ನವದೆಹಲಿ:ನೀವು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಗ್ರಾಹಕರಾಗಿದ್ದರೆ, ನಿಮ್ಮ ಅಕೌಂಟ್‌ ಈ ಬ್ಯಾಂಕ್‌ನಲ್ಲಿ ಇದ್ದರೆ ಕೂಡಲೇ ಈ ಒಂದು ಕೆಲಸವನ್ನು ನೀವು ಮಾಡಲೇಬೇಕಿದೆ. ಇಲ್ಲದಿದ್ದರೆ ನಿಮ್ಮ ಬ್ಯಾಂಕ್‌ ಅಕೌಂಟ್‌ ಸಮಸ್ಯೆಯಲ್ಲಿ ಸಿಲುಕಲಿದೆ.
ಅದೇದೆನಂದರೆ ಗ್ರಾಹಕರು ತಮ್ಮ ಕಾಯಂ ಖಾತೆ ಸಂಖ್ಯೆಯನ್ನು (PAN-ಪ್ಯಾನ್‌) ತಮ್ಮ ಆಧಾರ್ ಕಾರ್ಡ್ ಜತೆ ಲಿಂಕ‌ ಮಾಡಬೇಕಿದೆ. ಇದಕ್ಕೆ ಈಗಾಗಲೇ ಹಲವು ಗಡುವು ಕೊಟ್ಟಿರುವ ಬ್ಯಾಂಕ್‌ ಇದೀಗ ಸೆಪ್ಟೆಂಬರ್ 30ರ ಗಡುವು ನೀಡಿದೆ. ಅವಧಿಯ ಒಳಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಬೇಕಿದೆ.
ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಬ್ಯಾಂಕ್‌ ಖುದ್ದು ಮಾಹಿತಿ ನೀಡಿದೆ. ಒಂದು ವೇಳೆ ಸೆ.30ರ ಒಳಗೆ ಈ ರೀತಿ ಮಾಡದೇ ಹೋದರೆ ಗ್ರಾಹಕರು ಸೇವೆಗಳನ್ನು ಪಡೆಯುವಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಬ್ಯಾಂಕ್‌ ಎಚ್ಚರಿಕೆ ನೀಡಿದೆ. ’ನಮ್ಮ ಗ್ರಾಹಕರಿಗೆ ಅನಾನುಕೂಲತೆ ಆಗುವುದನ್ನು ತಪ್ಪಿಸಲು ಮತ್ತು ತಡೆರಹಿತ ಬ್ಯಾಂಕಿಂಗ್ ಸೇವೆಯನ್ನು ಆನಂದಿಸಲು ಆಧಾರ್‌ನೊಂದಿಗೆ ಪ್ಯಾನ್ ನಂಬರ್‌ ಲಿಂಕ್‌ ಮಾಡಿ. ಇದು ಕಡ್ಡಾಯ’ ಎಂದು ಟ್ವೀಟ್‌ ಮೂಲಕ ಎಸ್‌ಬಿಐ ಸೂಚನೆ ನೀಡಿದೆ.
ಹಾಗಿದ್ದರೆ ಆಧಾರ್‌ ಮತ್ತು ಪ್ಯಾನ್‌ ಲಿಂಕ್‌ ಮಾಡುವುದು ಹೇಗೆ ಎಂಬ ಸಂದೇಹವೆ? ಇಲ್ಲಿದೆ ಅದಕ್ಕೆ ಪರಿಹಾರ* ಮೊದಲಿಗೆ ಆದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌https://incometaxindiaefiling.gov.in/ಕ್ಲಿಕ್‌ ಮಾಡಿ.* ಆಧಾರ್ ಲಿಂಕ್ ವಿಭಾಗ ನೋಡಿ* ಆಧಾರ್ ಮತ್ತು ಪ್ಯಾನ್ ಕಾರ್ಡ್ ವಿವರಗಳನ್ನು ನಮೂದಿಸಿ.* link Adhaar (‘ಲಿಂಕ್ ಆಧಾರ್’) ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.ಇಷ್ಟು ಮಾಡಿದರೆ ಆಧಾರ್‌ ಜತೆ ಪ್ಯಾನ್‌ ಕಾರ್ಡ್‌ ಲಿಂಕ್‌ ಆಗಲಿದೆ.* ನೀವುhttps://www.utiitsl.com/ಅಥವಾhttps://www.egov-nsdl.co.in/ಲಿಂಕ್‌ಗಳನ್ನು ಕ್ಲಿಕ್‌ ಮಾಡಿಯೂ ಇವುಗಳ ಜೋಡಣೆ ಮಾಡಬಹುದು.
