ನವದೆಹಲಿ:ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಈ ಮೊದಲು ನೀಡಲಾಗಿದ್ದ ಜಾಮೀನು ವಿಸ್ತರಣೆ ಮಾಡಲಾಗಿದೆ.
2018ರಲ್ಲಿ ದೆಹಲಿಯ ಸಪ್ತರ್​ ಜಂಗ್ ಫ್ಲ್ಯಾಟ್​​ನಲ್ಲಿ​ ಸಿಕ್ಕ ಎಂಟೂವರೆ ಕೋಟಿ ರೂಪಾಯಿಗೆ ಸಂಬಂಧಿಸಿದಂತೆ ಹಣದ ಅಕ್ರಮ ವರ್ಗಾವಣೆ ಮಾಡಿರುವ ಆರೋಪ ಶಿವಕುಮಾರ್ ಸೇರಿದಂತೆ ಅವರ ಆಪ್ತರಾದ ಆಂಜನೇಯ ಹನುಮಂತಯ್ಯ, ಸಚಿನ್ ನಾರಾಯಣ, ಸುನಿಲ್ ಶರ್ಮ ಮತ್ತು ರಾಜೇಂದ್ರ ಅವರ ಮೇಲಿದೆ. ಈಗ ಎಲ್ಲರಿಗೂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ.
ಜಾಮೀನು ನೀಡುವಾಗ ಕೆಲವೊಂದು ಷರತ್ತುಗಳನ್ನು ಕೋರ್ಟ್​ ವಿಧಿಸಿದೆ. ಒಂದು ಲಕ್ಷ ರೂಪಾಯಿಯ ಶ್ಯೂರಿಟಿ ನೀಡುವಂತೆ ಕೋರ್ಟ್​ ಹೇಳಿದೆ. ಜತೆಗೆ ಸಾಕ್ಷ್ಯಗಳನ್ನು ತಿರುಚುವಂತಿಲ್ಲ, ದೇಶದಿಂದ ಹೊರಗೆ ಹೋಗುವಂತಿಲ್ಲ ಎಂದು ನ್ಯಾಯಮೂರ್ತಿ ವಿಕಾಸ್ ಧುಲ್ ನೇತೃತ್ವದ ನ್ಯಾಯಪೀಠ ಸೂಚಿಸಿದೆ.
ಕಳೆದ ಶನಿವಾರ ಈ ಎಲ್ಲ ನ್ಯಾಯಮೂರ್ತಿಗಳು ನಡೆಸಿದ್ದರು. ಈ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡದಂತೆ ಜಾರಿ ನಿರ್ದೇಶನಾಲಯದ ಪರ ವಕೀಲರು ಮನವಿ ಮಾಡಿದ್ದರು. ಆದರೆ ಇದನ್ನು ವಿರೋಧಿಸಿದ್ದ ಆರೋಪಿಗಳ ಪರ ವಕೀಲರು, ಹಲವು ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕಿದ ಹಲವು ಉದಾಹರಣೆಗಳು ಇವೆ. ಇ.ಡಿಯಿಂದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಇನ್ನು ಆರೋಪಿಗಳನ್ನು ಬಂಧಿಸುವ ಅಗತ್ಯವೇ ಬರುವುದಿಲ್ಲ. ಇಡಿ ತನಿಖೆಯ ವೇಳೆ ಆರೋಪಿಗಳನ್ನು ಬಂಧಿಸಿಲ್ಲ. ಹೀಗಾಗಿ ಜಾರ್ಜ್ ಶೀಟ್ ಸಲ್ಲಿಕೆ ಬಳಿಕ ಜಾಮೀನು ಪಡೆಯಲು ವಿರೋಧಿಸುವಂತಿಲ್ಲ ಎಂದು ವಾದಿಸಿತ್ತು. ಈ ವಾದವನ್ನು ಕೋರ್ಟ್​ ಮಾನ್ಯ ಮಾಡಿದೆ.
ಏನಿದು ವಿವಾದ?2018ರಲ್ಲಿ ದೆಹಲಿಯ ಸಪ್ತರ್​ ಜಂಗ್ ಫ್ಲ್ಯಾಟ್​​ನಲ್ಲಿ​ ಎಂಟೂವರೆ ಕೋಟಿ ರೂಪಾಯಿ ಹಣ ಸಿಕ್ಕಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಹಾಗೂ ಇತರರ ವಿರುದ್ಧ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಡಿಕೆಶಿ ಅವರು 800 ಕಡೆ ಬೇನಾಮಿ ಆಸ್ತಿ ಮಾಡಿದ್ದಾರೆ. ಕುಟುಂಬಸ್ಥರ ಹೆಸರಲ್ಲಿ 200 ಕೋಟಿ ಠೇವಣಿ ಇದೆ. 20ಕ್ಕೂ ಹೆಚ್ಚು ಬ್ಯಾಂಕ್​ಗಳಲ್ಲಿ 317ಕ್ಕೂ ಹೆಚ್ಚು ಅಕೌಂಟ್​ನಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ. ಮಗಳ ಹೆಸರಲ್ಲಿ 108 ಕೋಟಿ ಅಕ್ರಮ ವ್ಯವಹಾರ ಮಾಡಿದ್ದಾರೆ. ಪುತ್ರಿ ಹೆಸರಲ್ಲಿ 48 ಕೋಟಿ ಸಾಲ ಇದೆ. ಆದರೆ ಸಾಲದ ಮೂಲ ಮತ್ತು ಹಣದ ಮೂಲವನ್ನ ತಿಳಿಸಿಲ್ಲ… ದೆಹಲಿಯಲ್ಲಿ ಸಿಕ್ಕಂತಹ 8.5 ಕೋಟಿ ಹಣಕ್ಕೂ ಲೆಕ್ಕ ಕೊಟ್ಟಿಲ್ಲ… ಎಂಬ ಆರೋಪ ಡಿಕೆಶಿ ಮೇಲೆ ಮಾಡಲಾಗಿದೆ.
ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್​ ಅವರು, ರಾಹುಲ್ ಗಾಂಧಿ ಜತೆಗೆ ಹುಬ್ಬಳ್ಳಿಗೆ ತೆರಳಲಿದ್ದಾರೆ.
‘ರಾಹುಲ್​ಜೀ… ನಿಮ್ಮ ತಂದೆಯ ಕೊಲೆಪಾತಕಿಗಳನ್ನು ಬೆಂಬಲಿಸಿದವರಿಂದಲೇ ಇವ್ರು ಪ್ರಶಸ್ತಿ ಪಡೆದ್ರಲ್ಲ, ನಿಮ್ಗೆ ಒಪ್ಪಿಗೆನಾ?’

ಕಾಬೂಲ್​ ದಾಳಿಯಲ್ಲಿ ಅಮೆರಿಕ ಉಡೀಸ್​ ಮಾಡಿದ ಈ ಭಯಾನಕ ಉಗ್ರ ಕರ್ನಾಟಕದಲ್ಲೂ ಫೇಮಸ್​! ಯಾಕೆ ಅಂತೀರಾ?

ರೇಪ್​ ಆರೋಪ ಮಾಡಿದ ನಾಲ್ಕು ಮಕ್ಕಳ ತಾಯಿಗೆ ಗ್ರಹಚಾರ ಬಿಡಿಸಿದ ಹೈಕೋರ್ಟ್​- ನೀಡಿತು ಇಂಥದ್ದೊಂದು ಶಿಕ್ಷೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + ten =
Remember me
