಗ ಮಟ್ಟದ ಮಾತುಕತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಸಮ್ಮುಖದಲ್ಲಿ ಈ ಒಪ್ಪಂದ ನಡೆದಿದೆ.
ಈ ಒಪ್ಪಂದದ ಕುರಿತು ಮಾಹಿತಿ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ‘ಬಾಂಗ್ಲಾದೇಶ​ ಮತ್ತು ಭಾರತದ ನಡುವೆ ಸಂಪರ್ಕ, ಇಂಧನ, ಜಲ ಸಂಪನ್ಮೂಲಗಳು, ವ್ಯಾಪಾರ ಮತ್ತು ಹೂಡಿಕೆ, ಗಡಿ ನಿರ್ವಹಣೆ ಮತ್ತು ಭದ್ರತೆ, ಅಭಿವೃದ್ಧಿ ಪಾಲುದಾರಿಕೆ, ಭಯೋತ್ಪಾದನೆಯ ವಿಷಯ, ವಿರೋಧಿ ಶಕ್ತಿಗಳನ್ನು ಎದುರಿಸಲು ತೆಗೆದುಕೊಳ್ಳಬಹುದಾದ ಕ್ರಮ ಮತ್ತು ಪ್ರಾದೇಶಿಕ ಹಾಗೂ ಬಹುಪಕ್ಷೀಯ ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ’ ಎಂದರು.
‘ಐಟಿ, ಬಾಹ್ಯಾಕಾಶ ಮತ್ತು ಪರಮಾಣು ಶಕ್ತಿಯಂತಹ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ನಾವು ನಿರ್ಧರಿಸಿದ್ದೇವೆ’ ಎಂದು ಸಭೆಯ ನಂತರ ಪ್ರಧಾನಿ ಮೋದಿ ಹೇಳಿದರು. ‘ಕಳೆದ ವರ್ಷ ನಾವು ಬಾಂಗ್ಲಾದೇಶದ ಸ್ವಾತಂತ್ರ್ಯದ 50ನೇ ವಾರ್ಷಿಕೋತ್ಸವ, ನಮ್ಮ ರಾಜತಾಂತ್ರಿಕ ಸಂಬಂಧಗಳ ಸುವರ್ಣ ಮಹೋತ್ಸವ, ಶೇಖ್ ಮುಜಿಬುರ್ ರೆಹಮಾನ್ ಅವರ ಜನ್ಮ ಶತಮಾನೋತ್ಸವವನ್ನು ಒಟ್ಟಿಗೆ ಆಚರಿಸಿದ್ದೇವೆ. ಮುಂದಿನ 25 ವರ್ಷಗಳಲ್ಲಿ ಭಾರತ-ಬಾಂಗ್ಲಾದೇಶ ಸ್ನೇಹವು ಹೊಸ ಎತ್ತರವನ್ನು ಮುಟ್ಟುತ್ತದೆ’ ಎಂದು ತಿಳಿಸಿದರು.
‘ಭಾರತದ ದಕ್ಷಿಣ ಅಸ್ಸಾಂ ಮತ್ತು ಬಾಂಗ್ಲಾದೇಶದ ಸಿಲ್ಹೆಟ್ ಪ್ರದೇಶಕ್ಕೆ ಪ್ರಯೋಜನಕಾರಿಯಾಗುವ ಕುಶಿಯಾರಾ ನದಿಯಿಂದ ನೀರು ಹಂಚಿಕೆ ಕುರಿತು ಮಹತ್ವದ ಒಪ್ಪಂದಕ್ಕೆ ಇಂದು ಸಹಿ ಹಾಕಲಾಗಿದೆ. ಭಾರತ-ಬಾಂಗ್ಲಾದೇಶ ಗಡಿಯ ಮೂಲಕ ಹಾದುಹೋಗುವ ಇಂತಹ 54 ನದಿಗಳಿವೆ ಮತ್ತು ಶತಮಾನಗಳಿಂದ ಎರಡೂ ದೇಶಗಳ ಜನರ ಜೀವನೋಪಾಯಕ್ಕೆ ಸಂಬಂಧಿಸಿವೆ. ಈ ನದಿಗಳು ಜನಪದ ಕಥೆಗಳು, ಜಾನಪದ ಹಾಡುಗಳು, ನಮ್ಮ ಗಡಿ ಹಂಚಿಕೆಯ ಸಾಂಸ್ಕೃತಿಕ ಪರಂಪರೆಗೆ ಸಾಕ್ಷಿಯಾಗಿವೆ’ ಎಂದು ಪ್ರಧಾನಿ ಮೋದಿ ಹೇಳಿದರು.
‘ಭಾರತವು ನಮ್ಮ ಸ್ನೇಹಿತ. ನಾನು ಇಲ್ಲಿಗೆ ಬಂದಾಗಲೆಲ್ಲ ನನಗೆ ಸಂತೋಷವಾಗಿದೆ, ಅದರಲ್ಲೂ ವಿಶೇಷವಾಗಿ ನಮ್ಮ ವಿಮೋಚನಾ ಯುದ್ಧದ ಸಮಯದಲ್ಲಿ ಭಾರತ ನೀಡಿದ ಕೊಡುಗೆಯನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ನಾವು ಸೌಹಾರ್ದ ಸಂಬಂಧವನ್ನು ಹೊಂದಿದ್ದೇವೆ. ನಾವು ಪರಸ್ಪರ ಸಹಕರಿಸುತ್ತಿದ್ದೇವೆ’ ಎಂದು ಸಭೆಯ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಹೇಳಿದರು.
‘ಭಾರತವು ಸ್ವಾತಂತ್ರ್ಯದ 75ನೇ ವರ್ಷಾಚರಣೆ ನಿಮಿತ್ತ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ನಾನು ಭಾರತ ಸರ್ಕಾರ ಮತ್ತು ನನ್ನ ಭಾರತೀಯ ಸ್ನೇಹಿತರನ್ನು ಅಭಿನಂದಿಸುತ್ತೇನೆ. ಇಂದು ಪ್ರಧಾನಿ ಮೋದಿ ಮತ್ತು ನಾನು ಮತ್ತೊಂದು ಸುತ್ತಿನ ಫಲಪ್ರದ ಚರ್ಚೆ ಪೂರ್ಣಗೊಳಿಸಿದ್ದೇವೆ. ಅದರ ಫಲಿತಾಂಶವು ಎರಡೂ ದೇಶಗಳ ಜನರಿಗೆ ಪ್ರಯೋಜನವಾಗಲಿದೆ. ನಾವು ನಿಕಟ ಸ್ನೇಹ ಮತ್ತು ಸಹಕಾರದಿಂದ ಸಭೆ ನಡೆಸಿದ್ದೇವೆ’ ಎಂದು ಅವರು ಹೇಳಿದರು. (ಏಜೆನ್ಸೀಸ್​)
PM Narendra Modi & Bangladesh PM Sheikh Hasina held talks to review and further strengthen the all-encompassing India-Bangladesh partnership: MEA Spokesperson Arindam Bagchipic.twitter.com/b9om4LAHJI— ANI (@ANI)September 6, 2022
PM Narendra Modi & Bangladesh PM Sheikh Hasina held talks to review and further strengthen the all-encompassing India-Bangladesh partnership: MEA Spokesperson Arindam Bagchipic.twitter.com/b9om4LAHJI
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:six − 2 =
Remember me
