ಶ್ರೀನಗರ:ಇಂದು ಭಾರತದೆಲ್ಲೆಡೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ಹಲವು ಕಡೆಗಳಲ್ಲಿ ಅತಿ ಸ್ಮರಣೀಯ ರೀತಿಯಲ್ಲಿ ಧ್ವಜಾರೋಹಣ ನೆರವೇರುತ್ತಿದೆ. ಈ ದಿನಕ್ಕೆ ಅತ್ಯಂತ ವಿಶೇಷ ಕಳೆ ತಂದದ್ದು, ಕಾಶ್ಮೀರದ ಶ್ರೀನಗರದ ಲಾಲ್ ಚೌಕ್‌ನಲ್ಲಿ ಮೊಳಗಿದ ವಂದೇ ಮಾತರಂ. ಭಾರತದ ಬಾವುಟವನ್ನು ಹಿಡಿದು ಕೆಲವು ಯುವಕರು ವಂದೇ ಮಾತರಂ ಗೀತೆ ಹಾಡಿರುವ ವಿಡಿಯೋ ಭಾರಿ ವೈರಲ್​ ಆಗುತ್ತಿದೆ.
ಇದು ವಿಶೇಷ ಎನಿಸಲು ಕಾರಣ ಎಂದರೆ, ಲಾಲ್​ ಚೌಕ್​ನಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಿದವರ ಹತ್ಯ ಮಾಡಲಾಗುವುದು ಎಂದು ಪ್ರತಿವರ್ಷವೂ ಉಗ್ರರು ಘೋಷಿಸುತ್ತಲೇ ಬಂದಿದ್ದಾರೆ. ಇದರ ಹೊರತಾಗಿಯೂ 1992ರಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು ಇಲ್ಲಿ ತ್ರಿವರ್ಣ ಧ್ವಜವನ್ನು ಧೈರ್ಯದಿಂದ ಹಾರಿಸಿದ್ದರು. ಇದಾದ ಬಳಿಕ ಮತ್ತೆ ಇಲ್ಲಿ ತ್ರಿವರ್ಣ ಧ್ವಜದ ಹಾರಾಟ ನಡೆದಿದೆ.
ವೈರಲ್​ ವಿಡಿಯೋದಲ್ಲಿ ನಾವು, ಯುವಕನೊಬ್ಬ ತ್ರಿವರ್ಣ ಬಣ್ಣವನ್ನು ತನ್ನ ದೇಹಕ್ಕೆ ಬಣ್ಣ ಬಳಿದುಕೊಂಡು ಕೈಯಲ್ಲಿ ತ್ರಿವರ್ಣ ಧ್ವಜವನ್ನು ಬೀಸುತ್ತಿರುವುದನ್ನು ಕಾಣಬಹುದು. ಆತ ವಂದೇ ಮಾತರಂ ಮತ್ತು ಭಾರತ್ ಮಾತಾ ಕಿ ಜೈ ಎಂದು ಘೋಷಿಸುತ್ತಿದ್ದಾನೆ. ಅವರ ಹಿಂದೆ ಇತರರು ಸಹ ಈ ಘೋಷಣೆಗಳನ್ನು ಪುನರಾವರ್ತಿಸುತ್ತಿದ್ದಾರೆ. ಈ ವಿಡಿಯೋಗೆ ಇದಾಗಲೇ ಹಲವಾರು ಕಮೆಂಟ್​ಗಳು ಬಂದಿವೆ. ಧೈರ್ಯದಿಂದ ಮುನ್ನುಗ್ಗಿ ದೇಶಪ್ರೇಮ ಮೆರೆಯುತ್ತಿರುವ ಈ ಜನರಿಗೆ ಎಲ್ಲರೂ ಸಲಾಂ ಎನ್ನುತ್ತಿದ್ದಾರೆ.
ಅಂದಹಾಗೆ ಕೆಲ ದಿನಗಳ ಹಿಂದೆ ಶ್ರೀನಗರದ ಲಾಲ್​ಚೌಕ್​ವರೆಗೆ ತ್ರಿವರ್ಣ ಯಾತ್ರೆ ಕೈಗೊಳ್ಳಲಾಗಿತ್ತು. ಇದರಿಂದಾಗಿ ಇಡೀ ಲಾಲ್ ಚೌಕ್ ತ್ರಿವರ್ಣ ಧ್ವಜದಿಂದ ಆವೃತವಾಗಿತ್ತು. ಈ ರ್ಯಾಲಿಗೆ ಭಾರತೀಯ ಜನತಾ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಚಾಲನೆ ನೀಡಿದ್ದರು.
ಈ ಕುರಿತು ಟ್ವೀಟ್​ ಮಾಡಿದ್ದ ತೇಜಸ್ವಿ ಸೂರ್ಯ ಅವರು, “ಕೆಲವು ವರ್ಷಗಳ ಹಿಂದೆ ಲಾಲ್ ಚೌಕ್ ದೇಶ ವಿರೋಧಿ ಮತ್ತು ಪ್ರತ್ಯೇಕತಾವಾದಿ ಭಾವನೆಗಳಿಂದ ತುಂಬಿತ್ತು. ತ್ರಿವರ್ಣ ಧ್ವಜವನ್ನು ಹಾರಿಸಲು ಮುಂದಾದವರನ್ನು ಕೊಲ್ಲುವುದಾಗಿ ಉಗ್ರರು ಬೆದರಿಕೆ ಹಾಕಿದ್ದರು. 1992ರಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು ಇಲ್ಲಿ ತ್ರಿವರ್ಣ ಧ್ವಜವನ್ನು ಧೈರ್ಯದಿಂದ ಹಾರಿಸಿದರು, ಇದರಿಂದಾಗಿ ಭಾರತೀಯ ಜನತಾ ಯುವ ಮೋರ್ಚಾ 30 ವರ್ಷಗಳ ನಂತರ ಅದನ್ನು ಮತ್ತೆ ಹಾರಿಸಲು ಸಾಧ್ಯವಾಯಿತು ಎಂದಿದ್ದರು(ಏಜೆನ್ಸೀಸ್​)
ಇಲ್ಲಿದೆ ನೋಡಿ ವಿಡಿಯೋ
#WATCHChants of ‘Vande Mataram’ by a group of men waving the Tricolour at Srinagar’s Lal Chowkpic.twitter.com/KgFSiXG4Ck
— ANI (@ANI)August 15, 2022

