– ಸಂಪ್ರೋಕ್ಷಣೆ ಬಳಿಕ ಭಕ್ತರಿಗೆ ಅವಕಾಶ
ನವದೆಹಲಿ:ಕೇರಳದ ಪತ್ತನಂತಿಟ್ಟ ಜಿಲ್ಲೆಯ ಪವಿತ್ರ ಕ್ಷೇತ್ರ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಂಡಲ ಮಕರವಿಳಕ್ಕು ಪೂಜೆಗಳು ನಡೆಯುತ್ತಿವೆ. ಅಯ್ಯಪ್ಪನ ದರ್ಶನಕ್ಕಾಗಿ ದೇಶ ವಿದೇಶಗಳಿಂದ ಅಪಾರ ಸಂಖ್ಯೆಯ ಭಕ್ತರು ಶಬರಿಮಲೆಗೆ ಆಗಮಿಸುತ್ತಿದ್ದಾರೆ. ಆದರೆ ಶಬರಿಮಲೆ ಅಯ್ಯಪ್ಪ ದೇವಸ್ಥಾನದ  ಅರ್ಚಕನ ಸಾವಿನಿಂದ ಭಕ್ತರಿಗೆ ದೇವರ ದರ್ಶನಕ್ಕೆ ಕೊಂಚ ಸಮಸ್ಯೆ ಉಂಟಾಗಿದೆ.
ತಮಿಳುನಾಡಿನ ಕುಂಭಕೋಣಂ ಮೂಲದ ರಾಮ್ ಕುಮಾರ್ (43) ಮೃತ ವ್ಯಕ್ತಿ.  ಶಬರಿಮಲೆಯ ಸಹಾಯಕ ಅರ್ಚಕರ (ಕೀಜ್ ಶಾಂತಿ) ಸಹಾಯಕ ಕುಸಿದು ಬಿದ್ದು ಗುರುವಾರ (ಡಿ 7) ಮೃತಪಟ್ಟಿದ್ದಾರೆ. ನಿಗದಿತ ಸಮಯಕ್ಕಿಂತ ಇಪ್ಪತ್ತು ನಿಮಿಷ ತಡವಾಗಿ ದೇವಸ್ಥಾನ ತೆರೆಯಲಾಯಿತು.
ನಡೆದಿದ್ದೇನು?:ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಸಹಾಯಕ ಅರ್ಚಕ ರಾಮ್ ಕುಮಾರ್ ಇದ್ದಕ್ಕಿದ್ದಂತೆ ಕುಸಿದು ಬಿದ್ದುರು. ತಕ್ಷಣ ಅವರನ್ನು ಸನ್ನಿಧಾನಂ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು 20 ನಿಮಿಷ ತಡವಾಗಿ ಅಯ್ಯಪ್ಪ ದೇವಸ್ಥಾನ ತೆರೆಯಲಾಯಿತು. ಶುದ್ಧೀಕರಣದ ಆಚರಣೆಯ ನಂತರ, ದೇವಾಲಯವನ್ನು ಪುನಃ ತೆರೆಯಲಾಯಿತು. ದೇವಾಲಯವು ತೆರೆಯಲು ಸ್ವಲ್ಪ ಸಮಯ ತೆಗೆದುಕೊಂಡಿತು, ಆದ್ದರಿಂದ ಯಾತ್ರಿಕರು ಬಹಳ ಸಮಯ ಕಾಯಬೇಕಾಯಿತು. ದೇವಸ್ಥಾನದ ಬಾಗಿಲು ತೆರೆಯಲು ವಿಳಂಬವಾಯಿತು. ಇದರಿಂದ ಅಯ್ಯಪ್ಪನ ದರ್ಶನಕ್ಕೆ ಭಕ್ತರು ದೇವಸ್ಥಾನದ ಹೊರಗೆ ಬಹಳ ಹೊತ್ತು ಕಾಯುತ್ತಿದ್ದರು.
ಮತ್ತೊಂದೆಡೆ ಅಯ್ಯಪ್ಪ ಸನ್ನಿಧಾನದಲ್ಲಿ ಜನಜಂಗುಳಿ ಇದೆ. ಟ್ರಾಫಿಕ್ ನಿಯಂತ್ರಣಕ್ಕೆ ತಕ್ಷಣ ಕ್ರಮಕೈಗೊಳ್ಳುವಂತೆ ಪತ್ತನಂತಿಟ್ಟ ಜಿಲ್ಲಾಧಿಕಾರಿ ಹಾಗೂ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ಈಗಾಗಲೇ ಆದೇಶ ನೀಡಿದೆ. ಕಳೆದ ಕೆಲ ದಿನಗಳಿಂದ ಅಯ್ಯಪ್ಪನ ದರ್ಶನಕ್ಕಾಗಿ ಭಕ್ತರು 10 ಗಂಟೆಗೂ ಹೆಚ್ಚು ಕಾಲ ಕಾಯುತ್ತಿದ್ದಾರೆ. ಈ ಪರಿಸ್ಥಿತಿಯನ್ನು ಹತೋಟಿಗೆ ತರಲು ಕ್ರಮಕೈಗೊಳ್ಳುವಂತೆ ನ್ಯಾಯಾಲಯ ಆದೇಶಿಸಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − fifteen =
Remember me
