ಭೋಪಾಲ್:ಕರೊನಾದಿಂದ ಕ್ಷಣ ಕ್ಷಣಕ್ಕೂ ಆತಂಕ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಇದರ ಕುರಿತಂತೆ ಹೇಳಿಕೆಯೊಂದನ್ನು ನೀಡಿರುವ ಮಧ್ಯಪ್ರದೇಶದ ಸಚಿವ ಪ್ರೇಮ್ ಸಿಂಗ್ ಪಾಟೀಲ್ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಮಧ್ಯಪ್ರದೇಶದಲ್ಲಿ ಕೂಡ ಕರೊನಾ ಹಾಟ್​ಸ್ಪಾಟ್​ ಆಗಿದ್ದು, ಸಾವಿನ ಸಂಖ್ಯೆ ಮಿತಿಮೀರುತ್ತಿದೆ. ಈ ಬಗ್ಗೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿರುವ ಪಾಟೀಲ್​, ಕರೊನಾದಿಂದಾಗಿ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಯಾರು ಕೂಡ ಇದನ್ನು ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.
ಇಷ್ಟೇ ಆಗಿದ್ದರೆ ಪರವಾಗಿರಲಿಲ್ಲ. ಆದರೆ ಅದಕ್ಕೆ ಒಂದು ವಾಕ್ಯ ಸೇರಿಸಿದ ಅವರು, ಯಾರಿಗೆ ವಯಸ್ಸಾಗಿರುತ್ತೋ ಅವರು ಸಾಯ್ತರೆ ಬಿಡಿ, ಏನು ಮಾಡೋಕಾಗತ್ತೆ ಎಂದು ಹೇಳಿ ಇದೀಗ ವಿವಾದಕ್ಕೆ ಗುರಿಯಾಗಿದ್ದಾರೆ.
#WATCH: MP Minister Prem Singh Patel speaks on deaths due to#COVID19. He says, "Nobody can stop these deaths. Everyone is talking about cooperation for protection from Corona…You said that many people are dying every day. People get old and they have to die." (14.04.2021)pic.twitter.com/os3iILZGyM
— ANI (@ANI)April 15, 2021

ಕರೊನಾದ ಕುರಿತು ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗಿದೆ. ಜನರು ಎಚ್ಚರಿಕೆಯಿಂದ ಇರಬೇಕು. ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು. ಆದರೆ ಇವರು ಹೇಳಿರುವ ಆ ಒಂದು ಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಕರೊನಾ ಸೋಂಕಿತರಿಗೆ ಧೈರ್ಯ ತುಂಬಬೇಕಾಗಿರುವ ಸಚಿವರಿಂದಲೇ ಈ ರೀತಿ ಮನೋಬಲ ಕುಗ್ಗಿಸೋ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಕಮೆಂಟಿಗರು ಆಕ್ರೋಶ ವ್ಯಕ್ತಪಡಿಸಿತ್ತಿದ್ದಾರೆ.
ಒಂದೇ ತಿಂಗಳಲ್ಲಿ ಒಬ್ಬಳನ್ನೇ 4 ಬಾರಿ ಮದ್ವೆಯಾದ- ಐದನೇ ಬಾರಿಗೆ ಸಿಕ್ಕಿಬಿದ್ದ! ಕಾರಣ ಕೇಳಿದ್ರೆ ಸುಸ್ತಾಗ್ತೀರಾ!

ವಿಧಾನಸಭೆ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್​ ಅಭ್ಯರ್ಥಿ ಸಾವು- ಬಲಿ ಪಡೆದ ಕರೊನಾ ಸೋಂಕು

ಮುಟ್ಟೋರೇ ಇಲ್ಲ ಎಂದು ಕೊರಗ್ತಿರೋ ಸೋಂಕಿತರಿಗೆ ಹೀಗೆ ಬೆಚ್ಚಗಿನ ಸ್ವರ್ಶ ನೀಡಿದ್ತಾರೆ ಈ ನರ್ಸ್​!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:10 + 2 =
Remember me
