ಕಾಕಿನಾಡ (ಆಂಧ್ರಪ್ರದೇಶ):ತನ್ನ ಹಾಗೂ ಪತ್ನಿಯ ಬಣ್ಣ ಬಿಳಿಯಾಗಿದ್ದರೂ, ಮಗುವಿನ ಬಣ್ಣ ಮಾತ್ರ ಕಪ್ಪು ಎಂದು ಪತ್ನಿಯ ಶೀಲ ಶಂಕಿಸಿ ಆತನನ್ನು ಕೊಲೆ ಮಾಡಿದ್ದಾನೆ ಇಲ್ಲೊಬ್ಬ ಪಾತಕಿ! ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಇಂಥದ್ದೊಂದು ಕೃತ್ಯ ಎಸಗಿದಾತ ಒಡಿಶಾದ ಉಮ್ಮರ್‌ಕೋಟ್​ನ ಸಿಲಾಟಿಗಾಂವ್ ಗ್ರಾಮದ ಮಾಣಿಕ್ ಘೋಷ್. ಈತನ ಕೃತ್ಯಕ್ಕೆ ಬಲಿಯಾದವರು ಕರಗಾಂವ್ ಗ್ರಾಮದ ಲಿಪಿಕಾ ಮಂಡಲ್. ಮೊದಲು ಸಹಜ ಸಾವು ಎಂದೇ ಬಿಂಬಿತವಾಗಿದ್ದ ಈ ಸಾವಿನ ಪ್ರಕರಣ ಕೊನೆಗೆ ಕೊಲೆ ಎನ್ನುವುದು ತಿಳಿದಿದೆ.
ಘಟನೆ ವಿವರ:ಈ ದಂಪತಿಯ ಮದುವೆ ಏಳು ವರ್ಷಗಳ ಹಿಂದೆ ಆಗಿದೆ. ಮದುವೆಯ ನಂತರ ಇಬ್ಬರೂ ಉದ್ಯೋಗಕ್ಕಾಗಿ ಆಂಧ್ರಪ್ರದೇಶದ ಕಾಕಿನಾಡಕ್ಕೆ ವಲಸೆ ಬಂದಿದ್ದರು. ಎರಡೂವರೆ ವರ್ಷಗಳ ಹಿಂದೆ ಈ ದಂಪತಿಗೆ ಹೆಣ್ಣು ಮಗು ಹುಟ್ಟಿತ್ತು.
ಇಬ್ಬರು ಬೆಳ್ಳಗಿದ್ದರೂ ಮಗು ಕಪ್ಪಗೆ ಕಪ್ಪಾಗಿರುವುದಕ್ಕೆ ಈ ಪತಿ ಸದಾ ಪತ್ನಿಯ ಬಗ್ಗೆ ಸಂದೇಹ ವ್ಯಕ್ತಪಡಿಸುತ್ತಿದ್ದ. ಇದೇ ವಿಚಾರವಾಗಿ ದಂಪತಿ ನಡುವೆ ಹಲವು ಬಾರಿ ಜಗಳ ಕೂಡ ಆಗಿದೆ. ಪತಿಯ ದೌರ್ಜನ್ಯ ಸಹಿಸದೇ ಲಿಪಿಕಾ ತವರಿಗೆ ಬಂದಿದ್ದರು. ನಂತರ ಕುಟುಂಬಸ್ಥರು ಇಬ್ಬರನ್ನೂ ರಾಜಿ ಮಾಡಿದ್ದರು. ಗಂಡನ ಮನೆಗೆ ಲಿಪಿಕಾ ವಾಪಸಾಗಿದ್ದರು.
