ನವದೆಹಲಿ: ಅಕ್ಟೋಬರ್​ 15ರ ಬಳಿಕ ಶಾಲೆಗಳನ್ನು ತೆರೆಯಲು ನಿರ್ಧರಿಸಬಹುದು ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ ಬಳಿಕ ಶಾಲೆಗಳ ಆರಂಭ ಕುರಿತು ಎಲ್ಲ ರಾಜ್ಯಗಳಲ್ಲಿ ಚಿಂತನೆ ಶುರುವಾಗಿದೆ.
ಕರ್ನಾಟಕದಲ್ಲೂ ಶಾಲೆ ಶುರು ಮಾಡಬೇಕೋ ಬೇಡವೋ ಎಂಬ ಬಗ್ಗೆ ಈಗಾಗಲೇ ಅಭಿಪ್ರಾಯ ಕೇಳಲಾಗಿದ್ದು, ಸರ್ಕಾರವೂ ಆ ಕುರಿತು ಭಾರಿ ಚರ್ಚೆಯನ್ನು ನಡೆಸುತ್ತಿದೆ. ಈ ನಡುವೆ ಬಹಳಷ್ಟು ಪಾಲಕರು ಸದ್ಯಕ್ಕೆ ಶಾಲೆಗಳನ್ನು ತೆರೆಯುವುದು ಬೇಡ ಎಂಬ ಸಲಹೆ ನೀಡಿದ್ದಾರೆ.
ಇದನ್ನು ಓದಿ:ಶಾಲೆ ಆರಂಭಕ್ಕೆ ಬೇಡ ತರಾತುರಿ; ಪಾಲಕರ ಒಕ್ಕೊರಲ ಅಭಿಪ್ರಾಯ
ಈ ಮಧ್ಯೆ ಶಾಲೆಗಳನ್ನು ಪುನಃ ಆರಂಭಿಸುವ ಕುರಿತು ದೆಹಲಿ ಸರ್ಕಾರ ತನ್ನ ನಿಲುವನ್ನು ಪ್ರಕಟಿಸಿದೆ. ದೆಹಲಿಯಲ್ಲಿ ಸರ್ಕಾರಿ ಹಾಗೂ ಖಾಸಗಿಯ ಎಲ್ಲ ಶಾಲೆಗಳು ಅಕ್ಟೋಬರ್​ 31ರ ವರೆಗೂ ಮುಚ್ಚಿರಲಿವೆ. ಈ ಬಗ್ಗೆ ಸದ್ಯದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಅಲ್ಲಿನ ಶಿಕ್ಷಣ ಸಚಿವ ಮನಿಷ್ ಸಿಸೋಡಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 17 =
Remember me
