ಭಿಂಡ್​ (ಮಧ್ಯಪ್ರದೇಶ) :ಇದು ಅತ್ಯಂತ ವಿಚಿತ್ರ ಘಟನೆ. ನಡೆದಿರುವುದು ಮಧ್ಯಪ್ರದೇಶದ ಭಿಂಡ್​ ಗ್ರಾಮದಲ್ಲಿ. ಮದುವೆಯಾಗದೇ ಕಂಗಾಲಾಗಿದ್ದ ಯುವಕನ ಕಥೆಯಿದು. ಹುಡುಗಿ ಸಿಕ್ತಿಲ್ಲ ಎಂದು ಗೋಳಾಡಿದ್ದ ಯುವಕನ ಬಳಿ ಬಂದ ಯುವತಿಯೊಬ್ಬಳು ಮದುವೆಯನ್ನೂ ಆಗಿ, ಮೊದಲ ರಾತ್ರಿಯೇ ಎಸ್ಕೇಪ್​ ಆಗಿದ್ದಾಳೆ!
ಅಷ್ಟಕ್ಕೂ ಆಗಿದ್ದೇನೆಂದರೆ, ಸೋನು ಜೈನ್‌ ಎಂಬ ಯುವಕನಿಗೆ ಮದುವೆಯಾಗಲು ಹುಡುಗಿ ಸಿಕ್ಕಿರಲಿಲ್ಲ. ಹುಡುಗಿಗಾಗಿ ಹುಡುಕಿ ಹುಡುಕಿ ಸೋತ ಅವನಿಗೆ ಆತನ ಪರಿಚಯದವರೇ ಆದ ಉದಲ್ ಖಾತಿಕ್ ಹುಡುಗಿಯನ್ನು ನಾನು ಹುಡುಕುತ್ತೇನೆ. ಆದರೆ ಅವಳಿಗೆ ನೀನು ಒಂದು ಲಕ್ಷ ರೂಪಾಯಿ ಕೊಡಬೇಕು ಎಂದು ಹೇಳಿದ. ಹುಡುಗಿಗಾಗಿ ಪರಿತಪಿಸುತ್ತಿದ್ದ ಸೋನು ಇದಕ್ಕೆ ಒಪ್ಪಿಕೊಂಡಿದ್ದಾನೆ.
ನಂತರ ಉದಲ್​ ತನ್ನಿಬ್ಬರು ಸ್ನೇಹಿತರ ಜತೆಗೂಡಿ ಅನಿತಾ ರತ್ನಾಕರ್​ ಎಂಬ ಯುವತಿಯನ್ನು ಕರೆತಂದಿದ್ದಾನೆ. ಆಕೆಯ ಚೆಲುವನ್ನು ನೋಡಿ ಸೋನು ಮಾತ್ರವಲ್ಲದೇ ಆತನ ಪಾಲಕರೂ ಒಪ್ಪಿಕೊಂಡಿದ್ದಾರೆ. ಮಾತುಕತೆಯಂತೆ ಒಂದು ಲಕ್ಷ ರೂಪಾಯಿಯನ್ನು ಉದಲ್​ ಮತ್ತು ಆತನ ಸ್ನೇಹಿತರಿಗೆ ಈ ವರ ನೀಡಿದ್ದಾನೆ. ನಂತರ ಶಾಸ್ತ್ರೋಕ್ತವಾಗಿ ಮದುವೆ ಮಾಡಲಾಗಿದೆ. ಫಸ್ಟ್​ ನೈಟ್​ಗೆ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ತನಗೆ ಯಾಕೋ ಸುಸ್ತಾಗುತ್ತಿದೆ ಎಂದು ಅನಿತಾ ಟೆರೇಸ್​ ಮೇಲೆ ಹೋಗಿದ್ದಾಳೆ. ಎಷ್ಟು ಹೊತ್ತಾದರೂ ಆಕೆ ಬರದಾಗ ವರನಿಗೆ ಭಯವಾಗಿ ಮೇಲೆ ಹೋಗಿ ನೋಡಿದಾಗ ಅಲ್ಲಿ ಆಕೆ ಇರಲಿಲ್ಲ. ಎಲ್ಲೆಡೆ ಹುಡುಕಿದರೂ ಸಿಗಲಿಲ್ಲ. ನಂತರ ಪೊಲೀಸ್​ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾನೆ.
ಅಷ್ಟರಲ್ಲಿ ಓಡಿಹೋಗುತ್ತಿದ್ದ ಅನಿತಾ ಗಸ್ತು ತಿರುಗುತ್ತಿದ್ದ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಆಕೆಯನ್ನು ಠಾಣೆಗೆ ಕರೆದುಕೊಂಡು ಬರಲಾಗಿದೆ. ನಂತರ ತಿಳಿದ ವಿಷಯ ಎಂದರೆ, ಹಣಕ್ಕಾಗಿ ಈ ರೀತಿ ಮೋಸ ಮಾಡುವುದು ಈ ಯುವತಿಯ ಗ್ಯಾಂಗ್​ಗೆ ಮಾಮೂಲು ಎನ್ನುವುದು. ಇದಕ್ಕೆ ಸಂಬಂಧಿಸಿದಂತೆ ಐದು ಮಂದಿಯ ವಿರುದ್ಧ ದೂರು ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೂರು ಮಂದಿಯನ್ನು ಅರೆಸ್ಟ್​ ಮಾಡಲಾಗಿದೆ.
ಮಹಾರಾಷ್ಟ್ರಕ್ಕೂ ಕಾಲಿಟ್ಟಿತು ಝಿಕಾ ವೈರಸ್: ರಾಜ್ಯದಲ್ಲೂ ಆತಂಕ- ಏನಿದು ಸೋಂಕು, ಇಲ್ಲಿದೆ ಡಿಟೇಲ್ಸ್​

ಸಂಕ್ರಾಂತಿ ಒಳಗೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಅವಘಡ: ಕೋಡಿಮಠ ಸ್ವಾಮೀಜಿ ಭವಿಷ್ಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 + 12 =
Remember me
