ಹೈದರಾಬಾದ್:ನನ್ನ ತಂದೆಯನ್ನು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ಅವರು ಸಂಚುರೂಪಿಸಿ ಕೊಲೆ ಮಾಡಿಸಿದ್ದಾರೆ ಎಂದು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ್ ರೆಡ್ಡಿ (ವೈಎಸ್​ಆರ್​) ಪುತ್ರಿ ಶರ್ಮಿಳಾ ಹೇಳಿಕೆ ನೀಡಿದ್ದು, ಇದೀಗ ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ.
ನನ್ನ ತಂದೆ ವೈ.ಎಸ್. ರಾಜಶೇಖರ್ ರೆಡ್ಡಿ ಸಾವಿನ ಹಿಂದೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಕೈವಾಡವಿದೆ. ನನ್ನನ್ನೂ ಕೊಲೆ ಮಾಡಲು ಕುತಂತ್ರ ರೂಪಿಸಲಾಗುತ್ತಿದೆ. ಆದರೆ ನಾನು ಅಂತಹ ಕುತಂತ್ರಗಳಿಗೆ ಜಗ್ಗುವುದಿಲ್ಲ ಎಂದು ಶರ್ಮಿಳಾ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ.
ಕೆಲವು ದಿನಗಳ ಹಿಂದೆ ಶರ್ಮಿಳಾ ಅಸಭ್ಯ ಭಾಷೆ ಬಳಸಿರುವ ಬಗ್ಗೆ ಟಿಆರ್‌ಎಸ್ ಶಾಸಕರು ಸ್ಪೀಕರ್‌ಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಇಂಥದ್ದೊಂದು ಆರೋಪವನ್ನು ಶರ್ಮಿಳಾ ಮಾಡಿದ್ದಾರೆ.
‘ನನ್ನ ಉಸಿರು ಇರುವವರೆಗೂ ಜನರಿಂದ ನನ್ನನ್ನು ಬೇರೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ನಿಮ್ಮ ಅರಾಜಕತೆ ಬಗ್ಗೆ ನಾನು ಮಾತಾಡಿದ್ದೇನೆ. ನನ್ನ ಕತ್ತು ಹಿಸುಕುವುದು ನಿಮಗೆ ತರವಲ್ಲ. ಪೊಲೀಸರು ನಿಮ್ಮ ಪರವಾಗಿದ್ದಾರೆ. ಪೊಲೀಸರನ್ನು ನಿಮ್ಮ ಮನೆ ಕೆಲಸದವರಂತೆ ಬಳಸಿಕೊಳ್ಳುತ್ತಿದ್ದೀರಿ’ ಎಂದು ಶರ್ಮಿಳಾ ಕೆಂಡ ಕಾರಿದ್ದಾರೆ.
‘ಆಡಳಿತಾರೂಢ ಟಿಆರ್‌ಎಸ್ ಸರ್ಕಾರ ನನ್ನನ್ನು ಪಾದಯಾತ್ರೆಯಲ್ಲಿ ಪಾಲ್ಗೊಳ್ಳದಂತೆ ತಡೆಯಬಹುದು, ಯಾವುದೇ ಕ್ಷಣದಲ್ಲಿ ಬಂಧಿಸಬಹುದು. ಸಚಿವ ನಿರಂಜನ್ ರೆಡ್ಡಿ ಅವರು ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರು ನೀಡಿದ್ದೆ. ಆದರೆ ಪೊಲೀಸರು ಅವರ ವಿರುದ್ಧ ದೂರು ದಾಖಲಿಸಲಿಲ್ಲ. ಬದಲಿಗೆ ರೆಡ್ಡಿ ವಿರುದ್ಧ ಟೀಕೆ ಮಾಡಿದ್ದಕ್ಕೆ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಆರೋಪಿಸಿದ ಶರ್ಮಿಳಾ,’ ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ. ಚಂದ್ರಶೇಖರ್​ ಅವರೇ ನನಗೇನೂ ಬೇಡಿ (ಕೈಕೋಳ) ಎಂದರೆ ಭಯವಿಲ್ಲ. ನಿಮಗೆ ಧಮ್ ಇದ್ದರೆ ನನ್ನನ್ನು ಅರೆಸ್ಟ್ ಮಾಡಿಸಿ. ನನ್ನ ಹೆಸರು ವೈ.ಎಸ್. ಶರ್ಮಿಳಾ. ನಾನು ವೈ.ಎಸ್ ರಾಜಶೇಖರ್ ರೆಡ್ಡಿಯವರ ಪುತ್ರಿ. ನಾನು ಹುಲಿ ಮರಿ. ಕೈ ಕೋಳಗಳು ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ’ ಎಂದಿದ್ದಾರೆ.
ಅಂದಹಾಗೆ, ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ಖಮ್ಮಂ ಜಿಲ್ಲೆ ಪಾಲೇರು ಕ್ಷೇತ್ರದಿಂದ ಸ್ಪರ್ಧಿಸಲು ಶರ್ಮಿಳಾ ತಯಾರಿ ನಡೆಸಿದ್ದಾರೆ. 2016ರಲ್ಲಿ ಟಿಆರ್‌ಎಸ್‌ನ ತುಮ್ಮಲ ನಾಗೇಶ್ವರ ರಾವ್ ಗೆದ್ದ ಉಪಚುನಾವಣೆ ಹೊರತುಪಡಿಸಿ 1999ರಿಂದ ಕಾಂಗ್ರೆಸ್ ಈ ಕ್ಷೇತ್ರವನ್ನು ಗೆಲ್ಲುತ್ತಿದೆ.(ಏಜೆನ್ಸೀಸ್​)
ತೆಲಂಗಾಣದಲ್ಲಿ ಸಿಎಂ ಬೊಮ್ಮಾಯಿಗೆ ಇದೆಂಥ ಅವಮಾನ?: ಎಲ್ಲೆಡೆ ಭಾರಿ ಆಕ್ರೋಶ
ನಿಮ್ಮ ಪತ್ನಿಯನ್ನು ಇವತ್ತೇ ಮನಸಾರೆ ಹೊಗಳಿಬಿಡಿ… ಮತ್ತೆ ಈ ದಿನ ಬರಲ್ಲ… ಯಾಕೆ ಅಂತೀರಾ?
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:18 − 15 =
Remember me
