ಸೌದಿ ಅರೇಬಿಯಾ:ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಕಡಿಮೆ ಮಾಡುವುದಕ್ಕೆ ಸಂಬಂಧಿಸಿದಂತೆ ಇದಾಗಲೇ ಕರ್ನಾಟಕ ಸೇರಿದಂತೆ ಭಾರತದ ಕೆಲವು ರಾಜ್ಯಗಳು ಘೋಷಣೆ ಮಾಡಿವೆ. ಆದರೆ ಇದೀಗ ಮುಸ್ಲಿಂ ದೇಶವಾಗಿರುವ ಸೌದಿ ಅರೇಬಿಯಾದಲ್ಲಿಯೂ ಇಂಥದ್ದೊಂದು ಕಠಿಣ ನಿಯಮವನ್ನು ಜಾರಿಗೊಳಿಸಲಾಗಿದೆ.
ದಿನದಲ್ಲಿ ಎರಡೇ ಬಾರಿ ಧ್ವನಿವರ್ಧಕ ಬಳಕೆ ಮಾಡಬೇಕು, ಅದು ಕೂಡ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಶಬ್ದ ಮಾಡಿ ಅದರ ಬಳಕೆ ಮಾಡಬೇಕು. ಇಲ್ಲದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸೌದಿ ಅರೇಬಿಯಾ ಆದೇಶ ಹೊರಡಿಸಿದೆ. ಅಜಾನ್ (ಪ್ರಾರ್ಥನೆಗಾಗಿ ಕರೆ) ಮತ್ತು ಇಕಾಮಾತ್‌ಗೆ (ಪ್ರಾರ್ಥನೆ ಸಲ್ಲಿಸುವ ಇಮಾಮ್ ತಮ್ಮ ಜಾಗಕ್ಕೆ ಆಗಮಿಸಿದ್ದಾರೆ ಎಂದು ಹೇಳುವ ಸಲುವಾಗಿನ ಎರಡನೆಯ ಬಾರಿಯ ಪ್ರಾರ್ಥನೆ) ಮಾತ್ರ ಧ್ವನಿವರ್ಧಕ ಬಳಕೆ ಮಾಡಬೇಕು, ಧ್ವನಿವರ್ಧಕಗಳ ಶಬ್ದವನ್ನು ಗರಿಷ್ಠ ಮಟ್ಟದ ಮೂರನೇ ಒಂದು ಭಾಗಕ್ಕೆ ಸೀಮಿತಗೊಳಿಸಬೇಕು ಎಂದು ಸೂಚಿಸಿದೆ ಎಂದು ಸೌದಿ ಗೆಜೆಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

