ಲಖನೌ:ದೇಶದಲ್ಲಿ ಕರೊನಾ ನಡುವೆಯೇ ಇದೀಗ ಹಕ್ಕಿಜ್ವರದ ಭೀತಿ ಶುರುವಾಗಿದೆ. ಎಲ್ಲೆಂದರಲ್ಲಿ ಕಾಗೆ, ಕೋಳಿ, ಬಾತುಕೋಳಿ ಸೇರಿದಂತೆ ಹಲವಾರು ಪಕ್ಷಿಗಳು ಪ್ರಾಣ ಕಳೆದುಕೊಳ್ಳುತ್ತಿವೆ. ಇದಾಗಲೇ ಕೆಲವು ರಾಜ್ಯಗಳಲ್ಲಿ ಸತ್ತಿರುವ ಪಕ್ಷಿಗಳಲ್ಲಿ ಪಾಸಿಟಿವ್​ ಕಾಣಿಸಿಕೊಂಡಿದ್ದು, ಜ್ವರದ ಭೀತಿ ಎದುರಾಗಿದೆ. ಲಕ್ಷಾಂತರ ಕೋಳಿಗಳ ಮಾರಣಹೋಮವೂ ನಡೆದಿದೆ.
ಸದ್ಯ ಭಾರತದಲ್ಲಿ ಕೇರಳ , ಮಧ್ಯ ಪ್ರದೇಶ, ಹಿಮಾಚಲ ಪ್ರದೇಶ ಹಾಗೂ ರಾಜಸ್ಥಾನದಲ್ಲಿ ಹಕ್ಕಿ ಜ್ವರ ಪ್ರಕರಣಗಳು ವರದಿಯಾಗಿವೆ. ಇಂಥ ಆತಂಕದ ಸ್ಥಿತಿಯ ನಡುವೆ ಸಮಾಜವಾದಿ ಪಕ್ಷದ ನಾಯಕ ಐಪಿ ಸಿಂಗ್​ ಮಾಡಿರುವ ಟ್ವೀಟ್​ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
https://twitter.com/IPSinghSp/status/1347429231442030592
ಅಷ್ಟಕ್ಕೂ ಸಿಂಗ್​ ಅವರು ಹೇಳಿರುವುದು ಏನೆಂದರೆ, ಪ್ರಧಾನಿ ನರೇಂದ್ರ ಮೋದಿಯವರೇ ಹಕ್ಕಿಜ್ವರ ಈ ಪರಿಯಲ್ಲಿ ಹರಡಲು ಕಾರಣ. ಅವರು ಹಿಂದೊಮ್ಮೆ ನವಿಲಿಗೆ ಕಾಳು ಹಾಕಿದ್ದರು. ಅದರಿಂದಲೇ ಹಕ್ಕಿಜ್ವರ ಶುರುವಾಗಿದ್ದು ಎಂದಿದ್ದಾರೆ!
ಪ್ರಧಾನಿ ಮೋದಿ ಹಕ್ಕಿಗಳಿಗೆ ಕಾಳು ನೀಡಿದ ಬಳಿಕವೇ ದೇಶದಲ್ಲಿ ಹಕ್ಕಿ ಜ್ವರ ಶುರುವಾಗಿದೆ ಎಂದಿರುವ ಅವರು, ಟ್ವಿಟರ್​ನಲ್ಲಿ ನವಿಲಿಗೆ ಪ್ರಧಾನಿ ಮೋದಿ ಕಾಳು ನೀಡುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಮನುಷ್ಯನಿಗೆ ಏನು ಮಾಡೋದು..? ಇವರು ಆ ಬಡಪಾಯಿ ಹಕ್ಕಿಗಳಿಗೆ ಕಾಳು ಹಾಕಿದ್ರು. ಈಗ ಅವು ಹಕ್ಕಿ ಜ್ವರದಿಂದ ಬಳಲುವಂತಾಗಿದೆ ಎಂದು ತಮ್ಮ ಟ್ವೀಟ್​ಗೆ ಶೀರ್ಷಿಕೆ ನೀಡಿದ್ದಾರೆ.
ಕೋಳಿಗಳಲ್ಲಿ ಕಂಡುಬಂತು ಪಾಸಿಟಿವ್​: ಮಾಂಸದಂಗಡಿ ಮುಚ್ಚಲು ಆದೇಶಿಸಿದ ಮಧ್ಯಪ್ರದೇಶ ಸರ್ಕಾರ

4 ಲಕ್ಷಕ್ಕೂ ಅಧಿಕ ಕೋಳಿಗಳ ಸಾವು! ಸಾಕಪ್ಪಾ ಸಾಕು ಚಿಕನ್​ ಸಹವಾಸ ಎನ್ನುತ್ತಿದ್ದಾರೆ ಇಲ್ಲಿಯ ಜನ

ಮುಂಬೈ ದಾಳಿ ರೂವಾರಿ ಲಖ್ವಿಗೆ 15 ವರ್ಷ ಜೈಲುಶಿಕ್ಷೆ ನೀಡಿದ ಪಾಕ್​ ಕೋರ್ಟ್​

VIDEO: ಅಮೆರಿಕ ಹಿಂಸಾಚಾರದ ವೇಳೆ ಟ್ರಂಪ್​ ಪುತ್ರ- ಪ್ರೇಯಸಿ ಏನು ಮಾಡುತ್ತಿದ್ದರು ನೋಡಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − seventeen =
Remember me