ಎಸ್‌ಎಂಎಸ್ ಮೂಲಕ ಆಧಾರ್‌-ಪ್ಯಾನ್‌ ಜೋಡಣೆ ಹೇಗೆ?* ಮೊದಲಿಗೆ ಫೋನ್‌ನಲ್ಲಿ UIDPAN ಎಂದು ಟೈಪಿಸಿ ಸ್ಪೇಸ್‌ ಕೊಟ್ಟು 12 ಅಂಕಿಯ ಆಧಾರ್ ಸಂಖ್ಯೆ ನಮೂದಿಸಿ ಸ್ಪೇಸ್‌ ಕೊಟ್ಟು 10 ಅಂಕಿಯ ಪ್ಯಾನ್ ಸಂಖ್ಯೆಯನ್ನು ನಮೂದಿಸಿ. (UIDPAN <12 Digit Aadhaar> <10 Digit PAN>) ಈಗ ಈ ಸಂದೇಶವನ್ನು 567678 ಅಥವಾ 56161 ಗೆ ಕಳುಹಿಸಿ. ನಿಮ್ಮ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲಾಗುತ್ತದೆ.
ಒಂದು ವೇಳೆ ಪ್ಯಾನ್‌ ನಿಷ್ಕ್ರಿಯವಾಗಿದ್ದರೆ ಏನು ಮಾಡುವುದು?ಇದಕ್ಕಾಗಿ, ನೀವು ಎಸ್‌ಎಂಎಸ್‌ ಕಳುಹಿಸಬೇಕು.- ಸಂದೇಶ ಪೆಟ್ಟಿಗೆಗೆ ಹೋಗುವ ಮೂಲಕ ನಿಮ್ಮ ನೋಂದಾಯಿತ ಮೊಬೈಲ್‌ನಿಂದ ನೀವು 12 ಅಂಕಿಯ ಪ್ಯಾನ್ ಅನ್ನು ನಮೂದಿಸಬೇಕು. ಇದರ ನಂತರ, ಸ್ಪೇಸ್‌ ನೀಡುವ ಮೂಲಕ 10-ಅಂಕಿಯ ಆಧಾರ್ ಸಂಖ್ಯೆಯನ್ನು ನಮೂದಿಸಿ. ನಂತರ ಈ ಸಂದೇಶವನ್ನು 567678 ಅಥವಾ 56161 ಗೆ ಎಸ್‌ಎಂಎಸ್‌ ಮಾಡಬೇಕು.
ಇಲ್ಲಿದೆ ನೋಡಿ ಎಸ್‌ಬಿಐ ಟ್ವೀಟ್‌
We advise our customers to link their PAN with Aadhaar to avoid any inconvenience and continue enjoying a seamless banking service.#ImportantNotice#AadhaarLinking#Pancard#AadhaarCardpic.twitter.com/bVGDbbYajX
— State Bank of India (@TheOfficialSBI)September 10, 2021

ಸತ್ತು ಹೋಗಿದ್ದಾನೆಂದ ಅಲ್‌ ಕೈದಾ ಮುಖ್ಯಸ್ಥ ಜೀವಂತ! 26/11 ಮಾದರಿಯ ಮತ್ತೊಂದು ದಾಳಿ ಭಯದಲ್ಲಿ ಅಮೆರಿಕ…

VIDEO: ಅಮೆರಿಕದ ಯುದ್ಧ ವಿಮಾನಕ್ಕೆ ಜೋಕಾಲಿ ಕಟ್ಟಿ ಆಡಿದ ತಾಲಿಬಾನಿಗಳು- ಗಹಗಹಿಸಿ ನಕ್ಕ ಚೀನಾ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − 10 =
Remember me
