ಪ್ರಯಾಗ್‌ರಾಜ್‌ (ಉತ್ತರ ಪ್ರದೇಶ):ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಪ್ರಯಾಗರಾಜ್​ಗೆ ಇಂದು ಭೇಟಿ ನೀಡಲಿದ್ದು, ಸುಮಾರು 1.6 ಲಕ್ಷ ಸ್ವಸಹಾಯ ಗುಂಪುಗಳಿಗೆ ಸುಮಾರು ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಿದ್ದಾರೆ.
ದೀನದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಈ ಧನಸಹಾಯ ನೀಡಲಾಗುತ್ತಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಪ್ರಧಾನ ಮಂತ್ರಿಗಳ ಕಚೇರಿ, ಇಂದು (ಡಿ.21) ಮಧ್ಯಾಹ್ನ ಸುಮಾರು 1 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸುವ ಸಾಧ್ಯತೆ ಇದೆ. ಸಮುದಾಯ ಹೂಡಿಕೆ ನಿಧಿಯನ್ನಾಗಿ ಸುಮಾರು 80 ಸಾವಿರ ಸ್ವಸಹಾಯ ಗುಂಪುಗಳು ತಲಾ 1.10 ಲಕ್ಷ ರೂಪಾಯಿಗಳನ್ನು ಹಾಗೂ ಆವರ್ತ ನಿಧಿಯ ರೂಪದಲ್ಲಿ 60 ಸಾವಿರ ಸ್ವಸಹಾಯ ಗುಂಪುಗಳಿಗೆ ತಲಾ 15 ಸಾವಿರ ರೂಪಾಯಿಗಳನ್ನು ನೀಡಲಾಗುವುದು ಎಂದಿದೆ.
ತಳಮಟ್ಟದಲ್ಲಿರುವ ಮಹಿಳೆಯರಿಗೆ ಅಗತ್ಯ ಕೌಶಲ, ಪ್ರೋತ್ಸಾಹ ಮತ್ತು ಸಂಪನ್ಮೂಲಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಸುಮಾರು 1 ಕೋಟಿ ರೂಪಾಯಿ ಮೌಲ್ಯದ 202 ಪೌಷ್ಟಿಕಾಂಶ ತಯಾರಿಕಾ ಘಟಕಗಳಿಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪಿಎಂ ಕಚೇರಿ ಪ್ರಕಟಣೆ ಹೇಳಿದೆ.
VIDEO: ಕಿಲೋಮೀಟರ್‌ ಉದ್ದಕ್ಕೆ ಆಗಸದಲ್ಲಿ ಸಂಚರಿಸಿದ ಬೆಳಕಿನ ಸಾಲಿಗೆ ಜನರು ಕಂಗಾಲು! ವಿಜ್ಞಾನಿಗಳು ಹೇಳಿದ್ದೇನು?

ಚಿತ್ರದುರ್ಗದಲ್ಲೊಂದು ಅಮಾನವೀಯ ಘಟನೆ- ವಿದ್ಯಾರ್ಥಿನಿಯ ಬಟ್ಟೆ ಎಳೆದಾಡಿದ ಕಾಮುಕರು: ಮನನೊಂದು ಆತ್ಮಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 9 =
Remember me
