ಮುಂಬೈ:ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ, ಲೋಕಸಭಾ ಸದಸ್ಯ ಶ್ರೀಕಾಂತ್ ಶಿಂಧೆ ಅವರು ಮುಖ್ಯಮಂತ್ರಿಯ ಕುರ್ಚಿಯ ಮೇಲೆ ಕುಳಿತು ಮಾತುಕತೆ ನಡೆಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿದ್ದು, ಟೀಕೆಗೆ ಗುರಿಯಾಗಿದೆ.
ಯಾವುದೇ ಉನ್ನತ ಹುದ್ದೆ ಇರಲಿ, ಆ ಹುದ್ದೆಯಲ್ಲಿ ಇರುವ ವ್ಯಕ್ತಿಗಳ ಮೇಲೆ ಗೌರವ ಇರಲಿ, ಬಿಡಲಿ ಆ ಕುರ್ಚಿಗೆ ಅದರದ್ದೇ ಆದ ಮಹತ್ವ ಇರುತ್ತದೆ. ಆದ್ದರಿಂದ ಆ ಕುರ್ಚಿಯ ಮೇಲೆ ಆ ಹುದ್ದೆಯನ್ನು ಅಲಂಕರಿಸಿದವರು ಬಿಟ್ಟು ಬೇರೆಯವರು ಕುಳಿತುಕೊಳ್ಳುವುದು ಅಕ್ಷಮ್ಯ. ಆದರೆ ಶ್ರೀಕಾಂತ್​ ಶಿಂಧೆ ಅಂಥದ್ದೊಂದು ಎಡವಟ್ಟು ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ವಿಪಕ್ಷಗಳ ಬಾಯಿಗೆ ಆಹಾರವಾಗಿದ್ದಾರೆ.
ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಫೋಟೋದ ಮುಂದೆ ಶ್ರೀಕಾಂತ್ ಅವರು, ಕುರ್ಚಿಯ ಮೇಲೆ ಕುಳಿತಿರುವ ಚಿತ್ರವನ್ನು ಎನ್‌ಸಿಪಿ ವಕ್ತಾರ ರವಿಕಾಂತ್ ವರ್ಪೆ ಟ್ವೀಟ್ ಮೂಲಕ ಶೇರ್​ ಮಾಡಿದ್ದಾರೆ. ಫೋಟೋ ಕೆಳಗೆ ಇರಿಸಲಾಗಿರುವ ಬೋರ್ಡ್ ಮತ್ತು ಕುರ್ಚಿಯ ಹಿಂದೆ ‘ಮಹಾರಾಷ್ಟ್ರ ಸರ್ಕಾರ-ಮುಖ್ಯಮಂತ್ರಿ’ ಎಂದು ಬರೆಯಲಾಗಿದೆ. ಅವರನ್ನು ಸೂಪರ್ ಸಿಎಂ ಎಂದು ಕರೆದ ಎನ್‌ಸಿಪಿ ನಾಯಕ ಕರೆದಿದ್ದಾರೆ. ಇದು ಯಾವ ರೀತಿಯ ರಾಜಧರ್ಮ? ಎಂದು ಪ್ರಶ್ನಿಸಿದ್ದಾರೆ.
ಈ ಫೋಟೋ ಭಾರಿ ವೈರಲ್​ ಆಗುತ್ತಲೇ ಶ್ರೀಕಾಂತ್​ ಶಿಂಧೆ ಸ್ಪಷ್ಟನೆ ಕೊಟ್ಟಿದ್ದಾರೆ. ‘ನಾನು ಎರಡು ಅವಧಿಯ ಸಂಸದರಾಗಿದ್ದು, ಶಿಷ್ಟಾಚಾರದ ಬಗ್ಗೆ ಅರಿವಿದೆ. ಇದು ನಮ್ಮ ಮನೆಯಲ್ಲಿ ತೆಗೆದ ಚಿತ್ರ, ತಂದೆಗೆ ಕಚೇರಿಯಲ್ಲಿ ನೀಡಿದ ಅಧಿಕೃತ ಸಿಎಂ ಕುರ್ಚಿ ಮೇಲೆ ನಾನು ಕುಳಿತಿಲ್ಲ. ಇದು ಮುಖ್ಯಮಂತ್ರಿಯ ಅಧಿಕೃತ ನಿವಾಸವೂ ಅಲ್ಲ. ಥಾಣೆಯಲ್ಲಿರುವ ಖಾಸಗಿ ನಿವಾಸ ಹಾಗೂ ಕಚೇರಿ ಇದು” ಎಂದಿದ್ದಾರೆ. ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ವಿಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ.
ಶಿವಸೇನೆ ನಾಯಕಿ ಪ್ರಿಯಾಂಕಾ ಚತುರ್ವೇದಿ ಈ ಬಗ್ಗೆ ಟ್ವೀಟ್ ಮಾಡಿ, “ಅಪ್ಪನ ಮಗನಿಗೆ ಅಧಿಕಾರ ಇರಲಿ, ಬಿಡಲಿ, ಅಪ್ಪನ ಎಲ್ಲಾ ಕರ್ತವ್ಯಗಳನ್ನು ಇವರೇ ನಿಭಾಯಿಸುವಂತಿದೆ’ ಎಂದು ವ್ಯಂಗ್ಯವಾಡಿದ್ದಾರೆ.(ಏಜೆನ್ಸೀಸ್​)
खा.श्रीकांत शिंदे यांना सुपर सीएम झाल्याबद्दल हार्दिक शुभेच्छा.मुख्यमंत्र्यांच्या गैरहजेरीत त्यांचे चिरंजीव मुख्यमंत्री पदाचा कारभार सांभाळतात.लोकशाहीचा गळा घोटण्याचे काम सुरूय.हा कोणता राजधर्म आहे?असा कसा हा धर्मवीर?@mieknathshinde@DrSEShindepic.twitter.com/rpOZimHnxL— Ravikant Varpe रविकांत वरपे (@ravikantvarpe)September 23, 2022
खा.श्रीकांत शिंदे यांना सुपर सीएम झाल्याबद्दल हार्दिक शुभेच्छा.मुख्यमंत्र्यांच्या गैरहजेरीत त्यांचे चिरंजीव मुख्यमंत्री पदाचा कारभार सांभाळतात.लोकशाहीचा गळा घोटण्याचे काम सुरूय.हा कोणता राजधर्म आहे?असा कसा हा धर्मवीर?@mieknathshinde@DrSEShindepic.twitter.com/rpOZimHnxL
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:twelve − eight =
Remember me