ಆದರೆ ಇದೇ ತಿಂಗಳ 18ರಂದು ರಾತ್ರಿ ಲಿಪಿಕಾಗೆ ಮೂರ್ಛೆ ಹೋಗಿರುವುದಾಗಿ ಹೇಳಿದ್ದ ಪತಿ, ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದ. ಅಷ್ಟರಲ್ಲಿಯೇ ಅವರು ಮೃತಪಟ್ಟಿದ್ದರು. ಮೊದಲು ಇದು ಸಹಜ ಸಾವು ಎನ್ನಲಾಗಿತ್ತು. ನಂತರ ಕುತ್ತಿಗೆಯಲ್ಲಿ ಗಾಯದ ಗುರುತು ಕಂಡುಬಂದಿದ್ದು ಸಂದೇಹಕ್ಕೆ ಎಡೆ ಮಾಡಿಕೊಟ್ಟಿತ್ತು.
ಆದರೆ ಪತಿಯೇ ಈ ಕೊಲೆ ಮಾಡಿದ್ದಾನೆ ಎಂಬ ಬಗ್ಗೆ ಪುರಾವೆಗಳು ಇರಲಿಲ್ಲ. ನಂತರ ಸಾಕ್ಷಿ ಹೇಳಿದ್ದೆ ಪುಟ್ಟ ಕಂದಮ್ಮ. ಅಮ್ಮನ ಸಾವಿನ ಬಳಿಕ ಅಜ್ಜಿ ಮನೆಗೆ ಬಂದಿದ್ದ ಎರಡೂವರೆ ವರ್ಷದ ಮಗು, ಅಜ್ಜ-ಅಜ್ಜಿಗೆ ಅಂದು ತಾನು ಕಂಡಿರುವ ದೃಶ್ಯ ವಿವರಿಸಿದೆ. ಅಮ್ಮನ ಗಂಟಲನ್ನು ಎರಡೂ ಕೈಗಳಿಂದ ಅಪ್ಪ ಹಿಡಿದುಕೊಂಡಿದ್ದು, ಅಮ್ಮ ಒದ್ದಾಡಿದ್ದು, ನಂತರ ಅಮ್ಮ ಏನೂ ಮಾತನಾಡದೇ ಇದ್ದುದನ್ನು ಮಗು ವಿವರಿಸಿದೆ.
ಅಲ್ಲಿಯವರೆಗೂ ಮಗಳು ಪ್ರಜ್ಞೆ ತಪ್ಪಿ ಸತ್ತಿದ್ದಾಳೆ ಎಂದುಕೊಂಡಿದ್ದ ಅವರಿಗೆ ಅಳಿಯನೇ ಮಗಳನ್ನು ಕೊಂದಿದ್ದಾನೆ ಎಂಬುದು ಮೊಮ್ಮಗಳ ಮಾತಿನ ಮೂಲಕ ಅರ್ಥವಾಗಿ ಪೊಲೀಸರಿಗೆ ದೂರು ದಾಖಲು ಮಾಡಿದ್ದಾರೆ. ಪೊಲೀಸರ ಬಳಿ ಕೂಡ ಮಗು ಅಂದು ನಡೆದ ಘಟನೆ ವಿವರಿಸಿದೆ. ಪತಿಯನ್ನು ಪೊಲೀಸರು ಬಂಧಿಸಿದಾಗ ಸತ್ಯ ಒಪ್ಪಿಕೊಂಡಿದ್ದಾನೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ(ಏಜೆನ್ಸೀಸ್​)
ರಾಜಸ್ಥಾನದ ರಾಜಕೀಯದಲ್ಲಿ ಬಿರುಗಾಳಿ: 90 ಶಾಸಕರು ರಾಜೀನಾಮೆ-ಸಿಎಂ ಕೈವಾಡ?
VIDEO: ಭಯೋತ್ಪಾದನೆ ನಂಟು; ಮೂರನೇ ಮದರಸಾವೂ ನೆಲಸಮ- ಎಂಟು ಬುಲ್ಡೋಜರ್​ ಬಳಸಿ ಧ್ವಂಸ ಕಾರ್ಯಾಚರಣೆ
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:four × three =
Remember me
