ಅಗರ್‌ಮಲ್ವಾ (ಮಧ್ಯಪ್ರದೇಶ):ಕರೊನಾ ರೂಪಾಂತರ ಒಮಿಕ್ರಾನ್‌ ಭೀತಿ ಹುಟ್ಟಿಸತೊಡಗಿದೆ. ಎಲ್ಲೆಡೆ ಪುನಃ ಕಟ್ಟೆಚ್ಚರ ವಹಿಸಲಾಗಿದೆ. ಇದಾಗಲೇ ಕೆಲವು ದೇಶಗಳ ವಿಮಾನ ಸ್ಥಗಿತಗೊಳಿಸಲಾಗಿದೆ, ಬಿಗಿಯಾದ ಚೆಕಿಂಗ್‌ ನಡೆಯುತ್ತಿದೆ. ಇದರ ನಡುವೆಯೇ ಮತ್ತೊಂದು ಶಾಕಿಂಗ್‌ ಸುದ್ದಿ ಆಂಧ್ರಪ್ರದೇಶದಿಂದ ಹೊರಬಂದಿದೆ.
ಇಲ್ಲಿ ಸಾಲು ಸಾಲಾಗಿ ಕಾಗೆಗಳು ಮೃತಪಡುತ್ತಿರುವುದು ಆತಂಕಕ್ಕೆ ಈಡುಮಾಡಿದೆ. ಈ ಕಾಗೆಗಳ ಮಾದರಿಯನ್ನು ಪ್ರಯೋಗಾಲಯದಲ್ಲಿ ಒಳಪಡಿಸಿದಾಗ ಹಕ್ಕಿಜ್ವರ ಶುರುವಾಗಿರುವುದು ತಿಳಿದುಬಂದಿದೆ. ಭೋಪಾಲ್​​ನಿಂದ 180 ಕಿಮೀ ದೂರದಲ್ಲಿ ಕಳೆದ ನಾಲ್ಕು ದಿನಗಳಲ್ಲಿ 48 ಕಾಗೆಗಳು ಸತ್ತಿದ್ದು, ಇವುಗಳಲ್ಲಿ ಹಕ್ಕಿಜ್ವರ ಸೋಂಕು (H5N8) ಪ್ರಯೋಗಾಲಯದಲ್ಲಿ ದೃಢಪಟ್ಟಿದೆ. ಅದೇ ಇನ್ನೊಂದೆಡೆ ಕೋಳಿಗಳು ಕೂಡ ಮೃತಪಟ್ಟಿವೆ.
ಏಕಾಏಕಿ ಈ ಪರಿಯಲ್ಲಿ ಕಾಗೆಗಳು ಸಾಯುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ತಪಾಸಣೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಸೋಂಕು ದೃಢಪಟ್ಟಿರುವ ಕಾರಣ, ಕೋಳಿಗಳ ಮಾದರಿಯನ್ನೂ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅದರ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಅಲ್ಲಿಯವರೆಗೂ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಮಟನ್​ ಮಾರಾಟ ಮಾರುಕಟ್ಟೆಯನ್ನು ಮುಚ್ಚಲು ತೀರ್ಮಾನಿಸಲಾಗಿದೆ.
ಹಕ್ಕಿಜ್ವರ ಮನುಷ್ಯರ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇರುವ ಕಾರಣ, ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ ಆರೋಗ್ಯ ಇಲಾಖೆ ಅಧಿಕಾರಿಗಳು. ಚಳಿಗಾಲದಲ್ಲಿ ಹೆಚ್ಚಾಗಿ ವಲಸೆ ಹಕ್ಕಿಗಳು ಹಕ್ಕಿಜ್ವರ ಸೋಂಕನ್ನು ಹರಡುತ್ತವೆ. ಹೀಗಾಗಿ ರಾಜ್ಯದ ಸಂರಕ್ಷಿತ ಪ್ರದೇಶಗಳು ಮತ್ತು ನೀರಿನ ಮೂಲಗಳಿಗೆ ವಲಸೆ ಬರುವ ಹಕ್ಕಿಗಳ ಮೇಲೆ ನಿಗಾ ಇಡಲಾಗುವುದು ಎಂದಿದ್ದಾರೆ. ನೆರೆಯ ಆಂಧ್ರದಲ್ಲಿ ಇದು ಕಂಡುಬಂದಿರುವ ಹಿನ್ನೆಲೆಯಲ್ಲಿ, ಕರ್ನಾಟಕಕ್ಕೂ ಆತಂಕ ತಪ್ಪಿದ್ದಲ್ಲ.
ಕರೊನಾ ರೂಪಾಂತರಿಯಿಂದ ರಾಜ್ಯದಲ್ಲಿ ಸದ್ಯ ಲಾಕ್‌ಡೌನ್‌ ಆಗತ್ತಾ? ಸಚಿವ‌ ಸುಧಾಕರ್ ಏನು ಹೇಳಿದ್ದಾರೆ ನೋಡಿ…

ಮತ್ತೆ ಶಾಕ್‌ ಕೊಟ್ಟ ಸಿಲಿಂಡರ್‌, ದಿಢೀರ್‌ 100 ರೂ ಏರಿಕೆ! ವಾಣಿಜ್ಯ ಬಳಕೆದಾರರಿಗೆ ಶುರುವಾಯ್ತು ತಲೆನೋವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 13 =
Remember me