VIDEO: ಕೋಲಾರದಲ್ಲಿ ಅನಾವರಣಗೊಂಡ ದೇಶದ ಅತಿದೊಡ್ಡ ಧ್ವಜ ಕಂಡು ಪುಳಕಿತರಾದ ಜನ- ಸೇನಾ ಹೆಲಿಕಾಪ್ಟರ್​ನಿಂದ ಪುಷ್ಪಾರ್ಚನೆ

VIDEO: ಕೋಲಾರದಲ್ಲಿ ಅನಾವರಣಗೊಂಡ ದೇಶದ ಅತಿದೊಡ್ಡ ಧ್ವಜ ಕಂಡು ಪುಳಕಿತರಾದ ಜನ- ಸೇನಾ ಹೆಲಿಕಾಪ್ಟರ್​ನಿಂದ ಪುಷ್ಪಾರ್ಚನೆ


VIDEO: ಕೋಲಾರದಲ್ಲಿ ಅನಾವರಣಗೊಂಡ ದೇಶದ ಅತಿದೊಡ್ಡ ಧ್ವಜ ಕಂಡು ಪುಳಕಿತರಾದ ಜನ- ಸೇನಾ ಹೆಲಿಕಾಪ್ಟರ್​ನಿಂದ ಪುಷ್ಪಾರ್ಚನೆ

ಇನ್ಮುಂದೆ ಹಲೋ ಬದಲು ವಂದೇ ಮಾತರಂ: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ‘ಮಹಾ’ ಸೂಚನೆ

‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ಚಂದು ಮನೆಗೆ ಸಾಕ್ಷಾತ್​ ಲಕ್ಷ್ಮಿಯ ಆಗಮನ: ಹೆಣ್ಣುಮಗುವಿನ ಜನನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
