ಪುಣೆ :ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶಿವಾಜಿರಾವ್ ಪಾಟೀಲ್ ನೀಲಂಗೆಕರ್ ಅವರು ಇಂದು ಬೆಳಗ್ಗೆ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಶಿವಾಜಿರಾವ್‌ ಅವರಿಗೆ 89 ವರ್ಷ ವಯಸ್ಸಾಗಿತ್ತು.
ಅನಾರೋಗ್ಯ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಇವರಿಗೆ ಕರೊನಾ ಪರೀಕ್ಷೆ ಮಾಡಿಸಲಾಗಿತ್ತು. ಅದರಲ್ಲಿ ಪಾಸಿಟಿವ್‌ ವರದಿ ಬಂದಿತ್ತು. ನಂತರ ಚಿಕಿತ್ಸೆ ಪಡೆದುಕೊಂಡಿದ್ದ ಶಿವಾಜಿರಾವ್‌ ಅವರು ಗುಣಮುಖರಾಗಿದ್ದರು. ವರದಿಯಲ್ಲಿ ನೆಗೆಟಿವ್‌ ಎಂದು ತೋರಿಸಿದಾಗ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು.
ಇದಾದ ಕೆಲವೇ ದಿನಗಳಲ್ಲಿ ಇವರು ಮೃತಪಟ್ಟಿದ್ದಾರೆ. ಮರಾಠವಾಡ ಪ್ರದೇಶದ ಲಾತೂರ್‌ನ ಹಿರಿಯ ಕಾಂಗ್ರೆಸ್ ನಾಯಕರಾದ ನೀಲಂಗೇಕರ್ ಅವರು ಜೂನ್ 1985 ರಿಂದ ಮಾರ್ಚ್ 1986 ರವರೆಗೆ ರಾಜ್ಯ ಮುಖ್ಯಮಂತ್ರಿಯಾಗಿದ್ದರು.
ಪತ್ನಿಯ ಕೊಲೆ ಮಾಡಿ ಪರಾರಿ: ಅಮ್ಮನ ಶವದೊಂದಿಗೆ ರಾತ್ರಿ ಕಳೆದ ಕಂದಮ್ಮಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
