ವಿಶಾಖಪಟ್ಟಣ:ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಎರಡು ಕುಟುಂಬದ 10 ಮಂದಿಯ ಬರ್ಬರ ಕೊಲೆಯಾಗಿರುವ ಭಯಾನಕ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ.
ಆರು ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಜನರನ್ನು ವಿಶಾಖಪಟ್ಟಣ ಜಿಲ್ಲೆಯ ಜುತ್ತಾಡದಲ್ಲಿ ಕೊಲೆ ಮಾಡಲಾಗಿದೆ. ಮಿಥಿಲಾಪುರಿ ಉಡಾ ಕಾಲೋನಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಸಜೀವವಾಗಿ ದಹನ ಮಾಡಲಾಗಿದೆ.
ಜುತ್ತಾಡದಲ್ಲಿ ಕೊಲೆಯಾದವರನ್ನು ರಮಣ, ಉಷಾರಾಣಿ, ರಮಾದೇವಿ, ಅರುಣ, ಮಕ್ಕಳಾದ ಉದಯ, ಉರ್ವೀಷ ಎಂದು ಗುರುತಿಸಲಾಗಿದೆ. ಇವರ ಕುಟುಂಬದ ಸದಸ್ಯರಲ್ಲಿ ಒಬ್ಬನಾಗಿರುವ ಅಪ್ಪಲರಾಜು ಎಂಬಾತ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಎಲ್ಲರನ್ನೂ ಇರಿದು ಕೊಲೆ ಮಾಡಲಾಗಿದೆ.
ಈ ಕೊಲೆಗೆ ಹಳೆಯ ದ್ವೇಷವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಆರು ಮಂದಿಯನ್ನು ಅವರ ಮನೆಯಲ್ಲಿ ಭೀಕರವಾಗಿ ಈತ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಮಿಥಿಲಾಪುರಿ ನಡೆದ ಸಜೀವ ದಹನ ಪ್ರಕರಣದಲ್ಲಿ ಒಂದೇ ಕುಟುಂಬದ ಬಂಗಾರುನಾಯ್ಡು(50), ಡಾ.ನಿರ್ಮಲಾ(44), ಮಕ್ಕಳಾದ ದೀಪಕ್(22), ಕಶ್ಯಪ್(19) ಅವರನ್ನು ಸಜೀವವಾಗಿ ಸುಡಲಾಗಿದೆ.
ಮನೆಗೆ ಬೆಂಕಿ ಹಚ್ಚಿ ಇವರನ್ನು ಕೊಲೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದಿದೆ. ಆದರೆ ಇದುವರೆಗೆ ಆರೋಪಿಗಳು ಸೆರೆ ಸಿಕ್ಕಿಲ್ಲ. ಇದು ಆತ್ಮಹತ್ಯೆಯೋ, ಆಕಸ್ಮಿಕವೋ, ಕೊಲೆಯೋ ಎಂಬ ಎಲ್ಲಾ ಆಯಾಮಗಳಿಂದಲೂ ತನಿಖೆ ಮಾಡಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
ಆಸ್ಪತ್ರೆಗೆ ಅಡ್ಮಿಷನ್​ ಬೇಕಿದ್ರೆ ಆಕ್ಸಿಜನ್​ ತನ್ನಿ- ಚಿಕಿತ್ಸೆ ಮಧ್ಯೆ ಸಿಲಿಂಡರ್​ ಖಾಲಿಯಾದ್ರೆ ಸಾವಿಗೆ ನಾವಲ್ಲ ಜವಾಬ್ದಾರಿ!

ತಾಯಿ, ಅಣ್ಣ ಸೇರಿ ಮೋಸದಿಂದ ಹೊಲ ಮಾರಿದ್ದಾರೆ- ಅಮ್ಮ ತೀರಿಕೊಂಡಿದ್ದಾರೆ: ನನ್ನ ಆಸ್ತಿ ಹೇಗೆ ಪಡೆಯಲಿ?

ಚಿಕ್ಕಂದಿನಿಂದಲೂ ಇವಳೇ ನಿನ್‌ ಹೆಂಡ್ತಿ ಎಂದರು- ಆದರೆ ಆದದ್ದೇ ಬೇರೆ: ಇಂಜಿನಿಯರಿಂಗ್‌ ವಿದ್ಯಾರ್ಥಿನಿಯ ಬರ್ಬರ ಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 1 =
Remember me
