ಬೀದರ್‌:ಪ್ರಧಾನಿ ಮೋದಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ನಾಟಕ ಮಾಡಿ ಭಾರಿ ವಿವಾದ ಸೃಷ್ಟಿಸಿದ್ದ ಇಲ್ಲಿಯ ಶಾಹೀನ್‌ ಪ್ರಾಥಮಿಕ ಶಾಲೆಯೀಗ ಕ್ವಾರಂಟೈನ್‌ ಕೇಂದ್ರವಾಗಿ ಪರಿವರ್ತನೆಗೊಂಡಿದೆ.
ಈ ಶಾಲೆಯನ್ನು ಕ್ವಾರಂಟೈಸ್‌ ಕೇಂದ್ರವಾಗಿಸಲು ಬೀದರ್‌ ಜಿಲ್ಲಾಡಳಿತವು ಶಾಹೀನ್‌ ಗ್ರೂಪ್‌ ಆಫ್‌ ಇನ್ಸ್‌ಟಿಟ್ಯೂಟ್‌ನ ಮುಖ್ಯಸ್ಥ ಡಾ. ಅಬ್ದುಲ್‌ ಖಾದೀರ್‌ ಅವರನ್ನು ಮನವಿ ಮಾಡಿಕೊಂಡಿತ್ತು. ಕರೊನಾ ಸೋಂಕು ಶಂಕಿತರನ್ನು ಇಲ್ಲಿ ಇರಿಸುವ ಸಂಬಂಧ ಅನುಮತಿ ಕೇಳಲಾಗಿತ್ತು. ಅದಕ್ಕೆ ಅವರು ಒಪ್ಪಿಗೆ ಸೂಚಿಸಿದ್ದರು.
ಈ ಮೊದಲು ಶಂಕಿತರನ್ನು ಬೀದರ್‌ನ ಸರ್ಕಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಾಸ್ಟೆಲ್‌ನಲ್ಲಿ ಇಡಲಾಗಿತ್ತು. ಆದರೆ ಸ್ಥಳೀಯರಿಂದ ಭಾರಿ ಪ್ರತಿರೋಧ ಬಂದ ಹಿನ್ನೆಲೆಯಲ್ಲಿ ಅವರನ್ನು ಬೇರೆಡೆ ಸ್ಥಳಾಂತರ ಮಾಡುವ ಅನಿವಾರ್ಯತೆ ಉಂಟಾಗಿತ್ತು.ನಾವು ಕರೊನಾ ಶಂಕಿತರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದ್ದೇವೆ. ಆಹಾರ, ಮಾಸ್ಕ್‌ ಸೇರಿದಂತೆ ಸಕಲ ಸೌಲಭ್ಯಗಳನ್ನೂ ನೀಡುತ್ತಿದ್ದೇವೆ. ಆರೋಗ್ಯ ಸಿಬ್ಬಂದಿ ಕೂಡ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇಲ್ಲಿ ಕ್ವಾರಂಟೈನ್‌ ಅವಧಿ ಮುಗಿದ ಮೇಲೆ ಅವರನ್ನು ಹೋಮ್‌ ಕ್ವಾರಂಟೈನ್‌ಗೆ ಕಳುಹಿಸಲಾಗುವುದು. ಅಲ್ಲಿಯವರೆಗೆ ಅವರನ್ನು ಶಾಹೀನ್‌ ಪ್ರಾಥಮಿಕ ಶಾಲೆಯಲ್ಲಿ ಇರಿಸಲಾಗುವುದು’ ಎಂದು ಉಪವಿಭಾಗಾಧಿಕಾರಿ ಅಕ್ಷಯ್‌ ಸಿಂಗ್‌ ತಿಳಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ನಾಟಕದ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಮುಹಮ್ಮದ್‌ ಯುಸೂಫ್‌ ರಹೀಂ ಎನ್ನುವವರು ಹಂಚಿಕೊಂಡಿದ್ದರು. ಇದರ ವಿರುದ್ಧ ಸಾಮಾಜಿಕ ಕಾರ್ಯಕರ್ತ ನೀಲೇಶ್‌ ರಕ್ಷಾಳ್‌ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ದೇಶ ದ್ರೋಹ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ. ನಂತರ ಈ ನಾಟಕ ಮಾಡಿದ ತಪ್ಪಿಗೆ ಮುಖ್ಯ ಶಿಕ್ಷಕ ಫರೀದಾ ಬೇಗಂ ಹಾಗೂ ವಿದ್ಯಾರ್ಥಿಯೊಬ್ಬರ ಪಾಲಕರಾದ ಅನುಜಾ ಮಿನ್ಸಾ ಅವರನ್ನು ಬಂಧಿಸಲಾಗಿತ್ತು. ಇವರ ವಿರುದ್ಧ ದೇಶದ್ರೋಹ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ವಿಚಾರಣೆ ನಡೆಯುತ್ತಿದೆ.
ಲಾಕ್​ಡೌನ್​ ಉಲ್ಲಂಘಿಸಿದವರ ವಿರುದ್ಧ ಕೇಸ್​ ದಾಖಲಿಸಿದ್ದಕ್ಕೆ ಸಿಟ್ಟಾದ ನಿವೃತ್ತ ಪೊಲೀಸ್​ ಮಹಾ ನಿರ್ದೇಶಕ ಮಾಡಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 1 =
Remember me
