ಮುಂಬೈ:ವಿಶ್ವಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದ ಪನಾಮಾ ಪೇಪರ್ಸ್‌ ಹಗರಣಕ್ಕೆ ಸಂಬಂಧಿಸಿದಂತೆ ನಟಿ ಐಶ್ವರ್ಯ ರೈ ಬಚ್ಚನ್‌ಗೆ ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಇವರಿಗೆ ಸಮನ್ಸ್ ಜಾರಿ ಮಾಡಿದೆ.
ಮೊಸಾಕ್ ಫೋನ್ಸೆಕಾ ಎಂಬ ಜಗತ್ತಿನ ನಾಲ್ಕನೇ ಅತಿ ದೊಡ್ಡ ಸಂಸ್ಥೆಯು ವಿಶ್ವದಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ 2016ರಲ್ಲಿ ಹನ್ನೊಂದೂವರೆ ಮಿಲಿಯನ್‌ನಷ್ಟು ದಾಖಲೆ ತಯಾರಿಸಿದ್ದು, ಅದೇ ಪನಾಮ ಪೇಪರ್ಸ್ ಹಗರಣ. ವಿದೇಶಗಳಲ್ಲಿ ಅಕ್ರಮವಾಗಿ ಹೇಗೆ, ಯಾರು ಹಣ ಹೂಡಿಕೆ ಮಾಡಿದ್ದಾರೆ ಎಂಬೆಲ್ಲಾ ಮಾಹಿತಿ ಇದರಲ್ಲಿ ಇವೆ.
12 ರಾಷ್ಟ್ರೀಯ ನಾಯಕರ ಹೆಸರು ಸೇರಿದಂತೆ ದೊಡ್ಡ ದೊಡ್ಡ ಸೆಲೆಬ್ರಿಟಿಗಳ ಹೆಸರೂ ಇದರಲ್ಲಿ ಇವೆ. ಪಾಕಿಸ್ತಾನದ ಪ್ರಧಾನಿಯಾಗಿದ್ದ ನವಾಜ್ ಷರೀಫ್, ಇರಾಕ್‌ನ ಮಾಜಿ ಉಪರಾಷ್ಟ್ರಪತಿ ಅಯಾದ್ ಅಲ್ಲವಿ, ಉಕ್ರೇನ್ ರಾಷ್ಟ್ರಪತಿ ಪೆಟ್ರೋ ಪೊರೊಶೆಂಕೋ, ಈಜಿಪ್ಟ್ ನ ಮಾಜಿ ರಾಷ್ಟ್ರಪತಿಯ ಮಗ ಅಲಾ ಮುಬಾರಕ್, ಐಸ್ ಲ್ಯಾಂಡ್‌ನ ಪ್ರಧಾನಿಯ ಹೆಸರುಗಳು ಇದೆ. ಭಾರತದ ಮಟ್ಟಿಗೆ ಹೇಳುವುದಾದರೆ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಮತ್ತು ಐಶ್ವರ್ಯಾ ಸೇರಿದಂತೆ ಸುಮಾರು 500 ಪ್ರಮುಖ ಭಾರತೀಯರ ಹೆಸರುಗಳು, ರಾಜಕಾರಣಿಗಳು ಮತ್ತು ಉದ್ಯಮಿಗಳ ಹೆಸರುಗಳಿವೆ.
ಜರ್ಮನಿಯ ಪತ್ರಿಕೆಯೊಂದು ಇದನ್ನು ಬಹಿರಂಗಗೊಳಿಸಿತ್ತು. ಆ ನಂತರ ಅಂತಾರಾಷ್ಟ್ರೀಯ ಮಟ್ಟದ ತನಿಖಾ ಪತ್ರಕರ್ತರ ಒಕ್ಕೂಟದಿಂದಾಗಿ ಇದು ಬಹಿರಂಗಗೊಂಡಿತ್ತು. ಈ ಮಧ್ಯೆ ಈ ಪೇಪರ್‌ ಲೀಕ್‌ ಮಾಡಿದ್ದ ಪತ್ರಕರ್ತೆಯ ಹತ್ಯೆ ಕೂಡ ನಿಗೂಢವಾಗಿಯೇ ನಡೆದೋಯ್ತು.
2016ರಿಂದ ಇದರ ತನಿಖೆ ನಡೆಯುತ್ತಲಿದ್ದು, ಇದೀಗ ನಟಿ ಐಶ್ವರ್ಯ ರೈ ಅವರ ವಿಚಾರಣೆಗೆಂದು ಸಮನ್ಸ್‌ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ಇಂದು ಇ.ಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಬೇಕಿದೆ. ವಿದೇಶದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಕೂಡಿಟ್ಟ ಬಗ್ಗೆ ಅವರ ಉತ್ತರಿಸಬೇಕಿದೆ.
ಮೂಲಗಳ ಪ್ರಕಾರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಜಾರಿ ನಿರ್ದೇಶನಾಲಯವು ದಾಖಲಿಸಿದೆ. ಇದಕ್ಕೆ ಸಂಬಂಧಿಸಿದಂತೆ ಇಂದು ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ಐಶ್ವರ್ಯಾ ರೈ ಬಚ್ಚನ್​ ಅವರಿಗೆ ಸೂಚಿಸಲಾಗಿದೆ. ಆದರೆ ವಿಚಾರಣೆಗೆ ಹಾಜರಾಗಲು ಬೇರೆ ದಿನಾಂಕವನ್ನು ಅವರು ಕೇಳಿದ್ದಾರೆ ಎನ್ನಲಾಗಿದೆ. ಈ ಹಿಂದೆ ಕೂಡ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಎರಡು ಬಾರಿ ಅವರು ವಿಚಾರಣೆ ದಿನಾಂಕ ಮುಂದೂಡಲು ಕೇಳಿಕೊಂಡಿದ್ದರು.
ಶಾಲೆಯಲ್ಲಿ ಹುಟ್ಟುಹಬ್ಬ ಆಚರಿಸಿದ್ದೇ ತಪ್ಪಾಗೋಯ್ತು: ಅಪ್ಪ-ಮಗನನ್ನು ಆತ್ಮಹತ್ಯೆಗೆ ತಳ್ಳಿದ ಬರ್ತ್‌ಡೇ ಸಂಭ್ರಮ!

‘ಅಮ್ಮನ ಗರ್ಭ, ಸಮಾಧಿ ಬಿಟ್ಟು ಹೆಣ್ಣು ಎಲ್ಲೂ ಸುರಕ್ಷಳಲ್ಲ… ಶಿಕ್ಷಕರನ್ನೂ ನಂಬಬೇಡಿ…’ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − seven =
Remember me
