ನವದೆಹಲಿ: ದೆಹಲಿಯಲ್ಲಿ 1984ರಲ್ಲಿ ನಡೆದ ಸಿಖ್​ ವಿರೋಧಿ ದಂಗೆ ಪ್ರಕರಣದ ಅಪರಾಧಿ ಕಾಂಗ್ರೆಸ್ಸಿನ ಮಾಜಿ ನಾಯಕ ಸಜ್ಜನ್ ಕುಮಾರ್​ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್​ ತಳ್ಳಿಹಾಕಿದೆ. ಅವರು ಆರೋಗ್ಯದ ನೆಲೆಯಲ್ಲಿ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ಕ್ಷಮಿಸಿ ಈ ಅರ್ಜಿಯನ್ನು ನಾವು ಪರಿಗಣಿಸಲಾಗದು. ತಿರಸ್ಕರಿಸಿದ್ದೇವೆ ಎಂದು ಮುಖ್ಯನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ನ್ಯಾಯಪೀಠ ಶುಕ್ರವಾರ ಹೇಳಿತು. ಸಜ್ಜನ್ ಕುಮಾರ್ ಪರ ಹಿರಿಯ ನ್ಯಾಯವಾದಿ ವಿಕಾಸ್ ಸಿಂಗ್ ಕೋರ್ಟ್​ಗೆ ಹಾಜರಾಗಿದ್ದು, ಸಜ್ಜನ್ ಕುಮಾರ್ ಕಳೆದ 20 ತಿಂಗಳಿಂದ ಜೈಲಿನಲ್ಲಿದ್ದು 16 ಕಿಲೋ ತೂಕ ಕಳೆದುಕೊಂಡಿದ್ದಾರೆ. ಆರೋಗ್ಯ ಸುಧಾರಿಸುವುದಕ್ಕೆ ಜಾಮೀನು ನೀಡಬೇಕು ಎಂದು ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ:ಮತ್ತೊಂದು ಐಎಂಎ ಪ್ರಕರಣವಿದು…! ಅಧಿಕ ಬಡ್ಡಿ ಆಮಿಷ; 2,000 ಕೋಟಿ ರೂ. ಸಂಗ್ರಹಿಸಿ ಮೋಸ
ಆದರೆ, ಈ ಅರ್ಜಿಯನ್ನು ದಂಗೆಯ ಸಂತ್ರಸ್ತರ ಪರ ನ್ಯಾಯವಾದಿ ಎಚ್​.ಎಸ್.ಫೂಲ್ಕಾ ಅವರು ವಿರೋಧಿಸಿದ್ದಲ್ಲದೆ, ಸಜ್ಜನ್ ಕುಮಾರ್ ಅವರಿಗೆ ಅಗತ್ಯವಿರುವ ಜೈಲಿನ ಚಿಕಿತ್ಸೆ ಆಸ್ಪತ್ರೆಯಲ್ಲಿ ದೊರೆಯುತ್ತಿದೆ ಎಂದು ವಾದಿಸಿದ್ದರು. ಸಜ್ಜನ್ ಕುಮಾರ್ ಅವರಿಗೆ 2018ರ ಡಿಸೆಂಬರ್​ 17ರಂದು ದೆಹಲಿ ಹೈ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. (ಏಜೆನ್ಸೀಸ್)
12ನೇ ತರಗತಿ ಪರೀಕ್ಷೆ ಮುಂದೂಡುವ ಅರ್ಜಿಗೆ ಸಿಬಿಎಸ್​ಇ ವಿರೋಧ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 − 13 =
Remember me
