ಮಂಡ್ಯ ಜಿಲ್ಲೆಯ ಮಹಿಳಾಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 8 ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಶಿಶು ಅಭಿವೃದ್ಧಿ ಇಲಾಖೆ ಮಹಿಳೆಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಕಾರ್ಯಕರ್ತೆಯರ ಹುದ್ದೆಗಳು:27 (12 ಮಿನಿ ಅಂಗನವಾಡಿ) ಹಾಗೂ ಸಹಾಯಕಿಯರ ಹುದ್ದೆಗಳು: 132 ಇದ್ದು ಒಟ್ಟು 159 ಹುದ್ದೆಗಳಿವೆ.
ಮಂಡ್ಯ ಜಿಲ್ಲೆಯ 8 ತಾಲೂಕುಗಳ ವ್ಯಾಪ್ತಿಯಲ್ಲಿ ಹುದ್ದೆಗಳು ಖಾಲಿ ಇದ್ದು, ಗೌರವಧನದ ಆಧಾರದ ಮೇಲೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕ ಮಾಡಿಕೊಳ್ಳಲಾಗುವುದು. ಸಹಾಯಕಿ ಹುದ್ದೆಗೆ ಅಂಗವಿಕಲರು ಅರ್ಹರಾಗಿರುವುದಿಲ್ಲ. ಅಭ್ಯರ್ಥಿಗಳು ಜನನ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ (ತಹಸೀಲ್ದಾರ್ ಕಚೇರಿಯಿಂದ ಪಡೆದದ್ದು), ಜಾತಿ ಪ್ರಮಾಣಪತ್ರವನ್ನು ಸಲ್ಲಿಸಬೇಕು. ಆನ್‍ಲೈನ್ ಅರ್ಜಿಗಳಿಗೆ ಮಾತ್ರ ಮಾನ್ಯತೆ ಇದ್ದು, ದಾಖಲೆಗಳು ಅಸ್ಪಷ್ಟವಾಗಿದ್ದರೆ ಅರ್ಜಿ ತಿರಸ್ಕರಿಸಲಾಗುವುದು.
ಎಲ್ಲಿವೆ ಹುದ್ದೆಗಳು?ಶ್ರೀರಂಗಪಟ್ಟಣ, ಪಾಂಡವಪುರ, ನಾಗಮಂಗಲ, ಮಳವಳ್ಳಿ, ಮದ್ದೂರು, ಮಂಡ್ಯ, ದುದ್ದ, ಕೆ.ಆರ್.ಪೇಟೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಗ್ರಾಮಗಳ ಅಂಗನವಾಡಿಗಳಲ್ಲಿ ಹುದ್ದೆಗಳು ಖಾಲಿ ಇವೆ.
ಈ ಪ್ರಮಾಣಪತ್ರಗಳಿದ್ದಲ್ಲಿ ಸಲ್ಲಿಸಿಅಭ್ಯರ್ಥಿಗಳು ವಿಧವೆ, ವಿಚ್ಛೇದಿತೆ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಯಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸಬೇಕು. ದೇವದಾಸಿಯರ ಮಕ್ಕಳು, ಅಂಗವಿಕಲರಾಗಿದ್ದಲ್ಲಿ ಸರ್ಕಾರದಿಂದ ದೃಢೀಕರಿಸಿದ ಪ್ರಮಾಣಪತ್ರ, ಪರಿತ್ಯಕ್ತೆ ಎಂದು ಗ್ರಾಪಂನಿಂದ ನೀಡಿದ ಪತ್ರ, ಯೋಜನಾ ನಿರಾಶ್ರಿತರಾಗಿದ್ದಲ್ಲಿ ತಹಸೀಲ್ದಾರ್‍ರಿಂದ ಪಡೆದ ಪತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬಹುದು. ಈ ಪ್ರಮಾಣಪತ್ರಗಳನ್ನು ಆಯಾ ಮೀಸಲಾತಿಗೆ ಪರಿಗಣಿಸಲಾಗುತ್ತದೆ.
