ಲೇಹ್​: ಲಡಾಖ್​ನ ಟರ್ಟೂಕ್​ ಸೆಕ್ಟೆರ್​ನಲ್ಲಿ ಸೇನಾ ವಾಹನವೊಂದು ಶಿಯೋಕ್​ ನದಿ ಕಮರಿಗೆ ಉರುಳಿ ಬಿದ್ದ ಪರಿಣಾಮ ಏಳು ಯೋಧರು ಮೃತಪಟ್ಟಿದ್ದಾರೆ. 19 ಜನರಿಗೆ ಗಂಭೀರವಾಗಿ ಗಾಯವಾಗಿದೆ.
ಸೇನಾ ಶಿಬಿರದಿಂದ ಪ್ರರತಾಪುರ್​ಕ್ಕೆ 26 ಯೋಧರನ್ನು ಕರೆದೊಯ್ಯುತ್ತಿದ್ದ ವಾಹನ, ಥೋಯಿಸ್​ ಬಳಿಯ ಗುಡ್ಡಗಾಡು ಪ್ರದೇಶದ ತಿರುವಿನಲ್ಲಿ ಸ್ಕಿಡ್​ ಆಗಿ ಈ ಅವಡ ಸಂಭವಿಸಿದೆ. ಗಾಯಾಳುಗಳನ್ನು ಪ್ರರತಾಪುರ್​ದ ಆಸ್ಪತ್ರೆಗೆ ಸಾಗಿಸುವ ವೇಳೆ 7 ಮಂದಿ ಮೃತಪಟ್ಟರು.
ನಂತರ ತೀವ್ರವಾಗಿ ಗಾಯಗೊಂಡಿದ್ದ 19 ಮಂದಿಯನ್ನು ಚಂಡೀಗಢದ ಕಮಾಂಡೊ ಆಸ್ಪತ್ರೆಗೆ ಸಿ-17 ಗ್ಲೋಬ್​ಮಾಸ್ಟರ್​ ವಿಮಾನದ ಮೂಲಕ ಸಾಗಿಸಲಾಯಿತು ಎಂದು ಸೇನಾ ಮೂಲಗಳು ಹೇಳಿವೆ.
ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಯೋಧರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನಜಿರ್, ಕಾಂಗ್ರೆಸ್​ ವಕ್ತಾರ ರಣದೀಪ್​ ಸುರ್ಜೆವಾಲಾ ಸಹಿತ ಹಲವು ಪ್ರಮುಖರು ಶೋಕ ವ್ಯಕ್ತಪಡಿಸಿದ್ದಾರೆ.
ನಮ್ಮ ವೀರ ಸೈನಿಕರು ಸಾವನ್ನಪ್ಪಿರುವ ವಿಚಾರ ಕೇಳಿ ಬಹಳ ದುಃಖವಾಯಿತು. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಗೊಂಡಿರುವ ಎಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಆರ್ ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಕೂ ಮಾಡಿದ್ದಾರೆ.
–Virat Kohli (@virat.kohli)28 May 2022

ಅನ್ಯ ಧರ್ಮದವನನ್ನು ಮದುವೆಯಾದ ಮಗಳನ್ನು ಪೊಲೀಸರು ಹುಡುಕಿಕೊಟ್ಟರು: ಅಪ್ಪ-ಅಮ್ಮ ಕೊಲೆ ಮಾಡಿದರು!

ಪ್ರಿಯಕರನ ಲೈಂಗಿಕ ಆಸೆ ಈಡೇರಿಸಲು ಮಗಳನ್ನೇ ಆತನ ಬಳಿ ಬಿಟ್ಟ ಪಾಪಿ ತಾಯಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + eight =
Remember me