ಸೌದಿ ಇಸ್ಲಾಮಿಕ್ ವ್ಯವಹಾರಗಳ ಸಚಿವ ಅಬ್ದುಲ್‌ ಲತೀಫ್‌ ಅಲ್‌-ಶೇಖ್‌ ಅವರು ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ಎಲ್ಲಾ ಮಸೀದಿಗಳು ಸುತ್ತೋಲೆಯಲ್ಲಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದಿದ್ದಾರೆ. ಷರಿಯಾ ನಿಯಮಗಳ ಪ್ರಕಾರ, ಪ್ರಾರ್ಥನೆಯ ಸಮಯದಲ್ಲಿ ಇಮಾಮ್‌ನ ಧ್ವನಿಯನ್ನು ಮಸೀದಿಯೊಳಗಿನ ಎಲ್ಲರೂ ಕೇಳಬೇಕು. ಆದರೆ ಹೊರಗಿನ ನೆರೆಹೊರೆಯ ಮನೆಗಳಲ್ಲಿನ ಜನರು ಇದನ್ನು ಕೇಳುವ ಅಗತ್ಯವಿಲ್ಲ. ಪ್ರಾರ್ಥನೆಯ ಸಮಯದಲ್ಲಿ ಮಸೀದಿಗಳು ಜೋರಾಗಿ ಧ್ವನಿವರ್ಧಕ ಬಳಕೆ ಮಾಡುತ್ತಿರುವ ಕಾರಣ, ರೋಗಿಗಳು, ವೃದ್ಧರು ಮತ್ತು ಹತ್ತಿರ ವಾಸಿಸುವ ಮಕ್ಕಳಿಗೆ ಸಮಸ್ಯೆಯಾಗುತ್ತಿದೆ. ಆದ್ದರಿಂದ ಇಂಥದ್ದೊಂದು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ಕರ್ನಾಟಕದಲ್ಲಿ ಕೂಡ ಕಳೆದ ಮಾರ್ಚ್‌ ತಿಂಗಳಿನಲ್ಲಿ ಮಸೀದಿಗಳಲ್ಲಿ ಧ್ವನಿವರ್ಧಕ ಬಳಸುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ನಿಯಮ ಪ್ರಕಟಿಸಿದ್ದು, ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಸುವುದಕ್ಕೆ ಸಂಪೂರ್ಣ ನಿಷೇಧ ಮಾಡಲಾಗಿದೆ. ಮಸೀದಿಗಳಲ್ಲಿ ಆಜಾನ್​ ಮತ್ತು ಇತರ ಪ್ರಮುಖ ಪ್ರಕಟಣೆಗಳಿಗೆ ಮಾತ್ರವೇ ಧ್ವನಿವರ್ಧಕ ಬಳಸಬೇಕು. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ರವರೆಗೆ ಬಳಕೆಗೆ ಅವಕಾಶವಿಲ್ಲ. ಆಸ್ಪತ್ರೆ, ಶೈಕ್ಷಣಿಕ ಕೇಂದ್ರಗಳ ಸುತ್ತ ಮುತ್ತಲಿನ 100 ಮೀಟರ್​ ಜಾಗವನ್ನು ಸೈಲೆನ್ಸ್​ ಝೋನ್​ ಎಂದು ಕರೆಯಲಾಗಿದೆ. ಈ ಪ್ರದೇಶದಲ್ಲಿ ಧ್ವನಿವರ್ದಕ ಬಳಕೆಗೆ ಅವಕಾಶವಿಲ್ಲ ಎಂದು ಬೋರ್ಡ್​ ಪ್ರಕಟಣೆಯಲ್ಲಿ ತಿಳಿಸಿದೆ. ಒಂದು ವೇಳೆ ಈ ನಿಯಮಗಳನ್ನು ತಪ್ಪಿದಲ್ಲಿ ಅದಕ್ಕೆ ಸೂಕ್ತ ದಂಡವನ್ನು ವಿಧಿಸುವುದಾಗಿಯೂ ತಿಳಿಸಲಾಗಿದೆ.
‘ನಾನು ಶುದ್ಧ ಸಸ್ಯಾಹಾರಿನಪ್ಪಾ… ನನ್ನ ಹೆಸ್ರಲ್ಲಿ ಮಟನ್‌ ಷಾಪಾ? ತರಕಾರಿ ಇಡೋದಾದ್ರೆ ಹೆಲ್ಪ್‌ ಮಾಡ್ತೇನೆ ನೋಡಿ…’

ಮಿನಿಸ್ಟರ್‌ ಸಾಹೇಬ್ರೆ… ನಾನು ತರಿಸಿದ ಚಿಕನ್‌ ಬಿರಿಯಾನಿಯಲ್ಲಿ ಲೆಗ್‌ಪೀಸ್‌ ಇಲ್ಲ, ಏನ್‌ ಮಾಡ್ಬೇಕು ಹೇಳಿ?

ದಂಪತಿಗೆ ಮಕ್ಕಳಿಲ್ಲದಿದ್ದರೆ ಅವರ ಆಸ್ತಿ ಸ್ವಂತ ತಮ್ಮನ ಮಕ್ಕಳಿಗೆ ಹೋಗುತ್ತಾ? ಅದಕ್ಕಾಗಿ ಏನು ಮಾಡಬೇಕು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − nine =
Remember me
