ಮುಂಬೈ:ಹನುಮಾನ್ ಚಾಲೀಸಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಏಪ್ರಿಲ್ 23 ರಂದು ಬಂಧಿಸಿದರುಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಹಾರಾಷ್ಟ್ರ ಸಂಸದೆ ನವ್​ನೀತ್ ರಾಣಾ ಹಾಗೂ ಆಕೆಯ ಪತಿ, ಶಾಸಕರೂ ಆಗಿರುವ ರವಿ ರಾಣಾ ಅವರಿಗೆ ಕೋರ್ಟ್​ ಜಾಮೀನು ದೊರೆತಿದ್ದು, ನವನೀತ್‌ ಅವರು ಬಿಡುಗಡೆಯಾಗಿದ್ದಾರೆ.
ರಾಷ್ಟ್ರದ್ರೋಹದ ಆರೋಪದ ಮೇಲೆ ನವನೀತ‌ ಬೈಕುಲ್ಲಾ ಜೈಲಿನಿಂದ ಬಂಧಿಯಾಗಿದ್ದರೆ ಅವರ ಪತಿ ನೆರೆಯ ನವಿ ಮುಂಬೈನ ತಲೋಜಾ ಜೈಲಿನಲ್ಲಿದ್ದಾರೆ. ಇಬ್ಬರಿಗೂ ಜಾಮೀನು ಸಿಕ್ಕರೂ ಸದ್ಯ ನವನೀತ್‌ ಮಾತ್ರ ಬಿಡುಗಡೆಯಾಗಿದ್ದು, ರವಿಯವರು ಶೀಘ್ರದಲ್ಲಿ ಬಿಡುಗಡೆಯಾಗಲಿದ್ದಾರೆ.
ನವನೀತ್‌ ಅವರು ಜೈಲಿನಿಂದ ಬಿಡುಗಡೆಯಾದ ನಂತರ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನಿವಾಸ ಮಾತೋಶ್ರೀ ಎದುರು ಹನುಮಾನ್ ಚಾಲೀಸಾ ಪಠಿಸುವುದಾಗಿ ಶಾಸಕ ರವಿ ರಾಣಾ ಹಾಗೂ ಸಂಸದೆ ನವ್​ನೀತ್ ರಾಣಾ ದಂಪತಿ ಬೆದರಿಕೆ ಒಡ್ಡಿರುವ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಸೇನೆಯ ಕಾರ್ಯಕರ್ತರು ನಗರದ ಹಲವೆಡೆ ಜಮಾಯಿಸಿದ್ದಲ್ಲದೆ, ಮಾತೋಶ್ರೀ ಮುಂದೆಯೂ ಸೇರಿದ್ದರು. ಅಲ್ಲದೆ ಶಿವಸೇನೆ ಕಾರ್ಯಕರ್ತರ ದೂರಿನ ಮೇರೆಗೆ ಪೊಲೀಸರು ಇವರನ್ನು ಬಂಧಿಸಿದ್ದರು.
ತಲಾ 50 ಸಾವಿರ ರೂಪಾಯಿಗಳ ಶ್ಯೂರಿಟಿ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ವಿಷಯಗಳ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಬಾರದು. ಸಾಕ್ಷ್ಯ ನಾಶ ಪಡಿಸಬಾರದು, ಯಾವುದೇ ಸಾಕ್ಷಿದಾರರ ಜತೆ ಯಾವುದೇ ರೀತಿಯ ಸಂಪರ್ಕ ಇಟ್ಟುಕೊಳ್ಳಬಾರದು ಎಂಬ ಷರತ್ತುಗಳನ್ನು ಕೋರ್ಟ್​ ವಿಧಿಸಿ ಜಾಮೀನು ಮಂಜೂರು ಮಾಡಿದೆ.
ತನಿಖೆಗೆ ಸಹಕರಿಸುವಂತೆ ದಂಪತಿಗೆ ನ್ಯಾಯಾಲಯ ಆದೇಶಿಸಿದೆ. ಜತೆಗೆ, ತನಿಖಾಧಿಕಾರಿ ಕರೆದರೆ ಹಾಜರಾಗಬೇಕು. ಠಾಣೆಗೆ ಕರೆಸುವಾಗ ಅಧಿಕಾರಿಗಳು ದಂಪತಿಗೆ ಕನಿಷ್ಠ 24 ಗಂಟೆಗಳ ಸೂಚನೆಯನ್ನು ನೀಡಬೇಕು ಎಂದು ತೀರ್ಪಿನಲ್ಲಿ ಹೇಳಲಾಗಿದೆ.
ರಾಹುಲ್‌ ಜೀ… ವೈಟ್‌ ಚಾಲೆಂಜ್‌ಗೆ ರೆಡಿನಾ? ನೇಪಾಳದ ಪಾರ್ಟಿ ಬೆನ್ನಲ್ಲೇ ಶುರುವಾಯ್ತು ಹೊಸ ಸವಾಲ್‌!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
