ನವದೆಹಲಿ:ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಲು ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ (ಇಡಿ) ಕಚೇರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹಾಜರಾಗುತ್ತಿದ್ದಂತೆಯೇ ಅತ್ತ ಕಡೆ ಸುಪ್ರೀಂಕೋರ್ಟ್​ ಮತ್ತೊಂದು ಶಾಕ್​ ನೀಡಿದೆ.
ಹಣದ ಅಕ್ರಮ ವಹಿವಾಟಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ (ಐಟಿ) ಡಿಕೆಶಿ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ರದ್ದು ಮಾಡಿದ್ದ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿದೆ.
2017ರಲ್ಲಿ ಬಿಡದಿಯ ಈಗಲ್ಟನ್‌ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಪ್ರಕರಣ ದಾಖಲಿಸಿತ್ತು. ಆ ಸಂದರ್ಭದಲ್ಲಿ ಮೊದಲಿಗೆ ಡಿಕೆಶಿ ಮನೆಯ ಮೇಲೆ ದಾಳಿ ನಡೆದಿತ್ತು. ದಾಳಿಯ ಸಮಯದಲ್ಲಿ ಈಗಲ್ಟನ್‌ ರೆಸಾರ್ಟ್‌ನಲ್ಲಿ ಗುಜರಾತಿನ 44 ಮಂದಿ ಕಾಂಗ್ರೆಸ್‌ ಶಾಸಕರ ಯೋಗಕ್ಷೇಮದ ಉಸ್ತುವಾರಿಯನ್ನು ಸಚಿವರಾಗಿದ್ದ ಡಿ.ಕೆ. ಶಿವಕುಮಾರ್‌ ನೋಡಿಕೊಳ್ಳುತ್ತಿದ್ದರು. ಈ ಮಾಹಿತಿ ತಿಳಿದ ಅಧಿಕಾರಿಗಳು ಅಲ್ಲಿಯೂ ದಾಳಿ ನಡೆಸಿ ಪರಿಶೀಲನೆ ನಡೆಸಿ ಎಫ್​ಐಆರ್​ ದಾಖಲಿಸಿದ್ದರು.
ಇದನ್ನು ಡಿಕೆಶಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಐಟಿ ದಾಖಲಿಸಿದ್ದ ಎಫ್​ಐಆರ್​ ರದ್ದತಿಗೆ ಕೋರ್ಟ್​ ಆದೇಶಿಸಿತ್ತು. ಇದನ್ನು ಐಟಿ ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು, ಅಲ್ಲಿಯೂ ಅದಕ್ಕೆ ಹಿನ್ನಡೆಯಾಗಿ, ಡಿಕೆಶಿ ಪರ ತೀರ್ಪು ಬಂದಿತ್ತು. ‘ಆರೋಪಿಯಿಂದ ಬರೀ ಹಣಕಾಸು ವ್ಯವಹಾರಗಳು ನಡೆದಿದ್ದರೆ ಕೇಸ್‌ ದಾಖಲಿಸಲು ಸಾಧ್ಯವಿಲ್ಲ. ಲೆಕ್ಕವಿಲ್ಲದ ವಹಿವಾಟುಗಳು ನಡೆದಿದ್ದರೂ ತೆರಿಗೆ ಅಥವಾ ದಂಡದ ಪಾವತಿಗೆ ಆರೋಪಿ ಹೊಣೆಗಾರರಾಗಿದ್ದಾರೆ ಎಂಬುದನ್ನು ನಿರ್ಧರಿಸುವವರೆಗೆ ಯಾವುದೇ ಕಾನೂನು ಕ್ರಮವನ್ನು ಆರಂಭಿಸುವಂತಿಲ್ಲ’ ಎಂದು ಹೈಕೋರ್ಟ್​ ಹೇಳಿತ್ತು.
ಹೈಕೋರ್ಟ್​ನ ಈ ಆದೇಶವನ್ನು ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆಯು ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಪರಿಶೀಲನೆ ವೇಳೆ ಕೆಲವು ಮಹತ್ವದ ದಾಖಲೆಗಳು ತಮಗೆ ಲಭ್ಯವಾಗಿವೆ, ಡಿ.ಕೆ. ಶಿವಕುಮಾರ್ ಅವರಿಗೆ ಸೇರಿದ್ದು ಎನ್ನಲಾದ ದಾಖಲೆಗಳನ್ನು ಅವರು ಹರಿದು ಹಾಕಿದ್ದಾರೆ. ಆ ದಾಖಲೆಗಳಲ್ಲಿ ಹಣಕಾಸಿನ ವಹಿವಾಟಿಗೆ ಸಂಬಂಧಿಸಿದ್ದ ಕೆಲವೊಂದು ಮಾಹಿತಿಗಳು ಇದ್ದವು. ಅಕ್ರಮ ವ್ಯವಹಾರ, ಡಿಜಿಟಲ್ ಕೇಬಲ್ ಜತೆಗಿನ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳು ಇದರಲ್ಲಿ ಇದ್ದವು ಎಂದು ಐಟಿ ವಾದಿಸಿತ್ತು. ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ವಿಭಾಗೀಯ ಪೀಠವು, ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ಕೋರ್ಟ್​ ನೋಟಿಸ್​ ಜಾರಿಗೊಳಿಸಿದೆ.(ಏಜೆನ್ಸೀಸ್​)
ಪಿಎಸ್​ಐ ನೇಮಕಾತಿ ಗೋಲ್​ಮಾಲ್​: ಮೈಸೂರಿನ ಇನ್​ಸ್ಪೆಕ್ಟರ್ ಅಶ್ವಿನಿ ಅಮಾನತು
ನನ್ನ ಸ್ನೇಹಿತೆಯಾಗಿರು ಎನ್ನುತ್ತಿದ್ದರು, ಅದೇನೆಂದು ಅರ್ಥವಾದಾಗ ಶಾಕ್​ ಆದೆ: ನಟಿ ತೆರೆದಿಟ್ಟ ಕರಾಳ ಅನುಭವ
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:twenty − 5 =
Remember me
