ಹೈದರಾಬಾದ್:ಭಾರೀ ಕುತೂಹಲ ಮೂಡಿಸಿರುವ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಕುತೂಹಲದ ಘಟ್ಟ ತಲುಪಿದ್ದು, ಮುನ್ನಡೆಯಲ್ಲಿದ್ದ ಬಿಜೆಪಿಯನ್ನು ಮೀರಿಸಿ ಟಿಆರ್​ಎಸ್​ ಮುನ್ನಡೆ ಸಾಧಿಸಿದೆ.
ಇದಾಗಲೇ 11 ಕ್ಷೇತ್ರಗಳಲ್ಲಿ ಗೆದ್ದಿರುವ ಟಿಆರ್​ಎಸ್​  57 ವಾರ್ಡ್​ಗಳಲ್ಲಿ ಮುನ್ನಡೆಯಲ್ಲಿದ್ದರೆ, ಎಂಐಎಂಐಎಂ 10 ಕಡೆ ಗೆದ್ದಿದ್ದು 33 ಕಡೆಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಒಂದು ಕಡೆ ಗೆದ್ದಿದ್ದು 36 ವಾರ್ಡ್​ಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್​ ಒಂದು ಕಡೆ ಗೆಲುವು ಸಾಧಿಸಿದ್ದು, ಇನ್ನೊಂದು ವಾರ್ಡ್​ನಲ್ಲಿ ಮುನ್ನಡೆಯಲ್ಲಿದೆ.
ಒಟ್ಟು 74 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಜಿಎಚ್​ಎಂಸಿ 150 ವಾರ್ಡ್​ಗಳನ್ನು ಹೊಂದಿದ್ದು, 1,122 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕರೊನಾ ವೈರಸ್​ ಕಾರಣದಿಂದ ಮತಪತ್ರ ಬಳಸಿ ಚುನಾವಣೆ ನಡೆಸಲಾಗಿದೆ.
ಇಂದು ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. 8,152 ಸಿಬ್ಬಂದಿ ಮತ ಎಣಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಕರೊನಾ ವೈರಸ್​ ಕಾರಣದಿಂದ ಮತಪತ್ರ ಬಳಸಿ ಚುನಾವಣೆ ನಡೆಸಲಾಗಿದೆ.
ಇನ್ನು ಟಿಆರ್‌ಎಸ್ ಮುನ್ನಡೆ ಸಾಧಿಸುತ್ತಿದ್ದಂತೇ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಪುತ್ರಿ ಹಾಗೂ ಟಿಆರ್‌ಎಸ್ ನಾಯಕಿ ಕೆ. ಕವಿತಾ, ಮುಂದಿನ 2-3ಗಂಟೆಗಳಲ್ಲಿ ಸ್ಪಷ್ಟ ಚಿತ್ರಣ ಹೊರಹೊಮ್ಮಲಿದೆ. ಟಿಆರ್‌ಎಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಹೈದರಾಬಾದ್ ಜನರನ್ನು ವಿಭಜಿಸಲು ಬಂದಿದ್ದ ಬಿಜೆಪಿಗೆ ತಕ್ಕ ಶಾಸ್ತಿ ಆಗಲಿದೆ ಎಂದು ಅವರು ಹೇಳಿದ್ದಾರೆ.
ದಿನದಿಂದ ದಿನಕ್ಕೆ ಕಲ್ಲಾಗಿ ಪರಿವರ್ತನೆಯಾಗುತ್ತಿದೆ ಈ ಬಾಲಕನ ದೇಹ!

ಬೆತ್ತಲೆಯಾಗಿ ಲಂಡನ್​ ಸುತ್ತಿದ ಸುಂದರಿ- ಇದರ ಕಾರಣ ಕೇಳಿ ಭೇಷ್ ಎಂದ ನೆಟ್ಟಿಗರು!

ದಂಡ ಕಟ್ವಿಲ್ವಾ? ಪಾರ್ಕಿಂಗ್​ ಜಾಗದಿಂದ್ಲೇ ನಿಮ್ ಗಾಡಿ ‘ಮಾಯ’ ಆಗ್ಬೋದು ಎಚ್ಚರ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen + 10 =
Remember me
