ಡೆಹ್ರಾಡೂನ್​ :ಪ್ರಧಾನಿ ಮೋದಿ ಅವರು ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ನಡೆಸುತ್ತಿರುವ ಬೃಹತ್​ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಬಸ್‌ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ.
ಉತ್ತರಪ್ರದೇಶದಿಂದ ಬಿಜೆಪಿ ಕಾರ್ಯಕರ್ತರು ಖಾಸಗಿ ಬಸ್‌ನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಬಸ್‌ ಹಾಗೂ ಕಾರೊಂದು ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಇವರು ಒಂದೇ ಕುಟುಂಬದವರು ಎನ್ನಲಾಗಿದೆ. ತಂದೆ ತಾಯಿ ಮತ್ತು ಅವರ ಮಗು ಈ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.
ಸಹರಾನ್ಪುರ ಜಿಲ್ಲೆಯ ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಅನೇಕ ಜನರು ಗಂಭೀರವಾಗಿ ಗಾಯಗೊಂಡಿದ್ದು, ಸಹರಾನ್ಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತಕ್ಕೀಡಾದ ಕಾರಿನಲ್ಲಿದ್ದ ಮೂರು ಲಕ್ಷ ನಗದು ಮತ್ತು ಐದು ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ಸಂಬಂಧ ಬಿಹಾರಿಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಮಾನದೊಳಗೆ ಬೆಕ್ಕಿಗೆ ಎದೆಹಾಲು ಕುಡಿಸಿದ ಮಹಿಳೆ: ‘ಸ್ಟಾಪ್‌ ಇಟ್‌‘ ಎಂದರೂ ಕೇಳಲಿಲ್ಲ, ವಿಡಿಯೋ ವೈರಲ್‌

ಭಾವಿ ಅಳಿಯನಿಗೆ ಷರತ್ತು ವಿಧಿಸಿ ಮಗಳನ್ನು ಕಳೆದುಕೊಂಡ ಅಪ್ಪ- ಮನನೊಂದು ಆತ್ಮಹತ್ಯೆ ಮಾಡಿಕೊಂಡ ಜೋಡಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
