ಪುದುಚೆರಿ:ಯಾರಾದರೂ ನನಗೆ 5 ಕೋಟಿ ರೂಪಾಯಿ ಕೊಟ್ಟರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲೆ ಮಾಡುತ್ತೇನೆ ಎಂದು ಫೇಸ್​ಬುಕ್​ನಲ್ಲಿ ವ್ಯಕ್ತಿಯೊಬ್ಬ ಪೋಸ್ಟ್​ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.
ಪುದುಚೆರಿಯ ಆರ್ಯಂಕುಪ್ಪಂ ಗ್ರಾಮದ ನಿವಾಸಿಯಾಗಿರುವ ಆರೋಪಿಯನ್ನು 43 ವರ್ಷದ ಸತ್ಯ ಆನಂದಂ ಎಂದು ಗುರುತಿಸಲಾಗಿದೆ. ಫೇಸ್​ಬುಕ್​ನಲ್ಲಿ ಇಂಥದ್ದೊಂದು ಪೋಸ್ಟ್​ ಹಾಕಿದ್ದ. ಕಾರು ಚಾಲಕನೋರ್ನ ಈ ಪೋಸ್ಟ್ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದ.
ಈ ಪೋಸ್ಟ್ ಸಾಕಷ್ಟು ವೈರಲ್​ ಆಗಿತ್ತು. ನಂತರ ಪೊಸ್ಟ್​ ಕುರಿತಂತೆ ದೂರು ಬಂದ ಮೇಲೆ ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಖಾತೆಯ ಮೂಲ ಪರಿಶೀಲಿಸಿದ್ದಾರೆ. ಆತನ ಜಾಡು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದು ಅವನನ್ನು ಬಂಧಿಸಲಾಗಿದೆ.
ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು, ಈ ಪೋಸ್ಟ್​ ಹಾಕಿರುವ ಉದ್ದೇಶವೇನು? ತಾನು ಪ್ರಸಿದ್ಧಿಗೆ ಬರುವ ಉದ್ದೇಶದಿಂದ ಹೀಗೆ ಮಾಡಿದ್ದಾನಾ ಅಥವಾ ಇದರ ಹಿಂದೆ ಇನ್ನಾವುದಾದರೂ ದುರುದ್ದೇಶವಿದೆಯೇ ಎಂದು ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.
ಸತ್ಯ ಆನಂದಂ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 505 (1) ಮತ್ತು 505 (2) (ಸಾರ್ವಜನಿಕ ಕಿಡಿಗೇಡಿತನಗಳಿಗೆ ಕಾರಣವಾಗುವ ಹೇಳಿಕೆಗಳನ್ನು ನೀಡುವುದು ಮತ್ತು ವರ್ಗಗಳ ನಡುವೆ ದ್ವೇಷ, ಅಥವಾ ಕೆಟ್ಟ ಇಚ್ಚೆಯನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮದುವೆಯಾಗುವೆ ಎಂದು ಹಲವು ಬಾರಿ ರೇಪ್​​ ಮಾಡಿದ ಎಂದ ಯುವತಿ: ಶಾಸಕನ ವಿರುದ್ಧ ಎಫ್​ಐಆರ್​

ಅಪ್ರಾಪ್ತೆ ಸ್ವ ಇಚ್ಛೆಯಿಂದ ಮದುವೆಯಾದರೆ ಗಂಡನ ಜತೆ ಇರಬಹುದೆ? ಹೈಕೋರ್ಟ್​ ಏನು ಹೇಳಿದೆ ನೋಡಿ…

‘ಪುಣ್ಯಕ್ಕೆ ಭಗವಾನ್​ ಭಾರತದಲ್ಲಿ ಹುಟ್ಟಿದ್ದಾರೆ- ಪಾಕ್​ನಲ್ಲಿ ಆಗಿದ್ದರೆ ಇಷ್ಟೊತ್ತಿಗೆ ಅವರ ತಲೆ ಹೋಗ್ತಿತ್ತು’

ಅಂಡಾಶಯದಲ್ಲಿ ನೀರುಗುಳ್ಳೆಗಳಿವೆ, ಮಕ್ಕಳಾಗಲು ತೊಂದರೆಯಾಗುತ್ತದೆ? ಪರಿಹಾರವೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 11 =
Remember me
