ಮುಂಬೈ:ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಟ್ವೀಟ್​ ಮಾಡಿರುವ ಶಿವಸೇನಾ ಸಂಸದ ಸಂಜಯ್ ರಾವತ್​, ಮಹಾರಾಷ್ಟ್ರ ಓರ್ವ ಸಂವೇದನಾಶೀಲ ಹಾಗೂ ಸುಸಂಸ್ಕೃತ ಮುಖ್ಯಮಂತ್ರಿಯನ್ನು ಕಳೆದುಕೊಂಡಿದೆ ಎಂದು ವಿಷಾದಿಸಿದ್ದಾರೆ.
ಶಿವಸೇನೆ ಸಂಸ್ಥಾಪಕ ಬಾಳ್​ ಠಾಕ್ರೆ ಅವರ ಪರಂಪರೆಯನ್ನು ಮುಂದೆ ತೆಗೆದುಕೊಂಡು ಹೋಗುತ್ತೇವೆ ಮತ್ತು ಇದಕ್ಕಾಗಿ ಜೈಲಿಗೆ ಹೋಗಲು ಸಿದ್ಧ ಎಂದಿರುವ ರಾವುತ್​, ವಿಶ್ವಾಸಘಾತುಕರಿಗೆ ಎಂದಿಗೂ ಒಳ್ಳೆಯದಾಗುವುದಿಲ್ಲ. ಇತಿಹಾಸವನ್ನು ನೋಡಿದಾಗ ಇದು ಸಾಬೀತಾಗಿದೆ ಎಂದು ರೆಬೆಲ್​ ಶಾಸಕರ ವಿರುದ್ಧ ಗರಂ ಆಗಿದ್ದಾರೆ. ಅಧಿಕಾರಕ್ಕಾಗಿ ಶಿವಸೇನೆ ಹುಟ್ಟಿಲ್ಲ, ಶಿವಸೇನೆಗಾಗಿ ಅಧಿಕಾರ ಹುಟ್ಟಿದೆ ಎಂಬುವುದು ಬಾಳಾಸಾಹೇಬ್ ಠಾಕ್ರೆಯವರ ಮಂತ್ರವಾಗಿದೆ. ಹಾಗಾಗಿ ನಾವು ಕೆಲಸ ಮಾಡಿ ಮತ್ತೊಮ್ಮೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ ಎಂದರು.
ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರಲು ಅಗತ್ಯವಿರುವ ಸಂಖ್ಯಾಬಲವನ್ನು ಹೊಂದಿರುವ ಬಿಜೆಪಿ-ಶಿವಸೇನಾ ಬಂಡಾಯ ಶಾಸಕರ ಒಕ್ಕೂಟವು ಸರ್ಕಾರ ರಚಿಸಲಿದ್ದು, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಜುಲೈ 1ರಂದು ಶುಕ್ರವಾರ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಲ್ಲದೇ ಏಕನಾಥ್ ಶಿಂಧೆ ಅವರು ಶನಿವಾರದ ಹೊತ್ತಿಗೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.
ಬಂಡಾಯ ಶಾಸಕರ ಆತ್ಮಗಳು ಸತ್ತಿವೆ. ಅವರ ದೇಹಗಳು ಮಾತ್ರ ಮುಂಬೈಗೆ ಮರಳುತ್ತವೆ ನೋಡುತ್ತಿರಿ.. ಅಸ್ಸಾಂನ ಗುವಾಹಟಿಯಲ್ಲಿರುವ 40 ಬಂಡಾಯ ಶಾಸಕರು ಜೀವಂತ ಶವಗಳಾಗಿದ್ದಾರೆ. ಅವರ ದೇಹಗಳು ಮಾತ್ರ ಇಲ್ಲಿಗೆ ಬರುತ್ತವೆ. ಆದರೆ ಅವರ ಆತ್ಮಗಳು ಮೃತಪಟ್ಟಿವೆ. ಮುಂದೆ ಏನಾಗುತ್ತದೆ ಎನ್ನುವುದು ಆ ಶಾಸಕರಿಗೆ ತಿಳಿದಿದೆ ಎಂದು ಎರಡು ದಿನಗಳ ಹಿಂದೆ ಕಿಡಿ ಕಾರಿದ್ದ ರಾವತ್​, ನಂತರ ತಾನು ಹೇಳಿದ್ದು ಹಾಗಲ್ಲ ಎಂದು ಸಮರ್ಥಿಸಿಕೊಂಡಿದ್ದರು. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಿಲ್ಲ ಮತ್ತು ಶಿವಸೇನಾ ಕೊನೆಯವರೆಗೂ ಹೋರಾಡಲಿದೆ ಎಂದೂ ಹೇಳಿದ್ದರು.
ಸಿಎಂ ಸೀಟಿನಿಂದ ಇಳಿಯುತ್ತಲೇ ಸ್ಟೀರಿಂಗ್​ ಹಿಡಿದ ಠಾಕ್ರೆ: ರಾಜ್ಯಪಾಲರಿಂದ ರಾಜೀನಾಮೆ ಅಂಗೀಕಾರ- ಅಧಿವೇಶನ ರದ್ದು

ವೃಕ್ಷಮಾತೆ ತಿಮ್ಮಕ್ಕನವರಿಗೆ ಬಂಗಾರದ ಕಡಗ ನೀಡಿ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ಕೊಟ್ಟ ಸಿಎಂ: ಇನ್ನೂ ಹಲವು ಕೊಡುಗೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − one =
Remember me
