ಚೆನ್ನೈ:ತಮಿಳುನಾಡಿನ 234 ವಿಧಾನಸಭಾಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಎರಡನೆಯ ಸುತ್ತಿನ ಮತ ಎಣಿಕೆ ಮುಗಿದಿದೆ.
ಈ ಸಂದರ್ಭದಲ್ಲಿ ಬಹು ಕುತೂಹಲ ಕೆರಳಿಸಿರುವ ಕೊಳತ್ತೂರಿನಲ್ಲಿ ಸ್ಟಾಲಿನ್‌ ಮುನ್ನಡೆ ಸಾಧಿಸಿದ್ದಾರೆ. ಕೊಯಮತ್ತೂರಿನಲ್ಲಿ ಕಮಲ ಹಾಸನ್‌ಗೆ ತೀವ್ರ ಹಿನ್ನಡೆಯಾಗಿದ್ದು, ಕಾಂಗ್ರೆಸ್‌ನ ಮಯೂರ್‌ ಜಯಕುಮಾರ್‌ ಮುನ್ನಡೆಯಲ್ಲಿದ್ದಾರೆ.
ತಮಿಳುನಾಡಿನ ಅನಭಿಷಿಕ್ತ ದೊರೆಗಳು ಎಂದು ಎನಿಸಿಕೊಂಡಿದ್ದ ಎರಡು ಬಲಾಢ್ಯ ಸ್ಥಳೀಯ ಪಕ್ಷಗಳನ್ನು ಕಟ್ಟಿ ಬೆಳೆಸಿದ ಎಂ ಕರುಣಾನಿಧಿ ಮತ್ತು ಜೆ ಜಯಲಲಿತಾ ಇಬ್ಬರೂ ಇಲ್ಲ. ಆದ್ದರಿಂದ ಜನತೆ ಈ ಬಾರಿ ಇಬ್ಬರು ಖ್ಯಾತ ನಾಯಕರಾದ ಎಂ. ಕೆ ಸ್ಟಾಲಿನ್ ಮತ್ತು ಎಡಪ್ಪಡಿ ಕೆ ಪಳನಿಸ್ವಾಮಿ ಅವರ ಮಧ್ಯೆ ಆಯ್ಕೆ ಮಾಡುವುದು ಅನಿವಾರ್ಯವಾಗಿದೆ. ಇವರಿಗೆ ಸ್ಪರ್ಧೆಯೊಡ್ಡಲು ನಟ ಕಮಲ್ ಹಾಸನ್, ಟಿಟಿವಿ ದಿನಕರನ್ ಮತ್ತು ಸೀಮನ್ ಚುನಾವಣಾ ಕಣಕ್ಕಿಳಿದಿದ್ದು, ಇಂದು ಎಲ್ಲರ ಭವಿಷ್ಯ ನಿರ್ಧಾರವಾಗಲಿದೆ.
ತಮಿಳುನಾಡಿನಲ್ಲಿ ಡಿಎಂಕೆಯ ಎದುರು ಆಡಳಿತಾರೂಢ ಎಐಎಡಿಎಂಕೆ ಪರಾಭವಗೊಳ್ಳಲಿದೆ ಎಂದು ಚುನಾವಣಾಪೂರ್ವ ಸಮೀಕ್ಷೆಗಳು ಹೇಳಿವೆ.
ಬಸವಕಲ್ಯಾಣ ಕ್ಷೇತ್ರದ ಮತ ಎಣಿಕೆ: 4ನೇ ಸುತ್ತಿನಲ್ಲೂ ಬಿಜೆಪಿಗೆ ಮುನ್ನಡೆ

ಮತಎಣಿಕೆ ಕೇಂದ್ರದಲ್ಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಪಶ್ಚಿಮ ಬಂಗಾಳದ ಕಾಂಗ್ರೆಸ್​ ಏಜೆಂಟ್​!

ಅತ್ತ ಪಂಚರಾಜ್ಯ, ಇತ್ತ ಕರ್ನಾಟಕ… ಮತ ಎಣಿಕೆಗೆ ಕೆಲವೇ ಗಂಟೆ… ಏನಾಗಲಿದೆ ಸಮೀಕ್ಷೆ? ಎದೆಯಲ್ಲಿ ಢವಢವ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nine + fifteen =
Remember me
