ರಾಂಚಿ:1999ರ ಜಾರ್ಖಂಡ್​ನಲ್ಲಿ ನಡೆದಿದ್ದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರಿಗೆ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ.
ಆರೋಪ ಸಾಬೀತಾಗಿದ್ದ ಹಿನ್ನೆಲೆಯಲ್ಲಿ ಕಳೆದ ವಾರ ಕೋರ್ಟ್​ ಇವರನ್ನು ಅಪರಾಧಿ ಎಂದು ಘೋಷಿಸಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿರಲಿಲ್ಲ. ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗಿದ್ದು, ಮೂರು ವರ್ಷ ಶಿಕ್ಷೆ ವಿಧಿಸಲಾಗಿದೆ.
ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ಆದೇಶ ಹೊರಬಿದ್ದಿದೆ. ಅಟಲ್ ಬಿಹಾರಿ ವಾಜಪೇಯಿಯವರ ಸರ್ಕಾರದಲ್ಲಿ ರೇ ಅವರು ಕಲ್ಲಿದ್ದಲು ಇಲಾಖೆಯ ರಾಜ್ಯ ಸಚಿವರಾಗಿದ್ದರು.
ಇದನ್ನೂ ಓದಿ:ಆರ್​ಬಿಐ ಗವರ್ನರ್​ಗೆ ಕರೊನಾ: ಟ್ವಿಟರ್​ನಲ್ಲಿ ಮಾಹಿತಿ
ದಿಲೀಪ್​ ರೇ ಜತೆ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ್ ಗೌತಮ್, ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್ (ಸಿಟಿಎಲ್)ನ ನಿರ್ದೇಶಕ ಮಹೇಂದ್ರ ಕುಮಾರ್ ಅಗರ್​ವಾಲ್​ ಅವರಿಗೂ ಮೂರು ವರ್ಷ ಶಿಕ್ಷೆ ವಿಧಿಸಲಾಗಿದೆ.
ಜಾರ್ಖಂಡ್‌ನ ಗಿರಿದಿಹ್​ನಲ್ಲಿರುವ ಬ್ರಹ್ಮದಿಹಾ ಕಲ್ಲಿದ್ದಲು ಬ್ಲಾಕ್ ಅನ್ನು 1999ರಲ್ಲಿ ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್​ಗೆ ಅಕ್ರಮವಾಗಿ ಹಂಚಿಕೆ ಮಾಡಿರುವ ಪ್ರಕರಣ ಇದಾಗಿದೆ. ಜಾರ್ಖಂಡ್ ಕಲ್ಲಿದ್ದಲು ಗಣಿ ಮತ್ತು ನಿಕ್ಷೇಪಗಳ ಹಂಚಿಕೆಗೆ ಸಂಬಂಧಿಸಿದಂತೆ ಭಾರೀ ಪ್ರಮಾಣದ ಅಕ್ರಮ ಮತ್ತು ಅವ್ಯವಹಾರ ನಡೆದಿತ್ತು.
ನೀನಿಲ್ಲದ ಮೇಲೆ ನಾನ್ಯಾಕೆ ಬದುಕಲಿ? ಸ್ನೇಹಿತೆಯ ಸಮಾಧಿಯ ಬಳಿಯೇ ಆತ್ಮಹತ್ಯೆ!

ನಮ್ಮ ಮನೆಯಲ್ಲಿ ತುಳಸಿ ಬೆಳೆಯುವುದು ಆಕೆಗೆ ಗೊತ್ತಿಲ್ಲ- ಕಂಗನಾ ವಿರುದ್ಧ ಉದ್ಧವ್​ ಗರಂ

ಈಕೆಯ ಎದೆಹಾಲಿಗೆ ಲಕ್ಷ ಲಕ್ಷ ರೂಪಾಯಿ- ಮನೆಯಲ್ಲೇ ಕೂತು ಸಿಕ್ಕಾಪಟ್ಟೆ ಸಂಪಾದನೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