ವಿದ್ಯಾರ್ಹತೆ:ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ, ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ, ಗರಿಷ್ಠ 9ನೇ ತರಗತಿ. ಕನ್ನಡ ಭಾಷೆ ಜ್ಞಾನ ಅವಶ್ಯ. ಎಸ್ಸೆಸ್ಸೆಲ್ಸಿಯಲ್ಲಿ ಗರಿಷ್ಠ 625, ಕನಿಷ್ಠ 219 ಅಂಕ ಪಡೆದಿರಬೇಕು.
ವಯೋಮಿತಿ:8.2.2021ಕ್ಕೆ ಕನಿಷ್ಠ 18ವರ್ಷ, ಗರಿಷ್ಠ 35 ವರ್ಷ. ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ಇದೆ.
ಆದ್ಯತೆ:ವಿದ್ಯಾರ್ಹತೆ, ವಯೋಮಿತಿ, ಆಸಿಡ್ ದಾಳಿಗೆ ತುತ್ತಾದವರು, ಇಲಾಖೆಯ ಸಂಸ್ಥೆಗಳಲ್ಲಿ ಹಾಗೂ ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದವರಿಗೆ, ವಿಧವೆಯರಿಗೆ, ಸ್ಥಳೀಯರಿಗೆ ಆದ್ಯತೆ ನೀಡಿ ಆಯ್ಕೆ ಮಾಡಲಾಗುವುದು.
ಗೌರವಧನಈ ನೇಮಕಾತಿಗಳು ಗೌರವಧನ ಆಧಾರಿತವಾಗಿವೆ. ಕಾರ್ಯಕರ್ತೆಗೆ ಮಾಸಿಕ 10,000 ರೂ, ಮಿನಿ ಅಂಗನವಾಡಿ ಕಾರ್ಯಕರ್ತೆಗೆ 5,750 ರೂ., ಸಹಾಯಕಿಯರಿಗೆ 5,000 ರೂ. ವೇತನ ನಿಗದಿಯಾಗಿದೆ.
ಅರ್ಜಿ ಸಲ್ಲಿಸಲು ಕೊನೇ ದಿನ: 30.3.2021ಅಧಿಸೂಚನೆಗೆ:https://bit.ly/2MDDyiGಮಾಹಿತಿಗೆ:https://anganwadirecruit.kar.nic.in
ಹೆಚ್ಚಿನ ಉದ್ಯೋಗ ಸುದ್ದಿಗೆ ಕ್ಲಿಕ್ಕಿಸಿ:
https://www.vijayavani.net/category/%e0%b2%89%e0%b2%a6%e0%b3%8d%e0%b2%af%e0%b3%8b%e0%b2%97-%e0%b2%ae%e0%b2%bf%e0%b2%a4%e0%b3%8d%e0%b2%b0/
ಕೇಂದ್ರ ಸರ್ಕಾರದ ಸಚಿವಾಲಯಗಳಲ್ಲಿ ಉನ್ನತ ಪದವೀಧರರಿಗೆ ಉದ್ಯೋಗ: 89 ಹುದ್ದೆಗಳು ಖಾಲಿ

ಕೇಂದ್ರ ಸರ್ಕಾರದ ಉದ್ಯೋಗ ಆಕಾಂಕ್ಷಿಗಳಾ? ಇಲ್ಲಿದೆ 152 ಹುದ್ದೆಗಳು- ₹2 ಲಕ್ಷಕ್ಕೂ ಅಧಿಕ ಸಂಬಳ

ರಾಷ್ಟ್ರೀಯ ಮುಕ್ತ ಶಾಲೆಯಲ್ಲಿದೆ ಹಲವಾರು ಹುದ್ದೆ- ನೇರ ಸಂದರ್ಶನದಿಂದ ಪಡೆಯಿರಿ ಉದ್ಯೋಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 3 =
Remember me
