ನವದೆಹಲಿ:ಸಂಸತ್ತಿನ ಬಜೆಟ್ ಅಧಿವೇಶನ ನಾಳೆಯಿಂದ (ಜನವರಿ 29) ಆರಂಭಗೊಳ್ಳಲಿದೆ. ಇದರ ಹಿನ್ನೆಲೆಯಲ್ಲಿ ಮೊದಲ ದಿನ ರಾಷ್ಟ್ರಪತಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆದರೆ ಈ ಭಾಷಣಕ್ಕೆ ಬಹಿಷ್ಕಾರ ಹಾಕಲು 16 ವಿರೋಧ ಪಕ್ಷಗಳು ಸಿದ್ಧವಾಗಿವೆ.
ಈ ಕುರಿತು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಮಾಹಿತಿ ನೀಡಿದ್ದಾರೆ. ಬಿಜೆಟ್​ ಅಧಿವೇಶನದ ಆರಂಭದಲ್ಲಿ ನಾಳೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​​ ಜಂಟಿ ಸದನವನ್ನ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಕಾಂಗ್ರೆಸ್​ ಸೇರಿದಂತೆ 16 ವಿಪಕ್ಷಗಳು ಕಲಾಪ ಬಹಿಷ್ಕರಿಸಲು ತೀರ್ಮಾನಿಸಿವೆ ಎಂದು ಅವರು ಹೇಳಿದ್ದಾರೆ.
ಪ್ರತಿಪಕ್ಷಗಳಿಲ್ಲದೆ ಕೃಷಿ ಮಸೂದೆಗಳನ್ನು ಸದನದಲ್ಲಿ ಬಲವಂತವಾಗಿ ಅಂಗೀಕರಿಸಲಾಗಿದೆ. ರೈತರಿಗೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ಈ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಅವರು ಹೇಳಿದರು.
ಬಜೆಟ್ ಮಂಡನೆಗೆ ಮುನ್ನ ಜನವರಿ 29ರಂದು ಸಂಸತ್ತಿನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಜ್ಯ ಸಭೆ ಹಾಗೂ ಲೋಕಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಫೆಬ್ರುವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ.
ಸುಪ್ರೀಂ ತೀರ್ಪಿನಿಂದ ಸಚಿವ ಸ್ಥಾನ ಸಿಗದಿದ್ರೇನು.. ಇನ್ನೊಂದು ಖುರ್ಚಿ ಮೇಲೆ ವಿಶ್ವನಾಥ್ ಕಣ್ಣು…​

ಗಣರಾಜ್ಯೋತ್ಸವದ ದಿನ ಸಿಖ್‌ ಧ್ವಜ ಹಾರಿಸಿದವರಿಗೆ ಕೋಟಿ ರೂ ಬಹುಮಾನ: ಪತ್ರ ವೈರಲ್​

ಪತ್ನಿ ತುಂಬಾ ಚೆಲ್ಲುಚೆಲ್ಲು, ಹುಟ್ಟುವ ಮಗುವಿನ ಡಿಎನ್​ಎ ಪರೀಕ್ಷೆ ಮಾಡಿಸಬಹುದಾ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 − three =
Remember me
