ನವದೆಹಲಿ:ಭಾರತೀಯ ಕುಸ್ತಿ ಫೆಡರೇಷನ್​ನ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್, ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕ್ರೀಡಾಪಟುಗಳು ದೆಹಲಿಯಲ್ಲಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಕುಸ್ತಿಪಟುಗಳಾದ ಬಜರಂಗ್​ ಪೂನಿಯಾ, ಸಾಕ್ಷಿ ಮಲಿಕ್​, ವಿನೇಶ್​ ಪೋಗಟ್ ಸೋಮವಾರದಿಂದ ತಮ್ಮ ಕೆಲಸಕ್ಕೆ ಮರಳಲಿದ್ದಾರೆ ಎಂದು ವರದಿಯಾಗಿದೆ.
ಭಾರತೀಯ ರೈಲ್ವೆಯಲ್ಲಿ ಈ ಮೂವರು ಕಾರ್ಯ ನಿರ್ವಹಿಸುತ್ತಿದ್ದು ತಮ್ಮ ಕೆಲಸಕ್ಕೆ ವರದಿ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಇದಕ್ಕೂ ಕೆಲ ಹೊತ್ತಿನ ಮುನ್ನ ಕುಸ್ತಿಪಟುಗಳು​ ಪ್ರತಿಭಟನೆಯಿಂದ ಹಿಂದೆ ಸರಿಯುತ್ತಿದ್ದಾರೆ ಎಂಬ ವದಂತಿ ಜೋರಾಗಿ ಹಬ್ಬಿತ್ತು.
ಇದನ್ನೂ ಓದಿ:ಅಪಾರ್ಟ್‌ಮೆಂಟ್‌ಗಾಗಿ ಕೆರೆ ಮಧ್ಯೆ ರಸ್ತೆ! ಈ ಐಡಿಯಾ ಕೊಟ್ಟವರು ಯಾರು? ಡಿಕೆಶಿ ಪ್ರಶ್ನೆ
ಈ ಕುರಿತು ಟ್ವೀಟ್​ ಮಾಡಿರುವ ಸಾಕ್ಷಿ ಮಲಿಕ್​ ನ್ಯಾಯಕ್ಕಾಗಿ ನಡೆಸುತ್ತಿರುವ ಹೋರಾಟದಿಂದ ನಾವು ಹಿಂದೆ ಸರಿಯುವ ಮಾತಿಲ್ಲ. ಪ್ರತಿಭಟನೆಯ ಜೊತೆಗೆ ನಾನು ರೈಲ್ವೆಯಲ್ಲಿನ ನನ್ನ ಕೆಲಸಕ್ಕೆ ಮರಳುತ್ತಿದ್ದೇನೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ನೀಡಿದ್ದಾರೆ.
ಕುಸ್ತಿಪಟು ಬಜರಂಗ್​ ಪೂನಿಯಾ ಟ್ವೀಟ್​ ಮಾಡಿ ಪ್ರತಿಭಟನೆಯಿಂದ ನಾವು ಹಿಂಪಡಯುತ್ತಿದ್ದೇವೆ ಎಂಬ ವದಂತಿಗಳಿಗೆ ಕಿವಿಗೊಡಬೇಡಿ. ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ FIR ಹಿಂಪಡೆಯುತ್ತಾರೆ ಎಂಬ ವಿಚಾರವು ಸತ್ಯಕ್ಕೆ ದೂರವಾದ ಮಾತು. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ತಿಳಿಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − two =
Remember me
