ನವದೆಹಲಿ:ದೆಹಲಿಯಲ್ಲಿ ಚುನಾಯಿತ ಸರ್ಕಾರದ ಅಧಿಕಾರವನ್ನು ಮಿತಿಗೊಳಿಸುವ ಕಾಯ್ದೆ ಜಾರಿಗೆ ಬಂದಿದ್ದು, ಇದರಿಂದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಅಧಿಕಾರಕ್ಕೆ ಭಾಗಶಃ ಕಡಿವಾಣ ಬಿದ್ದಿದೆ. ಇಂದಿನಿಂದ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಈಗ ಕೇಂದ್ರಾಡಳಿತ ಪ್ರದೇಶದ ‘ಸರ್ಕಾರ’ ಎಂದು ಘೋಷಣೆಯಾಗಿದೆ.
ಲೆಫ್ಟಿನೆಂಟ್ ಗವರ್ನರ್ ಅವರ ಅಧಿಕಾರವನ್ನು ಹೆಚ್ಚಿಸುವ ಮತ್ತು ದೆಹಲಿಯಲ್ಲಿ ಚುನಾಯಿತ ಸರ್ಕಾರದ ಅಧಿಕಾರವನ್ನು ಮಿತಿಗೊಳಿಸುವ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಕಾಯ್ದೆ 2021 ಕ್ಕೆ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಾರ್ಚ್ 28ರಂದು ಸಮ್ಮತಿ ನೀಡಿದ್ದರು. ಅದು ಈಗ ಜಾರಿಗೊಂಡಿದೆ.
ಇದರ ಅನ್ವಯ ‘ಸರ್ಕಾರ’ ಎನಿಸಿರುವ ಲೆಫ್ಟಿನೆಂಟ್ ಗವರ್ನರ್ ಮುಖ್ಯಮಂತ್ರಿಗಳಿಗಿಂದ ಹೆಚ್ಚಿನ ಅಧಿಕಾರ ಪಡೆದಿರುತ್ತಾರೆ. ದೆಹಲಿ ಸರ್ಕಾರವು ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಲೆಫ್ಟಿನೆಂಟ್ ಗವರ್ನರ್ ಅಭಿಪ್ರಾಯ ಪಡೆದುಕೊಳ್ಳಲೇಬೇಕಾಗುತ್ತದೆ.
ದೆಹಲಿಯಲ್ಲಿ ಇನ್ನುಮುಂದೆ ಯಾವುದೇ ಮಹತ್ವದ ನಿರ್ಧಾರ, ಕ್ರಮ ಕೈಗೊಳ್ಳುವ ಮೊದಲು ಲೆಫ್ಟಿನೆಂಟ್ ಗವರ್ನರ್ ಅವರ ಅಭಿಪ್ರಾಯವನ್ನು ತೆಗೆದುಕೊಳ್ಳುವುದು ಕಡ್ಡಾಯವಾಗಿದೆ. ದಿನನಿತ್ಯದ ಆಡಳಿತದ ವಿಷಯಗಳನ್ನು ಪರಿಗಣಿಸಲು ಅಥವಾ ಆಡಳಿತಾತ್ಮಕ ನಿರ್ಧಾರಗಳಿಗೆ ಸಂಬಂಧಿಸಿದಂತೆ ವಿಚಾರಣೆಗಳನ್ನು ನಡೆಸಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರಕ್ಕೆ ಇನ್ನು ಅನುಮತಿ ಇರುವುದಿಲ್ಲ. ಈ ಹಿಂದೆ ಸುಪ್ರೀಂಕೋರ್ಟ್‌ ನೀಡಿದ್ದ ನಿರ್ದೇಶನದ ಮೇರೆಗೆ ಈ ಕಾಯ್ದೆ ಜಾರಿಗೊಂಡಿದೆ.
ಮಹಿಳೆಯೊಬ್ಬರ ಪತಿಗೆ ಜೀವ ನೀಡಲು ತಮ್ಮ ಬದುಕನ್ನು ಬಲಿಕೊಟ್ಟು ಕೊನೆಯುಸಿರೆಳೆದ ಆರ್‌ಎಸ್‌ಎಸ್‌ ಕಾರ್ಯಕರ್ತ

ಲಸಿಕೆ ಹಾಕಿಸಿಕೊಳ್ಳಲು ಇಂದಿನಿಂದ ನೋಂದಣಿ ಪ್ರಕ್ರಿಯೆ ಶುರು- ನೀವೇನು ಮಾಡಬೇಕು? ಇಲ್ಲಿದೆ ಡಿಟೇಲ್ಸ್‌

ಇದು ‘ಪಾಸಿಟಿವ್‌’ ಸಪ್ತಪದಿ: ಕರೊನಾ ಬಂದರೂ ಡೋಂಟ್‌ ಕೇರ್‌- ನಡೆಯಿತು ಹೀಗೊಂದು ಮದುವೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 10 =
Remember me
