ಆದಿಲಾಬಾದ್​:ಮಗಳು ಬೇರೆ ಧರ್ಮದ ವ್ಯಕ್ತಿಯೊಂದಿಗೆ ಮದುವೆಯಾಗಿದ್ದನ್ನು ಸಹಿಸದ ಪಾಲಕರು ಆಕೆಯ ಕತ್ತು ಸೀಳಿ ಕೊಲೆ ಮಾಡಿರುವ ಭಯಾನಕ ಘಟನೆ ತೆಲಂಗಾಣದ ಆದಿಲಾಬಾದ್​​ ಜಿಲ್ಲೆಯ ನಾರ್ನೂರ್​​ ವಲಯದ ನಾಗಕೊಂಡದಲ್ಲಿ ನಡೆದಿದೆ. ಕೆಲ ದಿನಗಳ ಹಿಂದಷ್ಟೇ ತೆಲಂಗಾಣದ ಸರೂರ್​​ನಗರದಲ್ಲಿ ಇದೇ ರೀತಿ ಮರ್ಯಾದಾ ಹತ್ಯೆ ನಡೆದಿತ್ತು. ಇದೀಗ ಈ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ.
ನಾಗಲಕೊಂಡ ಮೂಲದ ಯುವತಿ ಬೇರೆ ಧರ್ಮದವನನ್ನು ಪ್ರೀತಿಸುತ್ತಿದ್ದಳು. ಕುಟುಂಬಸ್ಥರು ವಿರೋಧಿಸಿದ್ದರಿಂದ ಮನೆ ಬಿಟ್ಟ ಯುವತಿ ಆತನನ್ನು ಮದುವೆಯಾಗಿದ್ದಳು. ಸುಮಾರು ಒಂದೂವರೆ ತಿಂಗಳ ಹಿಂದೆ ಈ ಘಟನೆ ನಡೆದಿತ್ತು. ಕೊನೆಗೆ ಯುವತಿ ಪಾಲಕರು ಪೊಲೀಸರಲ್ಲಿ ದೂರು ದಾಖಲು ಮಾಡಿದ್ದರು.
ಈ ಜೋಡಿಗಾಗಿ ಹುಡುಕಾಟ ನಡೆಸಿದ್ದ ಪೊಲೀಸರು ಅವರನ್ನು ಪತ್ತೆಹಚ್ಚಿ ಯುವತಿಯನ್ನು ಮನೆಗೆ ಕರೆದುತಂದಿದ್ದರು. ಇದು ಅಕ್ಕಪಕ್ಕದಲ್ಲಿ ಸುದ್ದಿಯಾಗುತ್ತಿದ್ದಂತೆಯೇ ಮನೆಯವರಿಗೆ ಮರ್ಯಾದೆ ಹೋಯಿತು ಎನ್ನಿಸುತ್ತಿತ್ತು. ಇದರಿಂದ ಬೇರೆ ಧರ್ಮದವನ ಜತೆ ಮದುವೆಯಾಗಿರುವುದನ್ನು ಸಹಿಸದೇ ಆಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾರೆ.
ಪಾಲಕರ ವಿರುದ್ಧ ಕೇಸ್‌ ದಾಖಲಿಸಿಕೊಳ್ಳಲಾಗಿದೆ. ಪಾಲಕರನ್ನು ಬಂಧಿಸಲಾಗಿದೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಿದ್ದಾರೆ.
ಪ್ರಿಯಕರನ ಲೈಂಗಿಕ ಆಸೆ ಈಡೇರಿಸಲು ಮಗಳನ್ನೇ ಆತನ ಬಳಿ ಬಿಟ್ಟ ಪಾಪಿ ತಾಯಿ!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − fourteen =
Remember me
