ಭುವನೇಶ್ವರ:ತುಂಬು ಗರ್ಭಿಣಿಯನ್ನು ಉರಿಬಿಸಿಲಿನಲ್ಲಿ ಮೂರು ಕಿಲೋ ಮೀಟರ್‌ ನಡೆಯುವಂತೆ ಮಾಡಿದ ಅಮಾನವೀಯ ಘಟನೆ ಭುವನೇಶ್ವರದ ಮಯೂರ್‌ಭಂಜ್‌ನಲ್ಲಿ ನಡೆದಿದೆ. ಹೀಗೆ ಮಾಡಿದರು ಓರ್ವ ಲೇಡಿ ಪೊಲೀಸ್‌ ಇನ್ಸ್‌ಪೆಕ್ಟರ್‌!
ಪತಿಯ ಜತೆ ಬೈಕ್‌ನಲ್ಲಿ ಹಿಂದೆ ಕುಳಿತಿದ್ದ 9 ತಿಂಗಳ ಗರ್ಭಿಣಿ ಹೆಲ್ಮೆಟ್ ಧರಿಸಿಲ್ಲ ಎನ್ನುವ ಕಾರಣ ಉರಿಬಿಸಿಲಿನಲ್ಲಿ 3 ಕಿ.ಮೀ ನಡೆಸಿದ್ದಾರೆ ರೀನಾ ಬಕ್ಸಲ್ ಎಂದು ಪೊಲೀಸ್‌ ಇನ್ಸ್‌ಪೆಕ್ಟರ್‌. ಈ ಘಟನೆ ನಡೆಯುತ್ತಿದ್ದಂತೆಯೇ ಭಾರಿ ಆಕ್ರೋಶ ವ್ಯಕ್ತಪಡಿಸಿರುವ ಪೊಲೀಸ್‌ ಇಲಾಖೆ ರೀನಾರನ್ನು ಅಮಾನತು ಮಾಡಿದೆ.
ಪತಿ ವಿಕ್ರಮ್ ಜತೆ ಗುರುಬರಿ ಅವರು ಆಸ್ಪತ್ರೆಗೆ ತೆರಳುತ್ತಿದ್ದರು. ಹಿಂಬದಿ ಕುಳಿತಿದ್ದ ಅವರು ಹೆಲ್ಮೆಟ್ ಧರಿಸಿರಲಿಲ್ಲ. ಅವರನ್ನು ತಡೆದು ನಿಲ್ಲಿಸಿದ್ದ ಇನ್ಸ್‌ಪೆಕ್ಟರ್‌, ದಂಡ ಪಾವತಿಸಲು ವಿಕ್ರಮ್ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಆದರೆ ಈ ವೇಳೆ ಪತ್ನಿಯನ್ನು ಅವರ ಜತೆ ಹೋಗಲು ಬಿಟ್ಟಿರಲಿಲ್ಲ.
ಅಲ್ಲಿಂದ ಸುಮಾರು ಮೂರು ಕಿಲೋ ಮೀಟರ್‌ ದೂರ ಪೊಲೀಸ್‌ ಠಾಣೆ ಇತ್ತು. ಆದ್ದರಿಂದ ಅನಿವಾರ್ಯವಾಗಿ 27 ವರ್ಷದ ಗರ್ಭಿಣಿ ಗುರುಬರಿ ನಡೆದುಕೊಂಡು ಹೋಗಬೇಕಾಗಿ ಬಂತು. ಈ ವಿಷಯ ತಿಳಿಯುತ್ತಲೇ ಎಸ್ಪಿ ಪರ್ಮಾರ್ ಸ್ಮಿಟ್ ಪರಷೋತ್ತಮ್ ದಾಸ್ ರೀನಾ ಬಕ್ಸಲ್ ಅವರನ್ನು ಅಮಾನತುಗೊಳಿಸಿದ್ದಾರೆ.
ತೈಲ ಸಂಸ್ಕರಣಾ ಘಟಕದಲ್ಲಿ ಭಯಾನಕ ಸ್ಫೋಟ: ಮುಗಿಲಿಗೆ ಚಿಮ್ಮಿದ ಅಗ್ನಿಯ ಜ್ವಾಲೆ: ಹಲವರು ನಾಪತ್ತೆ

ಚೀನಾದ ಲಸಿಕೆ ಪಡೆದು ಪ್ರಧಾನಿ ಕರೊನಾ ಸೋಂಕು ತರಿಸಿಕೊಂಡ ಬೆನ್ನಲ್ಲೇ ಈಗ ರಾಷ್ಟ್ರಪತಿ ಸರದಿ!

ಏಪ್ರಿಲ್‌ ತಿಂಗಳಿನಲ್ಲಿ ಬ್ಯಾಂಕ್‌ನಲ್ಲಿ ಕೆಲಸ ಇದೆಯೆ? ಹಾಗಿದ್ದರೆ ರಜೆಯ ಬಗ್ಗೆ ತಿಳಿದುಕೊಳ್ಳಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen − 8 =
Remember me
