ನವದೆಹಲಿ:ರಾಮಮಂದಿರಕ್ಕೆ ಭೂಮಿಪೂಜೆ ನೆರವೇರಿದ ನಂತರ ಶತ ಶತಮಾನದ ಕನಸುಗಳು ನನಸಾಗಿರುವ ಬೆನ್ನಲ್ಲೇ ಕೆಲವು ಮುಸ್ಲಿಂ ಸಂಘಟನೆಗಳಿಂದ ಪ್ರಚೋದನಕಾರಿ ಹೇಳಿಕೆಗಳು ಶುರುವಾಗಿದೆ.
ನಿನ್ನೆಯಷ್ಟೇ ಅಲ್ಲಿ ಹಿಂದೆಯೂ ಬಾಬರಿ ಮಸೀದಿ ಇತ್ತು, ಮುಂದೆಯೂ ಇರಲಿದೆ- ಯಾವ ತೀರ್ಪೂ ಲೆಕ್ಕಕ್ಕಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ಸಂಘಟನೆಯ ಅಧ್ಯಕ್ಷ ಟ್ವೀಟ್‌ ಮಾಡಿರುವ ಬೆನ್ನಲ್ಲೇ ಇದೀಗ ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ರಾಮಮಂದಿರವನ್ನು ನೆಲಸಮ ಮಾಡಿ ಅಲ್ಲಿ ಮಸೀದಿಯನ್ನು ಕಟ್ಟುವುದಾಗಿ ಟ್ವಿಟರ್‌ನಲ್ಲಿ ಸಾಜಿದ್‌ ರಶೀದಿ ಹೇಳಿದ್ದಾರೆ.
Islam says a mosque will always be a mosque. It can't be broken to build something else. We believe it was, and always will be a mosque. Mosque wasn't built after demolishing temple but now maybe temple will be demolished to build mosque: Sajid Rashidi, Pres, All India Imam Assnpic.twitter.com/DzlbYQ3qdm
— ANI (@ANI)August 6, 2020

ಮಸೀದಿಯ ಯಾವಾಗಲೂ ಮಸೀದಿಯಾಗಿಯೇ ಇರಬೇಕು ಎಂದು ಇಸ್ಲಾಂ ಧರ್ಮ ಹೇಳುತ್ತದೆ. ಮಸೀದಿ ಜಾಗದಲ್ಲಿ ಬೇರೆ ಏನನ್ನೇ ನಿರ್ಮಿಸಲು ನಮ್ಮ ಧರ್ಮ ಬಿಡುವುದಿಲ್ಲ. ಇಲ್ಲಿ ನೀಡಿರುವ ಹೇಳಿಕೆಯನ್ನು ಯಾರೂ ಮುರಿಯಲು ಸಾಧ್ಯವಿಲ್ಲ. ವಿವಾದಿತ ಜಾಗದಲ್ಲಿ ಸದಾ ಇದ್ದುದು ಮಸೀದಿಯೇ ಆದ್ದರಿಂದ ಮುಂದೆಯೂ ಅದು ಮಸೀದಿ ಆಗಿಯೇ ಇರಲಿದೆ ಎಂದಿದ್ದಾರೆ.
ಈ ಹಿಂದೆ ಬಾಬರಿ ಮಸೀದಿಯನ್ನು ಕಟ್ಟುವಾಗ ದೇವಾಲಯವನ್ನು ನೆಲಸಮಗೊಳಿಸಿರಲಿಲ್ಲ. ಆದರೆ ಈಗ ಮಸೀದಿ ಕಟ್ಟಲು ರಾಮಮಂದಿರವನ್ನು ನೆಲಸಮಗೊಳಿಸುತ್ತೇವೆ ಎಂದಿದ್ದಾರೆ ಸಾಜಿದ್‌.
ಅಯೋಧ್ಯೆಯಲ್ಲಿ ನಡೆದ ರಾಮ ದೇವಾಲಯದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನು ಉಲ್ಲಂಘಿಸಿದ್ದಾರೆ ಎಂದಿದ್ದಾರೆ.
ಅಲ್ಲಿ ಹಿಂದೆಯೂ ಬಾಬರಿ ಮಸೀದಿ ಇತ್ತು, ಮುಂದೆಯೂ ಇರಲಿದೆ- ಯಾವ ತೀರ್ಪೂ ಲೆಕ್ಕಕ್ಕಿಲ್ಲ ಎಂದು ಟ್ವೀಟ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 10 =
Remember me
