ನವದೆಹಲಿ:ಪರೀಕ್ಷೆಗೂ ಮುನ್ನ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿ ಬಂದ ನಂತರ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಪಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ( ಜುಲೈ 29) ರದ್ದುಪಡಿಸಿದೆ.
ಇದನ್ನೂ ಓದಿ:ಕಬಿನಿಗೆ ಬಾಗೀನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್!
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು ವಿಚಾರಣೆಗೆ ನಿರಾಕರಿಸುತ್ತಿರುವುದು ಅರ್ಜಿಯಲ್ಲಿರುವ ಮನವಿಯ ಕಾರಣದಿಂದ ಅಲ್ಲ. ಸಂತ್ರಸ್ತ ವಿದ್ಯಾರ್ಥಿಗಳ ಬದಲಾಗಿ ವಕೀಲರು ಪಿಐಎಲ್ ಸಲ್ಲಿಸಿರುವುದರಿಂದ ಎಂದು ಹೇಳಿದೆ.
“ನೀವು (ವಕೀಲರು) ಏಕೆ ಬಂದಿದ್ದೀರಿ? ವಿದ್ಯಾರ್ಥಿಗಳೇ ಇಲ್ಲಿಗೆ ಬರಲಿ” ಎಂದು ಸಿಜೆಐ ವಕೀಲರಿಗೆ ತರಾಟೆಗೆ ತೆಗೆದುಕೊಂಡಿತು. ಕಾನೂನು ವಿಷಯಗಳತ್ತ ಗಮನಹರಿಸಿ ಮತ್ತು ಇಂತಹ ವಿಷಯಗಳನ್ನು ಸಂತ್ರಸ್ತರಿಗೆ ಬಿಟ್ಟುಬಿಡಿ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ವಕೀಲ ಉಜ್ಜವಲ್ ಗೌರ್ ಅವರಿಗೆ ನ್ಯಾಯಪೀಠವು ತಿಳಿಸಿತು.
ಯುಜಿಸಿ-ನೆಟ್ ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿರಬಹುದು ಎಂಬ ಒಳಹರಿವಿನ ನಂತರ ಅದನ್ನು ರದ್ದುಗೊಳಿಸುವ ಕೇಂದ್ರ ಶಿಕ್ಷಣ ಸಚಿವಾಲಯ ಜೂನ್ 19 ರಂದು ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದು ಮಾಡಿ ಪ್ರಕರಣದ ತನಿಖೆಯ ಹೊಣೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು.
ನರ್ಮದಾ ಬಚಾವೊ ಹೋರಾಟಗಾರ್ತಿ ಮೇಧಾ ಪಾಟ್ಕರ್​ಗೆ ವಿಧಿಸಿದ್ದ ಜೈಲು ಶಿಕ್ಷೆ ಅಮಾನತು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 + seventeen =
Remember me
