ನವದೆಹಲಿ:ಕಾಂಗ್ರೆಸ್ ಯಾವಾಗಲೂ ದಲಿತರು, ಹಿಂದುಳಿದವರು, ಬುಡಕಟ್ಟು ಜನಾಂಗದವರ ವಿರುದ್ಧವಾಗಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಜವಾಹರಲಾಲ್ ನೆಹರು ಅವರು ಉದ್ಯೋಗದಲ್ಲಿ ಯಾವುದೇ ರೀತಿಯ ಮೀಸಲಾತಿಗೆ ಒಲವು ತೋರಿರಲಿಲ್ಲ ಎಂದು ಹೇಳಿದ್ದಾರೆ. ಉದ್ಯೋಗಗಳಲ್ಲಿ ಎಸ್‌ಸಿ/ಎಸ್‌ಟಿ/ಒಬಿಸಿ ಸಮುದಾಯದವರು ಮೀಸಲಾತಿ ಪಡೆದರೆ, ಆಗ ಸರ್ಕಾರಿ ಕೆಲಸದ ಗುಣಮಟ್ಟ ಕುಸಿಯುತ್ತದೆ ಎಂದು ನೆಹರೂ ಹೇಳುತ್ತಿದ್ದುದನ್ನು ಮೋದಿ ಪ್ರಸ್ತಾಪಿಸಿದ್ದಾರೆ.
ಬುಧವಾರ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದ ಮೋದಿ ಅವರು, ಮಾಜಿ ಪ್ರಧಾನಿ ನೆಹರು ಅವರು ಅಂದಿನ ಮುಖ್ಯಮಂತ್ರಿಗಳಿಗೆ ಬರೆದ ಪತ್ರವನ್ನು ಓದಿದರು.
“ನಾನು ಯಾವುದೇ ರೀತಿಯ ಮೀಸಲಾತಿಯನ್ನು ಇಷ್ಟಪಡುವುದಿಲ್ಲ; ವಿಶೇಷವಾಗಿ ಸರ್ಕಾರಿ ಸೇವೆಗಳಲ್ಲಿ . ಅಸಮರ್ಥತೆ ಮತ್ತು ಎರಡನೇ ದರ್ಜೆಯ ಮಾನದಂಡಗಳಿಗೆ ಕಾರಣವಾಗುವ ಯಾವುದನ್ನಾದರೂ ನಾನು ಬಲವಾಗಿ ವಿರೋಧಿಸುತ್ತೇನೆ” ಎಂದು ನೆಹರು ಅವರು ಪತ್ರದಲ್ಲಿ ಬರೆದಿರುವುದನ್ನು ಮೋದಿ ಉಲ್ಲೇಖಿಸಿದರು.
” ಅವರು ಅದನ್ನು (ಮೀಸಲಾತಿಯನ್ನು) ಹುಟ್ಟಿನಿಂದಲೇ ವಿರೋಧಿಸುತ್ತಾರೆ ಎಂದು ಅದಕ್ಕಾಗಿಯೇ ನಾನು ಹೇಳುತ್ತೇನೆ … ಆ ಸಮಯದಲ್ಲಿ ಸರ್ಕಾರವು ನೇಮಕಾತಿ ಮಾಡಿ ಮತ್ತು ಕಾಲಕಾಲಕ್ಕೆ ಬಡ್ತಿ ನೀಡಿದ್ದರೆ, ಅವರು ಇಂದು ಇಲ್ಲಿ ಇರುತ್ತಿದ್ದರೆ” ಎಂದು ಪ್ರಧಾನಿ ಹೇಳಿದರು.
ಜೂನ್ 27, 1961 ರಂದು ಜವಾಹರಲಾಲ್ ನೆಹರು ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರವನ್ನು ಮೋದಿ ಉಲ್ಲೇಖಿಸಿದರು. ಹಿಂದುಳಿದ ವರ್ಗಗಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಅವರನ್ನು ಸಬಲೀಕರಣಗೊಳಿಸಬೇಕಾಗಿದೆ, ಆದರೆ, ಜಾತಿ ಆಧಾರಿತ ಉದ್ಯೋಗಗಳನ್ನು ಮೀಸಲಿಡುವ ಮೂಲಕ ಅಲ್ಲ ಎಂದು ನೆಹರು ಅವರು ಪತ್ರದಲ್ಲಿ ಬರೆದಿರುವುದನ್ನು ಮೋದಿ ಹೇಳಿದರು.
ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿಗಳಿಗೆ) ಸಂಪೂರ್ಣ ಮೀಸಲಾತಿ ನೀಡದ ಕಾಂಗ್ರೆಸ್ ಸಾಮಾಜಿಕ ನ್ಯಾಯವನ್ನು ಬೋಧಿಸಬಾರದು ಎಂದೂ ಪ್ರಧಾನಿ ಮೋದಿ ಹೇಳಿದರು.
