ನವದೆಹಲಿ: ನಿರ್ಭಯಾ ಕೇಸ್​ನ ನಾಲ್ವರು ಅಪರಾಧಿಗಳ ಪೈಕಿ ವಿನಯ್ ಶರ್ಮಾ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಆತ ಸಲ್ಲಿಸಿದ್ದ ದಯಾ ಅರ್ಜಿ ತಿರಸ್ಕರಿಸುವಂತೆ ಶಿಫಾರಸು ಮಾಡಬೇಕೆಂಬ ಮನವಿಯ ಅರ್ಜಿ ಅದಾಗಿತ್ತು.
ನ್ಯಾಯಪೀಠದಲ್ಲಿ ಗುರುವಾರ ವಿಚಾರಣೆ ಆರಂಭವಾದ ಕೂಡಲೇ ಶರ್ಮಾ ಪರ ವಕೀಲ ಎ.ಪಿ.ಸಿಂಗ್​ ಅವರು ಶರ್ಮಾ ಸಲ್ಲಿಸಿದ್ದ ದಯಾ ಅರ್ಜಿ ತಿರಸ್ಕರಿಸಬೇಕೆಂಬ ಮನವಿಗೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್​ ಮತ್ತು ದೆಹಲಿಯ ಗೃಹ ಸಚಿವರು ಸಹಿ ಹಾಕುತ್ತಿಲ್ಲ ಎಂದು ಆರೋಪ ಮಾಡಿದರು.
ಆದಾಗ್ಯೂ, ನ್ಯಾಯಮೂರ್ತಿಗಳಾದ ಆರ್. ಬಾನುಮತಿ, ಅಶೋಕ್ ಭೂಷಣ್​, ಎ.ಎಸ್.ಬೋಪಣ್ಣ ಅವರನ್ನೊಳಗೊಂಡ ನ್ಯಾಯಪೀಠ ದಾಖಲೆ ಪರಿಶೀಲಿಸಿ, ಲೆಫ್ಟಿನೆಂಟ್ ಗವರ್ನರ್ ಮತ್ತು ಗೃಹ ಸಚಿವರು ಸಹಿ ಹಾಕಿರುವುದನ್ನು ಖಾತರಿ ಪಡಿಸಿಕೊಂಡಿತು.
ರಾಷ್ಟ್ರಪತಿಗಳು ತರಾತುರಿಯಲ್ಲಿ ದಯಾ ಅರ್ಜಿ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಶರ್ಮಾ ತನ್ನ ವಕೀಲರ ಮೂಲಕ ಮಂಗಳವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ. ತರಾತುರಿಯಲ್ಲಿ ತಿರಸ್ಕರಿಸಿರುವುದು ಸಂವಿಧಾನದ ಸಾರದ ಪ್ರಕಾರ ಇರುವುದಿಲ್ಲ ಎಂದು ವಾದ ಮಂಡಿಸಲಾಗಿತ್ತು. (ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
