ಮುಂಬೈ:ಟಾಟಾ ಗ್ರೂಪ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಹಮದಾಬಾದ್‌ನಿಂದ ಮುಂಬೈಗೆ ಮರ್ಸಿಡಿಸ್ ಕಾರಿನಲ್ಲಿ ಹೋಗುವ ಸಂದರ್ಭದಲ್ಲಿ ಮುಂಬೈ ಸಮೀಪ ಪಾಲ್‌ಘರ್‌ನಲ್ಲಿ ಅಪಘಾತ ಸಂಭವಿಸಿದೆ.
ಮಿಸ್ತ್ರಿ ಜತೆಗೆ ಪ್ರಯಾಣಿಸುತ್ತಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗುಜರಾತ್‌ನ ಆಸ್ಪತ್ರೆಗೆ ರವಾನಿಸಲಾಗಿದೆ. ಮಧ್ಯಾಹ್ನ 3.15ರ ಸುಮಾರಿಗೆ ಅಪಘಾತ ನಡೆದಿದೆ. ಸೂರ್ಯ ನದಿಯ ಮೇಲೆ ನಿರ್ಮಿಸಲಾಗಿರುವ ಸೇತುವೆಯಲ್ಲಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್​ ಅಧಿಕಾರಿ ಹೇಳಿದ್ದಾರೆ.
ಸೈರಸ್‌ ಮಿಸ್ತ್ರಿ ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮಿಸ್ತ್ರಿಯವರ ಹಿನ್ನೆಲೆ:ಸೈರಸ್ ಪಲ್ಲೋಂಜಿ ಮಿಸ್ತ್ರಿ (ಜನನ 4 ಜುಲೈ 1968) ಭಾರತೀಯ ಮೂಲದ ಐರಿಷ್ ಉದ್ಯಮಿ. ಅವರು 2012 ರಿಂದ 2016 ರವರೆಗೆ ಭಾರತೀಯ ವಾಣಿಜ್ಯ ಸಮೂಹವಾದ ಟಾಟಾ ಗ್ರೂಪ್​ನ ಅಧ್ಯಕ್ಷರಾಗಿದ್ದರು. ರತನ್ ಟಾಟಾ ಅವರು ನಿವೃತ್ತಿ ಘೋಷಿಸಿದ ನಂತರ ಸೈರಸ್ ಮಿಸ್ತ್ರಿ ಅವರು 2012ರ ಡಿಸೆಂಬರ್​ನಲ್ಲಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಎನ್.ಚಂದ್ರಶೇಖರನ್ ನಂತರ ಟಾಟಾ ಸನ್ಸ್​ನ ಕಾರ್ಯಕಾರಿ ಅಧ್ಯಕ್ಷರಾಗಿ ಅವರು ಅಧಿಕಾರ ಸ್ವೀಕರಿಸಿದ್ದರು.
2016ರ ಅಕ್ಟೋಬರ್​ನಲ್ಲಿ ಟಾಟಾ ಗ್ರೂಪ್​ನ ಹೋಲ್ಡಿಂಗ್ ಕಂಪೆನಿಯು ಮಿಸ್ತ್ರಿ ಅವರಿಗೆ ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡುವ ಅವಕಾಶವನ್ನು ನೀಡಿತ್ತು. ನಂತರ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲು ಮತ ಚಲಾಯಿಸಿತು.
ಇವರನ್ನು ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕುವ ಟಾಟಾ ಸಮೂಹದ ನಿರ್ಧಾರವನ್ನು ಸುಪ್ರೀಂಕೋರ್ಟ್​ನಲ್ಲಿ ಸಪೂರ್ಜಿ ಪಲ್ಲೊಂಜಿ (ಎಸ್‌ಪಿ) ಪ್ರಶ್ನಿಸಿತ್ತು. ಆದರೆ ಅಲ್ಲಿ ಅರ್ಜಿ ವಜಾಗೊಂಡಿತ್ತು.ಅಪಘಾತಗೊಂಡ ಕಾರಿನ ವಿಡಿಯೋ
Cyrus Mistry died in a road Accident in Palghar. He was reportedly travelling from Ahmedabad to Mumbai when the accident took place.pic.twitter.com/IYkxso3uoW— Rakesh Trivedi (@RakeshKTrivedi)September 4, 2022
Cyrus Mistry died in a road Accident in Palghar. He was reportedly travelling from Ahmedabad to Mumbai when the accident took place.pic.twitter.com/IYkxso3uoW
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − six =
Remember me