‘‘ಒಬಿಸಿಗೆ ಯಾವತ್ತೂ ಸಂಪೂರ್ಣ ಮೀಸಲಾತಿ ನೀಡದ ಕಾಂಗ್ರೆಸ್ ಸಾಮಾನ್ಯ ವರ್ಗದ ಬಡವರಿಗೆ ಮೀಸಲಾತಿ ನೀಡಲಿಲ್ಲ, ಬಾಬಾ ಸಾಹೇಬರನ್ನು ಭಾರತ ರತ್ನಕ್ಕೆ ಅರ್ಹರೆಂದು ಪರಿಗಣಿಸದ ಕಾಂಗ್ರೆಸ್ ತನ್ನ ಕುಟುಂಬಕ್ಕೆ ಮಾತ್ರ ಭಾರತ ರತ್ನ ನೀಡುತ್ತಲೇ ಇದೆ. ಸಾಮಾಜಿಕ ನ್ಯಾಯದ ಪಾಠ, ನಾಯಕರಾಗಿ ಯಾವುದೇ ಗ್ಯಾರಂಟಿ ಇಲ್ಲದವರು ಮೋದಿಯವರ ಖಾತರಿಯ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ” ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.
ಕಳೆದ ಮೂರು ದಿನಗಳಲ್ಲಿ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಲು ನೆಹರು ಅವರ ವಿಷಯ ಪ್ರಸ್ತಾಪಿಸಿರುವುದು ಇದು ಎರಡನೇ ಬಾರಿಯಾಗಿದೆ.
ಸೋಮವಾರ, ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಜವಾಹರಲಾಲ್ ನೆಹರು ಅವರು ತಮ್ಮ ಅಮೆರಿಕದ ಮತ್ತು ಚೀನಾದ ಸಹವರ್ತಿಗಳಿಗೆ ಹೋಲಿಸಿದರೆ ಭಾರತೀಯರು ಸೋಮಾರಿಗಳು ಮತ್ತು ಕಡಿಮೆ ಬುದ್ಧಿವಂತಿಕೆ ಹೊಂದಿದ್ದಾರೆಂದು ಭಾವಿಸಿದ್ದರು ಎಂದು ಹೇಳಿದ್ದರು.
ಪ್ರಧಾನಿ ನೆಹರೂ ಅವರು ಕೆಂಪು ಕೋಟೆಯಿಂದ ಹೇಳಿದ್ದನ್ನು ನಾನು ಓದುತ್ತೇನೆ. ‘ಭಾರತೀಯರಿಗೆ ಸಾಮಾನ್ಯವಾಗಿ ತುಂಬಾ ಕಷ್ಟಪಟ್ಟು ಕೆಲಸ ಮಾಡುವ ಅಭ್ಯಾಸವಿಲ್ಲ, ನಾವು ಯುರೋಪ್ ಅಥವಾ ಜಪಾನ್ ಅಥವಾ ಚೀನಾ ಅಥವಾ ರಷ್ಯಾ ಅಥವಾ ಅಮೆರಿಕದ ಜನರಂತೆ ನಾವು ಕೆಲಸ ಮಾಡುವುದಿಲ್ಲ” ಎಂದು ನೆಹರು ಆಗ ಹೇಳಿದ್ದರು ಎಂದು ಮೋದಿ ಉಲ್ಲೇಖಿಸಿದ್ದರು,
ಇಂದಿರಾ ಗಾಂಧಿಯವರ ಚಿಂತನೆಯೂ ಭಿನ್ನವಾಗಿಲ್ಲ ಎಂದು ಹೇಳಿದ ಪ್ರಧಾನಿ ಮೋದಿ, ಭಾರತೀಯರು ಕಷ್ಟಗಳಿಂದ ಓಡಿಹೋಗುತ್ತಾರೆ ಎಂಬ ಮಾಜಿ ಪ್ರಧಾನಿಯವರ ಹೇಳಿಕೆಯನ್ನು ಪ್ರಸ್ತಾಪಿಸಿದರು.

ಹಿಂಡೆನ್‌ಬರ್ಗ್ ವಿವಾದ ಪೂರ್ವ ಮಟ್ಟ ಸಮೀಪಿಸಿದ ಅದಾನಿ ಷೇರು: ಇನ್ನೊಂದೇ ತಿಂಗಳಲ್ಲಿ 1,000-1,500 ರೂ. ಏರುತ್ತದೆ ಎನ್ನುತ್ತಾರೆ ಮಾರುಕಟ್ಟೆ ತಜ್ಞರು

291ರಿಂದ 2 ರೂಪಾಯಿಗೆ ಕುಸಿದಿದ್ದ ಟಾಟಾ ಷೇರಿಗೆ ಮತ್ತೆ ಬೇಡಿಕೆ: ಬುಧವಾರ 8% ಹೆಚ್ಚಳದೊಂದಿಗೆ 98 ರೂಪಾಯಿಗೆ ಏರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + three =
Remember me
