ಅಮರಾವತಿ (ಆಂಧ್ರಪ್ರದೇಶ):ಕಳೆದ ಮೇ ತಿಂಗಳಿನಲ್ಲಿ ಭಾರಿ ಅನಾಹುತ ಸೃಷ್ಟಿಸಿದ್ದ ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯ ಅಚ್ಯುತಪುರಂನ ಸೀಡ್ಸ್ ಗಾರ್ಮೆಂಟ್ ಕಾರ್ಖಾನೆಯಲ್ಲಿ ಪುನಃ ದುರ್ಘಟನೆ ನಡೆದಿದೆ.
ರಾಸಾಯನಿಕ ಅನಿಲ ಸೋರಿಕೆಯಿಂದಾಗಿ ಒಂದು ವಾರ ಮುಚ್ಚಿದ್ದ ಈ ಕಾರ್ಖಾನೆ ಪುನಃ ಆರಂಭಿಸಲಾಗಿತ್ತು. ಮತ್ತೆ ಎರಡು ತಿಂಗಳಿನಲ್ಲಿಯೇ ಮತ್ತೊಮ್ಮೆ ಇದೇ ಘಟನೆ ಮರುಕಳಿಸಿದ್ದು, ಹೆಚ್ಚು ಮಹಿಳಾ ಉದ್ಯೋಗಿಗಳು ಅಸ್ವಸ್ಥಗೊಂಡಿದ್ದಾರೆ. ರಾಸಾಯನಿಕ ಅನಿಲ ಸೋರಿಕೆಯಿಂದಾಗಿ ಕಾರ್ಮಿಕರ ಜೀವ ಅಪಾಯದಲ್ಲಿದೆ.
ಈ ಕಾರ್ಖಾನೆಯಲ್ಲಿ ಸುಮಾರು 4 ಸಾವಿರ ಕಾರ್ಮಿಕರು ‘ಬಿ’ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯ ಮಹಿಳಾ ಉದ್ಯೋಗಿಗಳು ಇದ್ದಾರೆ. ವಿಷಾನಿಲ ಸೇವನೆಯಿಂದ ಉದ್ಯೋಗಿಗಳು ಸ್ಥಳದಲ್ಲೇ ವಾಂತಿ ಮಾಡಿಕೊಂಡು ಮೂರ್ಛೆ ಹೋಗಿ ಬಿದ್ದರು. ತಕ್ಷಣವೇ ಅಸ್ವಸ್ಥಗೊಂಡ ಕೆಲವರಿಗೆ ಕಾರ್ಖಾನೆ ಆವರಣದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಉಳಿದವರನ್ನು ಅಚ್ಯುತಪುರಂ ಮತ್ತು ಅನಕಾಪಲ್ಲಿಯಲ್ಲಿರುವ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಕಾರ್ಖಾನೆಯ ಬಸ್‌ಗಳು, ಕಾರುಗಳು ಮತ್ತು ಆಂಬ್ಯುಲೆನ್ಸ್‌ಗಳಲ್ಲಿ ಸಾಗಿಸಲಾಗಿದೆ.
ಕಳೆದ ಬಾರಿ ಘಟನೆ ನಡೆದಾಗ ಅಧಿಕಾರಿಗಳು ತನಿಖೆ ನಡೆಸಿ ಸುಮಾರು ಒಂದು ವಾರ ಕಾರ್ಖಾನೆ ಮುಚ್ಚಿಸಿದ್ದರೂ ಪುನಃ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಖಾನೆಯಲ್ಲಿ ರಾಸಾಯನಿಕ ಅನಿಲ ಸೋರಿಕೆ ಕುರಿತು ಹೈದರಾಬಾದ್‌ನ ಐಐಸಿಟಿ ಸೇರಿದಂತೆ ಇತರ ಸಂಸ್ಥೆಗಳು ತನಿಖಾ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಿವೆ. ಆದರೆ, ಇದುವರೆಗೂ ವರದಿಗಳನ್ನು ಸರ್ಕಾರ ಬಹಿರಂಗಪಡಿಸಿಲ್ಲ ಎಂದು ಹೇಳಲಾಗುತ್ತಿದೆ.(ಏಜೆನ್ಸೀಸ್​)

ನೂರಾರು ಕೋಟಿ ರೂ. ಕಟ್ಟಡ, ಕಾರ್ಮಿಕರ ಜೀವ ಮಾತ್ರ ಬಲು ಅಗ್ಗ: ಭದ್ರತೆ ಇಲ್ಲದೇ ನಾಲ್ವರು ಕೆಲಸಗಾರರ ದುರ್ಮರಣ!

ಆತ ಮಧ್ಯರಾತ್ರಿ ಕರೆದಾಗ ಹೋದ್ರೆ ಸಿನಿಮಾದಲ್ಲಿ ಛಾನ್ಸ್​, ಇಲ್ಲದಿದ್ರೆ ಔಟ್​: ಕರಾಳ ಸತ್ಯ ಬಿಚ್ಚಿಟ್ಟ ನಟಿ ಮಲ್ಲಿಕಾ

VIDEO: ಬ್ಯಾಗ್​ ಕೆಳಗಿಟ್ಟು ಟ್ರೋಲ್ ಆದ ಸಂಸದೆ!​ ಕ್ಯಾಮೆರಾ ಕಣ್ಣಿಗೆ ಬಿದ್ದು ರಟ್ಟಾಗೋಯ್ತು ಈ ಗುಟ್ಟು…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − 17 =
Remember me
