ಮುಂಬೈ:ಮಹಾರಾಷ್ಟ್ರದಲ್ಲಿ ಆಜಾನ್​ ಮತ್ತು ಹನುಮಾನ್​ ಚಾಲೀಸಾ ವಿವಾದ ತಾರಕಕ್ಕೇರಿದೆ. ಧ್ವನಿವರ್ಧಕಗಳನ್ನು ಬಳಸುವ ಕುರಿತು ಸುಪ್ರೀಂಕೋರ್ಟ್​ ಏನು ಆದೇಶ ಹೊರಡಿಸಿದೆಯೋ ಅದನ್ನು ಪಾಲನೆ ಮಾಡದಿದ್ದರೆ ಆಜಾನ್ ಕೇಳಿಸುವ ಸ್ಥಳಗಳಲ್ಲಿ ಹನುಮಾನ್​ ಚಾಲೀಸಾ ಮೊಳಗಿಸುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್​ ಠಾಕ್ರೆ ನಿನ್ನೆ (ಮೇ 3) ಕರೆ ನೀಡಿದ್ದರು.
ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಬಹಿರಂಗ ಪತ್ರ ಬರೆದಿದ್ದ ಅವರು, ಸುಪ್ರೀಂ ಕೋರ್ಟ್​ ಆದೇಶದಂತೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳ ಮೂಲಕ ಆಜಾನ್ ನುಡಿಸದಂತೆ ಈಗಾಗಲೇ ಸೂಚನೆ ನೀಡಿದೆ. ಇದರಿಂದ ಚಿಕ್ಕಮಕ್ಕಳು, ಅನಾರೋಗ್ಯ ಪೀಡಿತರು, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಇದರ ಹೊರತಾಗಿ ಕೂಡ ಧ್ವನಿವರ್ಧಕ ಕೇಳಿ ಬರುತ್ತಿದ್ದು, ನಿಮ್ಮ ಕಿವಿಗಳ ಮೇಲೆ ಅವುಗಳ ಶಬ್ದ ಬಿದ್ದರೆ, ಅಂತಹ ಸ್ಥಳಗಳಲ್ಲಿ ಹನುಮಾನ್​ ಚಾಲೀಸಾ ಮೊಳಗಿಸಿ ಎಂದು ಕರೆ ಕೊಟ್ಟಿದ್ದರು.
ಹೀಗಿದ್ದರೂ ಕೋರ್ಟ್​ ಆದೇಶ ಪಾಲನೆ ಆಗಿರಲಿಲ್ಲ. ಇದರಿಂದಾಗಿ ಮುಂಬೈನಲ್ಲಿರುವ ಮಸೀದಿ ಬಳಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಧ್ವನಿವರ್ಧಕದಲ್ಲಿ ಹನುಮಾನ್ ಚಾಲೀಸಾ ಪಠಿಸಿದ್ದಾರೆ. ಹನುಮಾನ್​ ಚಾಲೀಸಾ ಜತೆಗೆ ಜೈ ಶ್ರೀರಾಮ್ ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನಾ ಕಾ… ಜೈ ಸೋ’ ಎಂಬ ಘೋಷಣೆಯೂ ಮೊಳಗಿದೆ. ಇದೀಗ ಮಹಾರಾಷ್ಟ್ರವನ್ನು ಉದ್ವಿಗ್ನ ಪರಿಸ್ಥಿತಿಗೆ ದೂಡಿದೆ.
pic.twitter.com/S0t3vi9X48
— Raj Thackeray (@RajThackeray)May 4, 2022

ಈ ನಡುವೆ ರಾಜ್ ಠಾಕ್ರೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ತಂದೆ ಬಾಳಾಸಾಹೇಬ್ ಠಾಕ್ರೆ ಅವರು ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ನಿಷೇಧಿಸುವಂತೆ ಒತ್ತಾಯಿಸಿದ್ದರ ಹಳೆಯ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಬಾಳಾ ಠಾಕ್ರೆ, ಧ್ವನಿವರ್ಧಕಗಳ ಬಳಕೆ ವಿರುದ್ಧ ಎಚ್ಚರಿಕೆ ನೀಡಿರುವುದು ಹಾಗೂ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ತಡೆಯಲಾಗುತ್ತದೆ ಎಂದಿದ್ದಾರೆ.
ಠಾಕ್ರೆ ಅವರು ಎಚ್ಚರಿಕೆ ನೀಡುತ್ತಿದ್ದಂತೆಯೇ 1,144 ಮಸೀದಿಗಳ ಪೈಕಿ 803 ಮಸೀದಿಗಳು ಧ್ವನಿವರ್ಧಕ ಬಳಿಕೆ ಮಾಡಲು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮುಂಬೈನಲ್ಲಿರುವ ಶೇ. 70ರಷ್ಟು ಮಸೀದಿಗಳು ಆಜಾನ್ ನುಡಿಸಲು ಧ್ವನಿವರ್ಧಕ ಬಳಕೆ ಮಾಡಲು ಅನುಮತಿ ಪಡೆದುಕೊಂಡಂತಾಗಿದೆ.
ಹಂದಿಗಳ ಮೇಲೆ ಕೇರಳ ಕೆಂಗಣ್ಣು: ಕೇಂದ್ರಕ್ಕೆ ಈ ರೀತಿ ಪತ್ರ ಬರೆದ ಸರ್ಕಾರ- ಬಂದ ಉತ್ತರ ಹೀಗಿತ್ತು…

ಕೋರ್ಟ್​ ಕಟಕಟೆಯಲ್ಲಿ ನೆಹರೂ, ಎಡ್ವಿನಾ ಲವ್​ ಸ್ಟೋರಿ: ಇಬ್ಬರ ನಡುವಿನ ಪತ್ರ ಬಹಿರಂಗಕ್ಕೆ ನಕಾರ

VIDEO: ರಂಜಾನ್​ ದಿನವೇ ನಗರಸಭೆ ಹಾಲಿ-ಮಾಜಿ ಸದಸ್ಯರ ನಡುವೆ ಮಾರಾಮಾರಿ: 12 ಮಂದಿ ಆಸ್ಪತ್ರೆಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
